ದೇರಳಕಟ್ಟೆ: “ನಿಟ್ಟೆ ಎಕೋಲೇಡ್ಸ್ -2018ಗೆ’ ಚಾಲನೆ
Team Udayavani, Mar 7, 2018, 6:00 AM IST
ಉಳ್ಳಾಲ: ವೈದ್ಯಕೀಯ ಕ್ಷೇತ್ರದೊಂದಿಗೆ ಕ್ರೀಡಾ ಕ್ಷೇತ್ರಕ್ಕೆ ಅವಿನಾಭಾವ ಸಂಬಂಧವಿದ್ದು, ವೈಜ್ಞಾನಿಕವಾಗಿ ಕ್ರೀಡೆ ಬದಲಾಗುತ್ತಿದ್ದು, ಭಾರತ ಸಹಿತ ವಿಶ್ವಾದಾದ್ಯಂತ ವೃತ್ತಿಪರತೆಯೊಂದಿಗೆ ವ್ಯಾವಹಾರಿಕವಾಗಿ ಮತ್ತು ಮನೋರಂಜನ ಕ್ಷೇತ್ರವಾಗಿ ಪ್ರಸಿದ್ಧಿಯನ್ನು ಪಡೆಯುತ್ತಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಸಹ ಕುಲಾಧಿಪತಿ ಎನ್. ವಿಶಾಲ್ ಹೆಗ್ಡೆ ಅಭಿ ಪ್ರಾಯಪಟ್ಟರು.
ದೇರಳಕಟ್ಟೆಯ ಕ್ಷೇಮ ಆಡಿಟೋರಿಯಂನಲ್ಲಿ ಮಂಗಳವಾರ ಪ್ರಾರಂಭಗೊಂಡ ದಕ್ಷಿಣ ವಲಯ ಮಟ್ಟದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳ ಅಂತರ್ ಕಾಲೇಜು ಕ್ರೀಡಾಕೂಟ “ನಿಟ್ಟೆ ಎಕೋಲೇಡ್ಸ್ -2018ಗೆ’ ಚಾಲನೆ ನೀಡಿ ಮಾತನಾಡಿದರು.
ನಿಟ್ಟೆ ವಿ.ವಿ. ಕುಲಸಚಿವೆ ಅಲ್ಕಾ ಕುಲಕರ್ಣಿ, ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಡೀನ್ ಡಾ| ಪಿ.ಎಸ್. ಪ್ರಕಾಶ್, ವೈಸ್ ಡೀನ್ಗಳಾದ ಡಾ| ಅಮೃತ್ ಮಿರಾಜ್ಕರ್, ಡಾ| ಜಯಪ್ರಕಾಶ್ ಶೆಟ್ಟಿ, ಎ.ಬಿ.ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಯು.ಎಸ್. ಕೃಷ್ಣ ನಾಯಕ್, ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ| ರಾಜೇಂದ್ರ ಪ್ರಸಾದ್, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ| ಧಾನೇಶ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ| ಫಾತಿಮಾ ಡಿ’ಸಿಲ್ವ, ಉಪಪ್ರಾಂಶುಪಾಲೆ ಸವಿತಾ ನಾಯಕ್, ಸ್ಟೂಡೆಂಟ್ ಕೌನ್ಸಿಲ್ ಅಧ್ಯಕ್ಷೆ ಇಂದೂ ಉಪಸ್ಥಿತರಿದ್ದರು.
ಕ್ರೀಡಾ ಸಲಹೆಗಾರ ಡಾ| ಮುರಲೀಕೃಷ್ಣ ಸ್ವಾಗತಿಸಿದರು. ಮಿಖಾಯ ಕಾರ್ಯಕ್ರಮ ನಿರೂಪಿಸಿದರು. ಸ್ಟೂಡೆಂಟ್ ಕೌನ್ಸಿಲ್ ನ್ಪೋರ್ಟ್ಸ್ ಸೆಕ್ರೆಟರಿ ಅಜಯ್ ಶರ್ಮಾ ವಂದಿಸಿದರು. ಕೇರಳ, ತಮಿಳುನಾಡು ಮತ್ತು ಕರ್ನಾಟಕ ಸೇರಿದಂತೆ 25 ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜಿನ ಕ್ರೀಡಾ ತಂಡಗಳು ಭಾಗವಹಿಸಿದ್ದು, ಮಾ. 9ರಂದು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ