ಒಲಿಂಪಿಕ್ ಅರ್ಹತೆ ಪಡೆದ ಬಾಕ್ಸರ್ಗಳ ಅಭ್ಯಾಸ ಶಿಬಿರ ವಿಳಂಬ
Team Udayavani, Jun 8, 2020, 12:46 PM IST
ಹೊಸದಿಲ್ಲಿ: ಆಡಳಿತಾಧಿಕಾರಿಗಳ ಅನುಮತಿ ಲಭಿಸದ ಕಾರಣ ಒಲಿಂಪಿಕ್ ಅರ್ಹತೆ ಪಡೆದ ಭಾರತದ ಬಾಕ್ಸರ್ಗಳ ಅಭ್ಯಾಸ ಶಿಬಿರ ವಿಳಂಬವಾಗಿ ಆರಂಭವಾಗಲಿದೆ.
ಪುರುಷರ ಮತ್ತು ವನಿತೆಯರ ಶಿಬಿರಗಳೆರಡನ್ನೂ ಜೂ. 10ರಿಂದ ಪಟಿಯಾಲ ಹಾಗೂ ಹೊಸದಿಲ್ಲಿಯಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಕನಿಷ್ಠ ಒಂದು ವಾರ ಮುಂದೂಡಲ್ಪಡಲಿದೆ.
“ನಾವು ಸಾಯ್ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇವೆ. ಅವರು ಸರಕಾರದ ಅನುಮತಿಯನ್ನು ಕಾಯುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಚಿತ್ರಣ ಸ್ಪಷ್ಟವಾಗಲಿದೆ. ಹೀಗಾಗಿ ಜೂ. 10ರಿಂದ ಆರಂಭಿಸಬೇಕಿದ್ದ ಬಾಕ್ಸಿಂಗ್ ಅಭ್ಯಾಸ ಶಿಬಿರ ಕನಿಷ್ಠ ಒಂದು ವಾರದ ಮಟ್ಟಿಗೆ ಮುಂದೂಡಲ್ಪಡಲಿದೆ’ ಎಂದು ಭಾರತೀಯ ಬಾಕ್ಸಿಂಗ್ ಫೆಡರೇಶನ್ ಪ್ರಧಾನ ನಿರ್ದೇಶಕ ಆರ್.ಕೆ. ಸಚೇತಿ ಹೇಳಿದ್ದಾರೆ.
ಟೋಕಿಯೊ ಒಲಿಂಪಿಕ್ ಗೇಮ್ಸ್ಗೆ ಈಗಾಗಲೇ ಭಾರತದ 9 ಬಾಕ್ಸರ್ಗಳು ಅರ್ಹತೆ ಪಡೆದಿದ್ದಾರೆ. ಇವರೆಂದರೆ ಅಮಿತ್ ಪಂಘಲ್ (52 ಕೆಜಿ), ಮನೀಷ್ ಕೌಶಿಕ್ (63 ಕೆಜಿ), ವಿಕಾಸ್ ಕೃಷ್ಣನ್ (69 ಕೆಜಿ), ಆಶಿಷ್ ಕುಮಾರ್ (75 ಕೆಜಿ), ಸತೀಶ್ ಕುಮಾರ್ (+91 ಕೆಜಿ), ಎಂ.ಸಿ. ಮೇರಿ ಕೋಮ್ (51 ಕೆಜಿ), ಸಿಮ್ರನ್ಜಿತ್ ಕೌರ್ (60 ಕೆಜಿ), ಲವ್ಲಿನಾ ಬೊರ್ಗೊಹೈನ್ (69 ಕೆಜಿ), ಪೂಜಾ ರಾಣಿ (75 ಕೆಜಿ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್