ಡೇವಿಸ್‌: ತಂಡಕ್ಕೆ ಮರಳಿದ ಭಾಂಬ್ರಿ, ಮೈನೇನಿ; ಪೇಸ್‌ ಔಟ್‌


Team Udayavani, Aug 15, 2017, 2:29 PM IST

15-SPORTS-6.jpg

ಹೊಸದಿಲ್ಲಿ: ಅಗ್ರ ಕ್ರಮಾಂಕದ ಸಿಂಗಲ್ಸ್‌ ಆಟಗಾರ ಯೂಕಿ ಭಾಂಬ್ರಿ ಮತ್ತು ಸಾಕೇತ್‌ ಮೈನೇನಿ ಅವರು ಭಾರತೀಯ ಡೇವಿಸ್‌ ಕಪ್‌ ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ನಿರೀಕ್ಷೆಯಂತೆ ಖ್ಯಾತ ಆಟಗಾರ ಲಿಯಾಂಡರ್‌ ಪೇಸ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. 

ಮುಂದಿನ ತಿಂಗಳು ಕೆನಡ ವಿರುದ್ಧ ನಡೆಯಲಿರುವ ಡೇವಿಸ್‌ ಕಪ್‌ ಹೋರಾಟಕ್ಕಾಗಿ ತಂಡವನ್ನು ಆಯ್ಕೆ ಮಾಡಲಾಗಿದ್ದು ಭಾಂಬ್ರಿ, ಮೈನೇನಿ ಅವರಲ್ಲದೇ ರಾಮ್‌ಕುಮಾರ್‌ ರಾಮನಾಥನ್‌ ಮತ್ತು ರೋಹನ್‌ ಬೋಪಣ್ಣ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತಂಡವನ್ನು ಮಹೇಶ್‌ ಭೂಪತಿ ಮುನ್ನಡೆಸಲಿದ್ದಾರೆ. ಪ್ರಜ್ಞೆàಶ್‌ ಗುಣೇಶ್ವರನ್‌ ಮತ್ತು ಎನ್‌. ಶ್ರೀರಾಮ್‌ ಬಾಲಾಜಿ ಅವರು ಮೀಸಲು ಆಟಗಾರರಾಗಿರುತ್ತಾರೆ.

44ರ ಹರೆಯದ ಪೇಸ್‌ ಕಳೆದ ಎಪ್ರಿಲ್‌ನಲ್ಲಿ ಬೆಂಗಳೂರಿನಲ್ಲಿ ನಡೆದ ಉಜ್ಬೆಕಿಸ್ಥಾನ ವಿರುದ್ಧದ ಡೇವಿಸ್‌ ಕಪ್‌ ಹೋರಾಟದ ವೇಳೆ ಆರು ಸದಸ್ಯರ ತಂಡಕ್ಕೆ ಸೇರ್ಪಡೆಯಾಗಿದ್ದರು. ಆದರೆ ಅಂತಿಮ ನಾಲ್ಕರ ತಂಡದಲ್ಲಿ ಹೊಸ ನಾಯಕ ಭೂಪತಿ ಅವರು ಪೇಸ್‌ ಅವರನ್ನು ಕೈಬಿಟ್ಟಿದ್ದರು. ಇದರಿಂದ ಆಘಾತ ಮತ್ತು ಮುಜುಗರಕ್ಕೆ ಒಳಗಾದ ಪೇಸ್‌ ಹೋರಾಟದ ನಡುವೆಯೆ ಸ್ಪರ್ಧೆಯ ತಾಣದಿಂದ ಹೊರನಡೆದಿದ್ದರು. 

ಗಾಯದ ಸಮಸ್ಯೆಯಿಂದಾಗಿ ಭಾಂಬ್ರಿ ಮತ್ತು ಮೈನೇನಿ ಉಜ್ಬೆಕಿಸ್ಥಾನ ವಿರುದ್ಧದ ಹೋರಾಟದಲ್ಲಿ ಆಡಿರಲಿಲ್ಲ. ಇದೀಗ ಎಟಿಪಿ ಟೂರ್‌ನಲ್ಲಿ ಆಡುತ್ತಿರುವ ಅವರಿಬ್ಬರು ಸೆ. 15ರಿಂದ 17ರ ವರೆಗೆ ಎಡ್ಮಂಟನ್‌ನಲ್ಲಿ ನಡೆಯುವ ಕೆನಡ ವಿರುದ್ಧದ ಡೇವಿಸ್‌ ಕಪ್‌ ಹೋರಾಟದಲ್ಲಿ ಆಡಲಿದ್ದಾರೆ. ಭಾಂಬ್ರಿ ಇತ್ತೀಚೆಗೆ ವಿಶ್ವದ 22ನೇ ರ್‍ಯಾಂಕಿನ ಗಾಲ್‌ ಮೊನ್‌ಫಿಲ್ಸ್‌ ಅವರನ್ನು ಸೋಲಿಸಿದ್ದರು. 

ತಂಡದಲ್ಲಿರುವ ರಾಮ್‌ಕುಮಾರ್‌ ರಾವåನಾಥನ್‌ ಕೂಡ ಇತ್ತೀಚೆಗೆ ವಿಶ್ವದ 8ನೇ ರ್‍ಯಾಂಕಿನ ಡೊಮಿನಿಕ್‌ ಥೀಮ್‌ ಅವರನ್ನು ಸೋಲಿಸಿ ಸುದ್ದಿ ಮಾಡಿದ್ದರು. ಉನ್ನತ ರ್‍ಯಾಂಕಿನ ಡಬಲ್ಸ್‌ ಆಟಗಾರರಾಗಿರುವ ಬೋಪಣ್ಣ ಅವರು ನೇರವಾಗಿ ತಂಡಕ್ಕೆ ಆಯ್ಕೆಯಾದರು. ಆದರೆ ಡೇವಿಸ್‌ ಕಪ್‌ನ ಡಬಲ್ಸ್‌ನಲ್ಲಿ ಗರಿಷ್ಠ ಗೆಲುವಿನ ವಿಶ್ವದಾಖಲೆಗೈಯಲು ಪೇಸ್‌ ಅವರಿಗೆ ಇನ್ನೊಂದು ಗೆಲುವಿನ ಆವಶ್ಯಕತೆ ಇತ್ತು. ಆದರೆ ಇದೀಗ ತಂಡದಿಂದ ಕೈಬಿಟ್ಟ ಕಾರಣ ಇದು ಸಾಧ್ಯವಾಗುತ್ತಿಲ್ಲ. ಅವರೀಗ ಇಟಲಿಯ ನಿಕೋಲ ಪೀತ್ರಾಂಗೆಲಿ ಜತೆ 42 ಗೆಲುವಿನ ದಾಖಲೆ ಹೊಂದಿದ್ದಾರೆ. 

ಕೆನಡ ವಿರುದ್ಧದ ಹೋರಾಟಕ್ಕೆ ಡೇವಿಸ್‌ ಕಪ್‌ ತಂಡ: ಯೂಕಿ ಭಾಂಬ್ರಿ, ರಾಮ್‌ಕುಮಾರ್‌ ರಾಮನಾಥನ್‌, ಸಾಕೇತ್‌ ಮೈನೇನಿ, ರೋಹನ್‌ ಬೋಪಣ್ಣ.

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.