13ನೇ ಐಪಿಎಲ್‌ನಲ್ಲೂ ನಡೆದಿತ್ತೇ ಬೆಟ್ಟಿಂಗ್‌ ಸಂಚು?


Team Udayavani, Jan 5, 2021, 10:55 PM IST

13ನೇ ಐಪಿಎಲ್‌ನಲ್ಲೂ ನಡೆದಿತ್ತೇ ಬೆಟ್ಟಿಂಗ್‌ ಸಂಚು?

ಹೊಸದಿಲ್ಲಿ: ಕೊರೊನಾ ನಡುವೆಯೂ ಅರಬ್‌ ನಾಡಿನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡ 13ನೇ ಐಪಿಎಲ್‌ನಲ್ಲಿ ಬೆಟ್ಟಿಂಗ್‌ ಸಂಚು ನಡೆಸಲು ಯತ್ನಿಸಲಾಗಿತ್ತೇ? ಇಂಥದೊಂದು ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಇದರ ಹಿಂದಿದ್ದದ್ದು ದಿಲ್ಲಿ ಮೂಲದ ನರ್ಸ್‌ ಎಂಬುದು ಅಚ್ಚರಿಯ ಸಂಗತಿ!

ಆ ನರ್ಸ್‌ ತಂಡದ ಆಂತರಿಕ ಮಾಹಿತಿಯನ್ನು ಅಕ್ರಮವಾಗಿ ಪಡೆಯಲು ಬಯಸಿದ್ದಳು. ಇದಕ್ಕಾಗಿ ಭಾರತೀಯ ಕ್ರಿಕೆಟಿಗರೊಬ್ಬರನ್ನು ಸಂಪರ್ಕಿಸಿದ್ದಳು ಎಂಬುದು ಮಂಗಳವಾರದ ಬ್ರೇಕಿಂಗ್‌ ನ್ಯೂಸ್‌ ಆಗಿತ್ತು!

ಜಾಲತಾಣದ ಮೂಲಕ ಸಂಪರ್ಕ
ವರದಿಯೊಂದರ ಪ್ರಕಾರ, ಐಪಿಎಲ್‌ ಪಂದ್ಯಗಳಲ್ಲಿ ಬೆಟ್ಟಿಂಗ್‌ ನಡೆಸುವ ವಿಚಾರವಾಗಿ ಆಕೆ ಆಟಗಾರರನ್ನು ಸಂಪರ್ಕಿಸಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಆಟಗಾರನನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಲು ಪ್ರಯತ್ನ ನಡೆಸಲಾಗಿತ್ತು ಆದರೆ ಆ ಆಟಗಾರ ಇದಕ್ಕೆ ಪೂರಕವಾಗಿ ಸ್ಪಂದಿಸದ ಕಾರಣ ಸಂದೇಶಗಳನ್ನು ಅಳಿಸಲಾಗಿದೆ. ಐಪಿಎಲ್‌ ಕೂಟದ ಸೆಪ್ಟಂಬರ್‌ ಮಧ್ಯಭಾಗದಲ್ಲಿ ಈ ಘಟನೆ ನಡೆದಿದೆ.

3 ವರ್ಷಗಳಿಂದ ಸಂಪರ್ಕ
ದಿಲ್ಲಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯಳಂತೆ ಬಿಂಬಿಸಿಕೊಂಡ ಆಕೆ ಭಾರತೀಯ ಕ್ರಿಕೆಟಿಗನೊಬ್ಬನಿಂದ ಈ ಮಾಹಿತಿಯನ್ನು ಪಡೆಯುವ ಪ್ರಯತ್ನಕ್ಕೆ ಮುಂದಾಗಿದ್ದಳು. ಆ ಆಟಗಾರ 2 ವರ್ಷಗಳ ಹಿಂದೆ ಟೀಮ್‌ ಇಂಡಿಯಾವನ್ನು ಪ್ರತಿನಿಧಿಸಿದ್ದು, ಕೂಡಲೇ ಈ ವಿಚಾರವನ್ನು ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ವರದಿ ಮಾಡಿದ್ದಾರೆ. ಮೂಲಗಳ ಪ್ರಕಾರ, ಆ ಕ್ರಿಕೆಟಿಗ ಹಾಗೂ ನರ್ಸ್‌ 3 ವರ್ಷಗಳ ಹಿಂದೆಯೇ ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕದಲ್ಲಿದ್ದರು ಎಂದು ಹೇಳಲಾಗುತ್ತಿದೆ. ಜತೆಗೆ ಆಟಗಾರನ ಅಭಿಮಾನಿಯೆಂದು ಹೇಳಿಕೊಂಡಿದ್ದ ಆಕೆ, ತಾನು ವೈದ್ಯಳಾಗಿದ್ದು, ದಿಲ್ಲಿಯಲ್ಲಿ ಖಾಸಗಿ ಆಸ್ಪತ್ರೆಯನ್ನು ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದಳು ಎನ್ನಲಾಗಿದೆ.

ಇತ್ತೀಚೆಗೆ ಆ ಕ್ರಿಕೆಟಿಗ ಆಕೆಯೊಂದಿಗೆ ಸಂಪರ್ಕದಲ್ಲಿದ್ದು, ಕೊರೊನಾ ವೈರಸ್‌ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಆಕೆಯಿಂದ ಮಾಹಿತಿಯನ್ನು ಪಡೆದುಕೊಂಡಿದ್ದ ಎನ್ನಲಾಗಿದೆ.

ತನಿಖೆಯೂ ಪೂರ್ಣವಾಗಿದೆ!
ಇದಕ್ಕೂ ಮಿಗಿಲಾದ ಅಚ್ಚರಿಯೆಂದರೆ, ಈ ವಿದ್ಯಮಾನಕ್ಕೆ ಸಂಭವಿಸಿದ ತನಿಖೆ ಕೂಡ ಪೂರ್ಣಗೊಂಡಿರುವುದು! ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥ ಅಜಿತ್‌ ಸಿಂಗ್‌ ಇದನ್ನು ಖಚಿತಪಡಿಸಿದ್ದಾರೆ. ಇಂಥದೊಂದು ಪ್ರಕರಣ ಸಂಭವಿಸಿದ್ದು ನಿಜ. ಆದರೆ ಸೂಕ್ತ ತನಿಖೆ ಬಳಿಕ ಪ್ರಕರಣಕ್ಕೆ ಮುಕ್ತಾಯ ಹಾಡಲಾಗಿದೆ ಎಂದಿದ್ದಾರೆ.

“ಐಪಿಎಲ್‌ ಸಂದರ್ಭದಲ್ಲಿಯೇ ಈ ಘಟನೆ ಬಗ್ಗೆ ಕ್ರಿಕೆಟಿಗನಿಂದ ನಮಗೆ ಮಾಹಿತಿ ಬಂದಿತ್ತು. ನಾವು ಈಗಾಗಲೇ ಇದರ ತನಿಖೆ ನಡೆಸಿದ್ದು, ಪ್ರಕರಣ ಮುಕ್ತಾಯ ಕಂಡಿದೆ. ಆಕೆಯಿಂದ ಎಲ್ಲ ವಿವರಗಳನ್ನು ಪಡೆದುಕೊಳ್ಳಲಾಗಿದೆ. ಆಕೆ ಯಾವುದೇ ಬೆಟ್ಟಿಂಗ್‌ ಸಿಂಡಿಕೇಟ್‌ನೊಂದಿಗೆ ಸಂಪರ್ಕ ಹೊಂದಿಲ್ಲ’ ಎಂದಿದ್ದಾರೆ.

ಹೊಸ ಐಪಿಎಲ್‌ ತಂಡಗಳ ಮೂಲಬೆಲೆ 1500 ಕೋ ರೂ.!
ಮುಂಬಯಿ: 2022ರಲ್ಲಿ ಎರಡು ಹೊಸ ತಂಡಗಳು ಐಪಿಎಲ್‌ ಪ್ರವೇಶಿಸುವುದು ಖಚಿತವಾಗಿದೆ. ಆದರೆ ಈ ತಂಡಗಳ ಮಾಲಕತ್ವ ಪಡೆಯಲು ಸಂಬಂಧಪಟ್ಟ ಸಂಸ್ಥೆಗಳು ದುಬಾರಿ ಬೆಲೆ ನೀಡಬೇಕು. ಕಾರಣ ಮೂಲಬೆಲೆ ಆರಂಭವಾಗುವುದೇ 1500 ಕೋಟಿ ರೂ.ಗಳಿಂದ! ಹೀಗೆಂದು ಮೂಲಗಳು ವರದಿ ಮಾಡಿವೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.