ಡೇವಿಡ್‌ ವಿಲ್ಲಿ ಬೌಲಿಂಗ್‌ ದಾಳಿಗೆ ಐರ್ಲೆಂಡ್‌ ಗಲಿಬಿಲಿ

ಏಕದಿನದಲ್ಲಿ ಮೊದಲ ಸಲ 5 ವಿಕೆಟ್‌ ಕಿತ್ತ ವಿಲ್ಲಿ ಇಂಗ್ಲೆಂಡಿಗೆ 6 ವಿಕೆಟ್‌ ಗೆಲುವು

Team Udayavani, Aug 1, 2020, 6:26 AM IST

ಡೇವಿಡ್‌ ವಿಲ್ಲಿ ಬೌಲಿಂಗ್‌ ದಾಳಿಗೆ ಐರ್ಲೆಂಡ್‌ ಗಲಿಬಿಲಿ

ಸೌತಾಂಪ್ಟನ್: ವೇಗಿ ಡೇವಿಡ್‌ ವಿಲ್ಲಿ ತಮ್ಮ ಏಕದಿನ ಪುನರಾಗಮನವನ್ನು ಭರ್ಜರಿಯಾಗಿ ಸಾರಿದ್ದಾರೆ.

ಐರ್ಲೆಂಡ್‌ ಎದುರಿನ ಮೊದಲ ಏಕದಿನ ಮುಖಾಮುಖಿಯಲ್ಲಿ 5 ವಿಕೆಟ್‌ ಹಾರಿಸಿದ ಅವರು ಇಂಗ್ಲೆಂಡಿಗೆ 6 ವಿಕೆಟ್‌ಗಳ ಸುಲಭ ಗೆಲುವು ತಂದಿತ್ತು ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ.

ಗುರುವಾರ ರಾತ್ರಿ ನಡೆದ ಐಸಿಸಿ ವಿಶ್ವಕಪ್‌ ಸೂಪರ್‌ ಲೀಗ್‌ ಸರಣಿಯ ಮೊದಲ ಪಂದ್ಯದಲ್ಲಿ ಐರ್ಲೆಂಡ್‌ 44.4 ಓವರ್‌ಗಳಲ್ಲಿ 172 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿಯಿತು.

ವಿಲ್ಲಿ ಸಾಧನೆ 30ಕ್ಕೆ 5 ವಿಕೆಟ್‌. ಜೋಫ್ರ ಆರ್ಚರ್‌ಗಾಗಿ ಕಳೆದ ವರ್ಷದ ವಿಶ್ವಕಪ್‌ ಪಂದ್ಯಾವಳಿಯಿಂದ ಡೇವಿಡ್‌ ವಿಲ್ಲಿ ಅವರನ್ನು ಕೈಬಿಡಲಾಗಿತ್ತು.

ಜವಾಬಿತ್ತ ಇಂಗ್ಲೆಂಡ್‌ 27.5 ಓವರ್‌ಗಳಲ್ಲಿ 4 ವಿಕೆಟಿಗೆ 174 ರನ್‌ ಬಾರಿಸಿ ‘ರಾಯಲ್‌ ಲಂಡನ್‌ ಸಿರೀಸ್‌’ನಲ್ಲಿ 1-0 ಮುನ್ನಡೆ ಸಾಧಿಸಿತು. ಇದು ವಿಶ್ವ ಚಾಂಪಿಯನ್‌ ಕಿರೀಟ ಏರಿಸಿಕೊಂಡ ಬಳಿಕ ಇಂಗ್ಲೆಂಡ್‌ ತವರಲ್ಲಿ ಆಡಿದ ಮೊದಲ ಏಕದಿನ ಪಂದ್ಯವಾಗಿದೆ. ಹಾಗೆಯೇ 2016ರ ಬಳಿಕ ಈ ಅಂಗಳದಲ್ಲಿ ಇಂಗ್ಲೆಂಡ್‌ ಸಾಧಿಸಿದ ಸತತ 6ನೇ ಗೆಲುವಾಗಿದೆ.

28 ರನ್ನಿಗೆ ಬಿತ್ತು 5 ವಿಕೆಟ್‌

ವಿಲ್ಲಿ ದಾಳಿಗೆ ವಿಲವಿಲನೆ ಒದ್ದಾಡಿದ ಐರಿಷ್‌ ಪಡೆ 28 ರನ್‌ ಮಾಡುವಷ್ಟರಲ್ಲಿ ಅರ್ಧದಷ್ಟು ಮಂದಿಯನ್ನು ಕಳೆದುಕೊಂಡಿತು. ಆದರೆ ಕರ್ಟಿಸ್‌ ಕ್ಯಾಂಫ‌ರ್‌ ಮತ್ತು ಆ್ಯಂಡಿ ಮೆಕ್‌ಬ್ರೈನ್‌ 8ನೇ ವಿಕೆಟ್‌ ಜತೆಯಾಟದಲ್ಲಿ 66 ರನ್‌ ಪೇರಿಸಿ ಹೋರಾಟವೊಂದನ್ನು ಪ್ರದರ್ಶಿಸಿದರು. 21 ವರ್ಷದ ಯುವ ಬ್ಯಾಟ್ಸ್‌ಮನ್‌ ಕ್ಯಾಂಫ‌ರ್‌ ಅಜೇಯ 59 ರನ್‌ ಹೊಡೆದರೆ, ಮೆಕ್‌ಬ್ರೈನ್‌ 40 ರನ್‌ ಕೊಡುಗೆ ಸಲ್ಲಿಸಿದರು.

ಇಂಗ್ಲೆಂಡಿನ ಚೇಸಿಂಗ್‌ ಕೂಡ ಆಘಾತಕಾರಿಯಾಗಿತ್ತು. ಜಾಸನ್‌ ರಾಯ್‌ (24), ಬೇರ್‌ಸ್ಟೊ (2), ಜೇಮ್ಸ್‌ ವಿನ್ಸ್‌ (25), ಟಾಮ್‌ ಬ್ಯಾಂಟನ್‌ (11) ವಿಕೆಟ್‌ 78 ರನ್ನಿಗೆ ಉದುರಿ ಹೋಗಿತ್ತು. 5ನೇ ವಿಕೆಟಿಗೆ ಜತೆಗೂಡಿದ ಸ್ಯಾಮ್‌ ಬಿಲ್ಲಿಂಗ್ಸ್‌ (67)-ನಾಯಕ ಇಯಾನ್‌ ಮಾರ್ಗನ್‌ (36) ಮತ್ತೆ ತಂಡಕ್ಕೆ ಹಾನಿ ಆಗದಂತೆ ನೋಡಿಕೊಂಡರು. ಸಿಮಿ ಸಿಂಗ್‌ ಎಸೆತವನ್ನು ಸಿಕ್ಸರ್‌ಗೆ ಬಡಿದಟ್ಟುವ ಮೂಲಕ ಮಾರ್ಗನ್‌ ತಂಡದ ಗೆಲುವನ್ನು ಸಾರಿದರು. ದ್ವಿತೀಯ ಪಂದ್ಯ ಇದೇ ಅಂಗಳದಲ್ಲಿ ಶನಿವಾರ ರಾತ್ರಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌: ಐರ್ಲೆಂಡ್‌-44.4 ಓವರ್‌ಗಳಲ್ಲಿ 172 (ಕ್ಯಾಂಫ‌ರ್‌ ಔಟಾಗದೆ 59, ಮೆಕ್‌ಬ್ರೈನ್‌ 40, ವಿಲ್ಲಿ 30ಕ್ಕೆ 5, ಮಹಮೂದ್‌ 36ಕ್ಕೆ 2 ವಿಕೆಟ್‌). ಇಂಗ್ಲೆಂಡ್‌-27.5 ಓವರ್‌ಗಳಲ್ಲಿ 4 ವಿಕೆಟಿಗೆ 174 (ಬಿಲ್ಲಿಂಗ್ಸ್‌ ಔಟಾಗದೆ 67, ಮಾರ್ಗನ್‌ ಔಟಾಗದೆ 36, ಯಂಗ್‌ 56ಕ್ಕೆ 2 ವಿಕೆಟ್‌).

ಪಂದ್ಯಶ್ರೇಷ್ಠ: ಡೇವಿಡ್‌ ವಿಲ್ಲಿ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.