ಆಸ್ಟ್ರೇಲಿಯದಲ್ಲಿ ಡೇ-ನೈಟ್‌ ಟೆಸ್ಟ್‌ ಆಡಲಿದೆ ಭಾರತ


Team Udayavani, Feb 17, 2020, 6:15 AM IST

PINK-BALL

ಹೊಸದಿಲ್ಲಿ: ಈ ವರ್ಷಾಂತ್ಯ ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡ ಅಲ್ಲಿ ಹಗಲು-ರಾತ್ರಿ ಟೆಸ್ಟ್‌ ಪಂದ್ಯವೊಂದನ್ನು ಆಡಲಿದೆ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ತಿಳಿಸಿದ್ದಾರೆ. ಆದರೆ ಇದರ ಅಧಿಕೃತ ಪ್ರಕಟನೆಯಷ್ಟೇ ಬಾಕಿ ಇದೆ.

“ಆಸ್ಟ್ರೇಲಿಯದ ಯಾವುದೇ ಅಂಗಳದಲ್ಲಿ ಡೇ-ನೈಟ್‌ ಟೆಸ್ಟ್‌ ಆಡಲು ನಾವು ಸಿದ್ಧರಿದ್ದೇವೆ’ ಎಂದು ನಾಯಕ ವಿರಾಟ್‌ ಕೊಹ್ಲಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿರುವುದು ವಿಶೇಷ.

“ಹೌದು, ಮುಂಬರುವ ಆಸ್ಟ್ರೇಲಿಯ ಪ್ರವಾಸದ ವೇಳೆ ಭಾರತ ಡೇ-ನೈಟ್‌ ಟೆಸ್ಟ್‌ ಪಂದ್ಯವೊಂದನ್ನು ಆಡಲಿದೆ. ಇದನ್ನು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸಲಾಗುವುದು’ ಎಂದು ಸೌರವ್‌ ಗಂಗೂಲಿ ತಿಳಿಸಿದರು. ಈ ಪಂದ್ಯ ಅಡಿಲೇಡ್‌ ಅಥವಾ ಪರ್ತ್‌ ನಲ್ಲಿ ನಡೆಯಲಿದೆ.

“ಭಾರತದ ಮುಂದಿನ ಪ್ರತಿಯೊಂದು ಟೆಸ್ಟ್‌ ಸರಣಿ ವೇಳೆಯೂ ಕನಿಷ್ಠ ಒಂದು ಹಗಲು-ರಾತ್ರಿ ಟೆಸ್ಟ್‌ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಪ್ರಯತ್ನಿಸಲಿದೆ. ಅದರಂತೆ ಇಂಗ್ಲೆಂಡ್‌ ಎದುರಿನ ಮುಂಬರುವ ತವರಿನ ಸರಣಿಯ ದ್ವಿತೀಯ ಟೆಸ್ಟ್‌ ಪಂದ್ಯ ಡೇ-ನೈಟ್‌ ಆಗಿರಲಿದೆ’ ಎಂಬುದಾಗಿ ಗಂಗೂಲಿ ಹೇಳಿದರು.

2015ರಿಂದ ಮೊದಲ್ಗೊಂಡು ಈ ತನಕ 14 ಹಗಲು-ರಾತ್ರಿ ಟೆಸ್ಟ್‌ ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ ಆಡಿದ್ದು ಒಂದು ಪಂದ್ಯ ಮಾತ್ರ. ಇದು ಕಳೆದ ವರ್ಷ ಬಾಂಗ್ಲಾದೇಶ ವಿರುದ್ಧ ಕೋಲ್ಕತಾದ “ಈಡನ್‌ ಗಾರ್ಡನ್ಸ್‌’ನಲ್ಲಿ ನಡೆದಿತ್ತು.

ಅಂದು ಆಹ್ವಾನ ತಿರಸ್ಕರಿಸಿದ್ದ ಭಾರತ
ಭಾರತ 2018-19ರ ಆಸ್ಟ್ರೇಲಿಯ ಪ್ರವಾಸದ ವೇಳೆ ಅಡಿಲೇಡ್‌ನ‌ಲ್ಲಿ ಡೇ-ನೈಟ್‌ ಟೆಸ್ಟ್‌ ಪಂದ್ಯವನ್ನು ಆಡಬೇಕಿತ್ತಾದರೂ ಬಿಸಿಸಿಐ “ಕ್ರಿಕೆಟ್‌ ಆಸ್ಟ್ರೇಲಿಯ’ದ ಆಹ್ವಾನವನ್ನು ತಿರಸ್ಕರಿಸಿತ್ತು.

ಈ ವರ್ಷಾರಂಭದ ಏಕದಿನ ಸರಣಿಯ ವೇಳೆ ಆಸ್ಟ್ರೇಲಿಯದ ಕ್ರಿಕೆಟ್‌ ನಿಯೋಗವೊಂದು ಭಾರತಕ್ಕೆ ಬಂದು ಬಿಸಿಸಿಐ ಜತೆ ಹಗಲು-ರಾತ್ರಿ ಟೆಸ್ಟ್‌ ಪಂದ್ಯದ ಆಯೋಜನೆ ಕುರಿತು ಮಾತುಕತೆ ನಡೆಸಿತ್ತು. ಇದಕ್ಕೀಗ ಹಸಿರು ನಿಶಾನೆ ಲಭಿಸಿದಂತಿದೆ.

ವಿರಾಟ್‌ ಕೊಹ್ಲಿ ಆಸಕ್ತಿ
ಆಸ್ಟ್ರೇಲಿಯ ಪ್ರವಾಸದ ವೇಳೆ ಡೇ-ನೈಟ್‌ ಟೆಸ್ಟ್‌ ಪಂದ್ಯವಾಡಲು ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಆಸಕ್ತರಾಗಿದ್ದಾರೆ. ಕಳೆದ ಆಸ್ಟ್ರೇಲಿಯ ಸರಣಿಯ ಏಕದಿನ ಪಂದ್ಯವೊಂದರ ವೇಳೆ ಅವರು ಈ ಕುರಿತು ಹೇಳಿಕೆಯನ್ನೂ ನೀಡಿದ್ದರು. “ಆಸ್ಟ್ರೇಲಿಯದಲ್ಲಿ ಡೇ-ನೈಟ್‌ ಟೆಸ್ಟ್‌ ಆಡಲು ನಾವು ರೆಡಿ. ಅದು ಬ್ರಿಸ್ಬೇನ್‌, ಪರ್ತ್‌… ಎಲ್ಲೇ ಆಗಿರಬಹುದು, ನಮಗೆ ಸಮಸ್ಯೆ ಇಲ್ಲ. ಟೆಸ್ಟ್‌ ಸರಣಿ ವೇಳೆ ಹೊನಲು ಬೆಳಕಿನಲ್ಲಿ ಆಡುವುದು ರೋಮಾಂಚಕಾರಿ ಸಂಗತಿ’ ಎಂದಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.