ದೇವಧರ್‌ ಟ್ರೋಫಿ ಕ್ರಿಕೆಟ್‌: 4ನೇ ಜಯ; ದಕ್ಷಿಣ ವಲಯ ನಾಗಾಲೋಟ


Team Udayavani, Jul 30, 2023, 11:12 PM IST

ದೇವಧರ್‌ ಟ್ರೋಫಿ ಕ್ರಿಕೆಟ್‌: 4ನೇ ಜಯ; ದಕ್ಷಿಣ ವಲಯ ನಾಗಾಲೋಟ

ಪುದುಚೇರಿ: ದೇವಧರ್‌ ಟ್ರೋಫಿ ಏಕದಿನ ಪಂದ್ಯಾವಳಿಯಲ್ಲಿ ದಕ್ಷಿಣ ವಲಯದ ನಾಗಾಲೋಟ ಮುಂದುವರಿದಿದೆ. ರವಿವಾರದ ಪಂದ್ಯ ದಲ್ಲಿ ಅಗರ್ವಾಲ್‌ ಬಳಗ ಪೂರ್ವ ವಲಯವನ್ನು 5 ವಿಕೆಟ್‌ಗಳಿಂದ ಮಣಿಸಿ ಸತತ 4ನೇ ಜಯ ಸಾಧಿಸಿತು. ಇದರೊಂದಿಗೆ ಫೈನಲ್‌ ಪ್ರವೇಶವನ್ನು ಬಹುತೇಕ ಖಾತ್ರಿಗೊಳಿಸಿತು.

ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಪೂರ್ವ ವಲಯ 46 ಎಸೆತಗಳಲ್ಲಿ 229ಕ್ಕೆ ಆಲೌಟ್‌ ಆಯಿತು. ದಕ್ಷಿಣ ವಲಯ 44.2 ಓವರ್‌ಗಳಲ್ಲಿ 5 ವಿಕೆಟಿಗೆ 230 ರನ್‌ ಬಾರಿಸಿತು. ಇದು ಪೂರ್ವ ವಲಯಕ್ಕೆ 4 ಪಂದ್ಯಗಳಲ್ಲಿ ಎದುರಾದ ಮೊದಲ ಸೋಲು. ಅಜೇಯ ದಕ್ಷಿಣ ವಲಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ (16 ಅಂಕ).

ನಾಯಕ ಮಾಯಾಂಕ್‌ ಅಗರ್ವಾಲ್‌ ಮತ್ತು ವನ್‌ಡೌನ್‌ ಆಟಗಾರ ಸಾಯಿ ಸುದರ್ಶನ್‌ ಅವರ 118 ರನ್‌ ಜತೆಯಾಟ ದಕ್ಷಿಣ ವಲಯದ ಗೆಲುವನ್ನು ಸುಲಭಗೊಳಿಸಿತು. ಅಗ ರ್ವಾಲ್‌ ಮತ್ತೂಂದು ಪ್ರಚಂಡ ಬ್ಯಾಟಿಂಗ್‌ ಪ್ರದರ್ಶಿಸಿ 84 ರನ್‌ ಬಾರಿಸಿದರು (88 ಎಸೆತ, 6 ಬೌಂಡರಿ, 1 ಸಿಕ್ಸರ್‌). ಸಾಯಿ ಸುದರ್ಶನ್‌ ಸೊಗಸಾದ ಆಟದ ಮೂಲಕ 53 ರನ್‌ ಹೊಡೆದರು (67 ಎಸೆತ, 4 ಬೌಂಡರಿ, 1 ಸಿಕ್ಸರ್‌). ಎನ್‌. ಜಗದೀಶನ್‌ 32, ರೋಹಿತ್‌ ರಾಯುಡು 24, ರೋಹನ್‌ ಕುನ್ನುಮ್ಮಾಳ್‌ 18 ರನ್‌ ಕೊಡುಗೆ ಸಲ್ಲಿಸಿದರು.

ಎಂದಿನಂತೆ ಕರ್ನಾಟಕದ ತ್ರಿವಳಿ ವೇಗಿಗಳಿಂದ ಮಿಂಚಿನ ದಾಳಿ ನಡೆಯಿತು. ವಿ. ಕೌಶಿಕ್‌ 3, ವಿದ್ವತ್‌ ಕಾವೇರಪ್ಪ 2 ಹಾಗೂ ವಿಜಯ್‌ಕುಮಾರ್‌ ವೈಶಾಖ್‌ ಒಂದು ವಿಕೆಟ್‌ ಕೆಡವಿದರು. ಸಾಯಿ ಕಿಶೋರ್‌ ಕೂಡ 3 ವಿಕೆಟ್‌ ಕಿತ್ತು ಮಿಂಚಿದರು.

ಪೂರ್ವ ವಲಯದ ಬ್ಯಾಟಿಂಗ್‌ ಸರದಿಯಲ್ಲಿ ಗಮನ ಸೆಳೆದವರೆಂದರೆ ವಿರಾಟ್‌ ಸಿಂಗ್‌ (49), ಶುಭಾÅಂಶು ಸೇನಾಪತಿ (44), ಆಕಾಶ್‌ ದೀಪ್‌ (44) ಮತ್ತು ಮುಖ್ತರ್‌ ಹುಸೇನ್‌ (33). ಕಳೆದ ಪಂದ್ಯದಲ್ಲಿ ಸ್ಫೋಟಕ ಶತಕ ಬಾರಿಸಿದ್ದ ರಿಯಾನ್‌ ಪರಾಗ್‌ ಇಲ್ಲಿ ಗಳಿಸಿದ್ದು ಕೇವಲ 13 ರನ್‌.

143ಕ್ಕೆ 8 ವಿಕೆಟ್‌ ಕಳೆದುಕೊಂಡಿದ್ದ ಪೂರ್ವ ವಲಯವನ್ನು ಇನ್ನೂರರಾಚೆ ದಾಟಿಸುವಲ್ಲಿ ಆಕಾಶ್‌ ದೀಪ್‌-ಮುಖ್ತರ್‌ ಹುಸೇನ್‌ ಪಾತ್ರ ಪ್ರಮುಖವಾಗಿತ್ತು. ಇವರು 9ನೇ ವಿಕೆಟಿಗೆ 74 ರನ್‌ ಒಟ್ಟುಗೂಡಿಸಿದರು.

ದಕ್ಷಿಣ ವಲಯ ತನ್ನ ಕೊನೆಯ ಪಂದ್ಯವನ್ನು ಮಂಗಳವಾರ ಮಧ್ಯ ವಲಯ ವಿರುದ್ಧ ಆಡಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.