ಡೇವಿಸ್‌ ಕಪ್‌ ತಂಡದೊಂದಿಗೆ ತೆರಳದಿರಲು ದಿವಿಜ್‌ ನಿರ್ಧಾರ


Team Udayavani, Apr 2, 2018, 7:10 AM IST

Davis-Cup,Divij-Sharan.jpg

ಹೊಸದಿಲ್ಲಿ: ಚೀನ ವಿರುದ್ಧ ನಡೆಯಲಿರುವ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮೀಸಲು ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ಆಟಗಾರ ದಿವಿಜ್‌ ಶರಣ್‌ ಪಂದ್ಯಾವಳಿಗಾಗಿ ತಂಡದೊಂದಿಗೆ ತೆರಳದಿರಲು ನಿರ್ಧರಿಸಿದ್ದಾರೆ. ಅವರ ಈ ನಿರ್ಧಾರದಿಂದ ಮುಂಬರುವ ದಿನಗಳಲ್ಲಿ ಆಟಗಾರರಿಗೆ ನೀತಿಸಂಹಿತೆ ಪ್ರಕಟವಾಗುವ ಸಾಧ್ಯತೆಗೆ ದಾರಿ ಮಾಡಿದೆ.

ಚೀನದ ತಿಯಾಂಜಿನ್‌ನಲ್ಲಿ  ಎ. 6ರಿಂದ ನಡೆಯಲಿರುವ ಡೇವಿಸ್‌ ಕಪ್‌ ಪಂದ್ಯಾವಳಿಗಾಗಿ ಮೀಸಲು ಆಟಗಾರನಾಗಿ ತೆರಳಿ, ಅಗತ್ಯ ಬಿದ್ದರೆ ಕಣಕ್ಕಿಳಿಯಲು 32ರ ಹರೆಯದ ಶರಣ್‌ ಒಪ್ಪಿದ್ದರು. ಆದರೆ ಅವರ ನಿರ್ಧಾರವೀಗ ಬದಲಾಗಿದೆ; ಇದು ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ನ ಕೆಂಗಣ್ಣಿಗೆ ಗುರಿಯಾಗಿದೆ.

ಭಾರತದ ಎರಡನೇ ಅಗ್ರ ಶ್ರೇಯಾಂಕಿತ ಡಬಲ್ಸ್‌ ಆಟಗಾರನಾಗಿ ಗುರುತಿಸಿಕೊಂಡಿರುವ ದಿವಿಜ್‌ ಶರಣ್‌ ಪುರುಷರ ಡಬಲ್ಸ್‌ನಲ್ಲಿ 44ನೇ ರ್‍ಯಾಂಕ್‌ನಲ್ಲಿದ್ದು, ಆಯ್ಕೆ ಸಮಿತಿಯು ಭಾರತದ ಅಗ್ರಮಾನ್ಯ ಡಬಲ್ಸ್‌ ಆಟಗಾರ ರೋಹನ್‌ ಬೋಪಣ್ಣ ಮತ್ತು ಲಿಯಾಂಡರ್‌ ಪೇಸ್‌ ಅವರನ್ನು ಡೇವಿಸ್‌ ಕಪ್‌ ಡಬಲ್ಸ್‌ ವಿಭಾಗಕ್ಕೆ ಆರಿಸಿತ್ತು.

ಪೇಸ್‌ ಆಯ್ಕೆಗೆ ಆಕ್ರೋಶ?
ಲಿಯಾಂಡರ್‌ ಪೇಸ್‌ ದಿವಿಜ್‌ ಶರಣ್‌ಗಿಂತ ಒಂದೇ ರ್‍ಯಾಂಕ್‌ ಹಿಂದಿದ್ದಾರೆ (45). ಆದರೆ ಅವರಿಗಿರುವ ಅಪಾರ ಅನುಭವದ ನೆಲೆಯಲ್ಲಿ ಮತ್ತು ಭಾರತ ಪ್ರಬಲ ಸ್ಪರ್ಧೆಯೊಡ್ಡುವ ಉದ್ದೇಶದಿಂದ ಆಯ್ಕೆ ಸಮಿತಿಯು ಪೇಸ್‌ ಅವರನ್ನು ಆರಿಸಿತ್ತು. ಇದು ಶರಣ್‌ ಸಿಡುಕಿಗೆ ಕಾರಣವಾಗಿದೆ ಎನ್ನಲಾಗಿದೆ.ಶರಣ್‌ ಅವರ ಈ ನಿರ್ಧಾರ ಆಡುವ ತಂಡದಲ್ಲಿ ಸ್ಥಾನ ದೊರಕದ ಹೊರತು ಕೂಟದಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನುವುದನ್ನು ಸೂಚಿಸಿದೆ. ಇದರಿಂದ ಡಬಲ್ಸ್‌ನಲ್ಲಿ ಪಾಲ್ಗೊಳ್ಳುವ ಇಬ್ಬರು ಆಟಗಾರರಲ್ಲಿ ಯಾರಾದರೂ ಒಬ್ಬರು ಗಾಯಗೊಂಡರೂ ತಂಡಕ್ಕೆ ಸಮಸ್ಯೆಯಾಗಲಿದೆ.

ಸಿಂಗಲ್ಸ್‌ನಲ್ಲಿ ಅಗ್ರಸ್ಥಾನಿಗರಾಗಿರುವ ಯೂಕಿ ಭಾಂಬ್ರಿ ಹೊಟ್ಟೆನೋವಿನ ಕಾರಣ ಈಗಾಗಲೇ ಪಂದ್ಯಾವಳಿಯಿಂದ ಹೊರಗುಳಿದಿದ್ದು, ಶರಣ್‌ ನಿರ್ಧಾರ ದೇಶಿ ತಂಡವನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.