ಡೇವಿಡ್‌ ವಾರ್ನರ್‌ ‘ಚೀಟರ್‌’!


Team Udayavani, May 11, 2019, 6:00 AM IST

Wa

ಲಂಡನ್‌: ಕ್ರಿಕೆಟಿನ ಬದ್ಧ ಎದುರಾಳಿಗಳು ಯಾರು? ಭಾರತ-ಪಾಕಿಸ್ಥಾನ ಎಂಬುದು ಸಿದ್ಧ ಉತ್ತರ. ಆದರೆ ಇದು ತಪ್ಪು ಎಂದು ಇತಿಹಾಸ ಸಾರುತ್ತದೆ. ಜಾಗತಿಕ ಕ್ರಿಕೆಟಿನ ಅತ್ಯಂತ ಪುರಾತನ ರಾಷ್ಟ್ರಗಳಾದ ಇಂಗ್ಲೆಂಡ್‌-ಆಸ್ಟ್ರೇಲಿಯಗಳೇ ಬದ್ಧ ಎದುರಾಳಿಗಳಾಗಿವೆ ಎಂಬುದನ್ನು ಇದು ಸಾರುತ್ತ ಬಂದಿದೆ. ಇದರ ತೀವ್ರತೆಯನ್ನು ಅರಿಯಬೇಕಾದರೆ ಪ್ರತಿಷ್ಠಿತ ‘ಆ್ಯಶಸ್‌’ ಸರಣಿಯನ್ನು ಗಮನಿಸಬೇಕು.

ಇದೀಗ ವಿಶ್ವಕಪ್‌ ಸರದಿ. ಆಸ್ಟ್ರೇಲಿಯ ತಂಡ ಇನ್ನೂ ಇಂಗ್ಲೆಂಡಿಗೆ ಕಾಲಿಟ್ಟಿಲ್ಲ, ಅಷ್ಟರಲ್ಲಿ ಇಂಗ್ಲೆಂಡ್‌ ಅಭಿಮಾನಿಗಳ ಸಂಘಟನೆಯಾದ ‘ಬಾರ್ಮಿ ಆರ್ಮಿ’ ಕಾಂಗರೂಗಳನ್ನು ಟ್ರೋಲ್ ಮಾಡಲಾರಂಭಿಸಿದೆ. ಇದಕ್ಕೆ ಮೊದಲು ‘ಬಲಿ’ಯಾದವರು ಆರಂಭಕಾರ ಡೇವಿಡ್‌ ವಾರ್ನರ್‌.

ಬೌಲರ್ ಕೈಯಲ್ಲಿ ಸ್ಯಾಂಡ್‌ ಪೇಪರ್‌!
ಬಾರ್ಮಿ ಆರ್ಮಿ ತನ್ನ ಅಧಿಕೃತ ಟ್ವಿಟರ್‌ನಲ್ಲಿ ವಾರ್ನರ್‌ ಅವರ ಜೆರ್ಸಿಯ ಮೇಲೆ ‘ಆಸ್ಟ್ರೇಲಿಯ’ ಶಬ್ದವನ್ನು ತೆಗೆದು ಅದರ ಮೇಲೆ ‘ಚೀಟ್ಸ್‌’ (ಮೋಸ) ಎಂದು ಬರೆದ ಚಿತ್ರವೊಂದನ್ನು ಪೋಸ್ಟ್‌ ಮಾಡಿದೆ. ಜತೆಗೆ ಮಿಚೆಲ್ ಸ್ಟಾರ್ಕ್‌, ನಥನ್‌ ಲಿಯೋನ್‌ ಕೂಡ ‘ಬಾರ್ಮಿ ಆರ್ಮಿ’ಯ ಫೋಟೋ ಶಾಪ್‌ ತಂತ್ರಕ್ಕೆ ವಸ್ತುವಾಗಿದ್ದಾರೆ. ಇವರಿಬ್ಬರ ಕೈಯಲ್ಲೂ ಸ್ಯಾಂಡ್‌ ಪೇಪರ್‌ ನೀಡಿ ನಿಲ್ಲಿಸಲಾಗಿದೆ!

ಇದರ ಕಾರಣವನ್ನು ಎಲ್ಲರೂ ಅರಿಯಬಹುದಾಗಿದೆ. ದಕ್ಷಿಣ ಆಫ್ರಿಕಾ ಎದುರಿನ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ವೇಳೆ ವಾರ್ನರ್‌, ಸ್ಮಿತ್‌ ಮತ್ತು ಬಾನ್‌ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿ ಒಂದು ವರ್ಷದ ನಿಷೇಧಕ್ಕೊಳಗಾಗಿದ್ದರು. ಇದಕ್ಕಾಗಿ ಇಲ್ಲಿ ವಾರ್ನರ್‌ ಟ್ರೋಲ್ ಆಗಿದ್ದಾರೆ. ಹಾಗೆಯೇ ವಿಶ್ವಕಪ್‌ ಪಂದ್ಯಾವಳಿ ವೇಳೆ ಸ್ಟಾರ್ಕ್‌, ಲಿಯೋನ್‌ ಕೂಡ ಸ್ಯಾಂಡ್‌ ಪೇಪರ್‌ ಮೂಲಕ ಚೆಂಡನ್ನು ವಿರೂಪಗೊಳಿಸಬಹುದು ಎಂದು ಬಾರ್ಮಿ ಆರ್ಮಿ ವಿಡಂಬನಾತ್ಮಕವಾಗಿ ಎಚ್ಚರಿಸಿದೆ!

ಇದಕ್ಕೆಲ್ಲ ಸಜ್ಜಾಗಿಯೇ ಬರಲಿದ್ದೇವೆ!
ಇದಕ್ಕೆ ಪ್ರತಿಕ್ರಿಯಿಸಿದ ಆಸೀಸ್‌ ಕೋಚ್ ಜಸ್ಟಿನ್‌ ಲ್ಯಾಂಗರ್‌, ‘ಇದ ಕ್ಕೆಲ್ಲ ನಾವು ಸಿದ್ಧರಾಗಿದ್ದೇವೆ. ಇಂಗ್ಲೆಂಡ್‌ನ‌ಲ್ಲಿ ವಿಮಾನ ಇಳಿದೊಡನೆ ನಮಗೆ ಇಂಥ ಸ್ವಾಗತ ಕಾದಿರುತ್ತದೆಂಬುದು ಗೊತ್ತು. ನಾವು ಇದನ್ನು ಎದುರಿಸಲು ಸನ್ನದ್ಧರಾಗಿರುತ್ತೇವೆ’ ಎಂದಿದ್ದಾರೆ.

Ad

ಟಾಪ್ ನ್ಯೂಸ್

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

Wimbledon 2025; ಕ್ವಾರ್ಟರ್‌ ಫೈನಲ್‌ಗೆ ಜೊಕೋ, ಅನಿಸಿಮೋವಾ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಸಂಜೋಗ್‌ ಗುಪ್ತಾ ಐಸಿಸಿ ನೂತನ ಸಿಇಒ ನೇಮಕ

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

ಅಂಡರ್‌-19 ಏಕದಿನ: ಭಾರತಕ್ಕೆ 7 ವಿಕೆಟ್‌ ಸೋಲು

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

T20I Series; ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.