ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್ ..!


Team Udayavani, Oct 20, 2020, 9:27 PM IST

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್

ದುಬೈ : ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ಅತ್ಯುತ್ತಮ ಆಟವನ್ನು ಪಂಜಾಬ್ ವಿರುದ್ಧವೂ ಮುಂದುವರೆಸಿದ್ದಾರೆ. ಸದ್ಯ ಧವನ್ ಪಾಲಿಗೆ ಐಪಿಎಲ್ ನಲ್ಲಿ 5000 ರನ್ ಪೂರ್ತಿಗೊಳಿಸಿದ 5 ನೇ ಆಟಗಾರನೆಂಬ ಹೆಗ್ಗಳಿಕೆ ದಕ್ಕಿದೆ.

ಶಿಖರ್ ಧವನ್ ಕಳೆದ ಮೂರು ಪಂದ್ಯಗಳಿಂದ ಉತ್ತಮ ಬ್ಯಾಟಿಂಗ್ ಲಯವನ್ನು ಪಡೆದುಕೊಂಡಿದ್ದಾರೆ. ಕಳೆದ ಮೂರು ಪಂದ್ಯದಲ್ಲಿ 69, 57 ಹಾಗೂ ಭರ್ಜರಿ 101 ರನ್ ಗಳಿಸಿದ್ದಾರೆ. ಸದ್ಯ ಅವರು ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮಂಗಳವಾರ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ರನ್ ಗಳಿಸುವ ನಾಗಲೋಟವನ್ನು ಮುಂದುವರೆಸಿದ್ದಾರೆ.

ಸದ್ಯ ಧವನ್ ಆಟಕ್ಕೆ ಮತ್ತೊಂದು ದಾಖಲೆಯ ಗರಿಕೆ ಸಿಕ್ಕಿದೆ. ಐಪಿಎಲ್ ನಲ್ಲಿ 5000 ರನ್ ಗಳಿಸಿದ 5 ನೇ ಆಟಗಾರನೆಂಬ ದಾಖಲೆ ಧವನ್ ಪಡೆದುಕೊಂಡಿದ್ದಾರೆ. ಪಂಜಾಬ್ ಪಂದ್ಯಕ್ಕೂ ಮೊದಲು ಈ ದಾಖಲೆಯನ್ನು ಗಳಿಸುವಲ್ಲಿ ಧವನ್ 62 ರನ್ ಹಿಂದೆ ಇದ್ದರು. ಪಂಜಾಬ್ ವಿರುದ್ಧ ಪಂದ್ಯದಲ್ಲಿ ಭರ್ಜರಿ ಶತಕಗಳಿಸುವುದರ ಜೊತೆಗೆ 5000 ರನ್ ಗಳಿಸಿದ 5 ನೇ ಆಟಗಾರನಾಗಿಯೂ ಹೊರಹೊಮ್ಮಿದರು.

5000 ರನ್ ಗಳಿಸಿದ ದಾಖಲೆಯಲ್ಲಿ ಆರ್ ಸಿಬಿ ತಂಡದ ಕಪ್ತಾನ ವಿರಾಟ್ ಕೊಹ್ಲಿ 5759 ರನ್ ಗಳಿಸಿದ್ದಾರೆ. ಚೆನ್ನೈ ತಂಡದ ಸುರೇಶ್ ರೈನಾ ಈ ಬಾರಿ ಐಪಿಎಲ್ ನಲ್ಲಿ ಇಲ್ಲದೆ ಇದ್ರು, 5368 ರನ್ ಗಳಿಸಿ ದಾಖಲೆಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 5158 ರನ್ ಪೂರ್ತಿಗೊಳಿಸಿದ್ದಾರೆ.ಇದರೊಂದಿಗೆ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ 5037 ರನ್ ನೊಂದಿಗೆ ದಾಖಲೆಯ ಪಟ್ಟಿಯಲ್ಲಿ ಹೆಸರುಗಳಿಸಿದ್ದಾರೆ.

 

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.