ಫೈನಲ್ ಟೆಸ್ಟ್: ಕಾನ್ವೇ ಅರ್ಧಶತಕದ ನೆರವಿನಿಂದ ಉತ್ತಮ ಆರಂಭ ಪಡೆದ ಕಿವೀಸ್


Team Udayavani, Jun 21, 2021, 7:29 AM IST

Devon Conway

ಸೌಥಂಪ್ಟನ್: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್  ಫೈನಲ್ ಪಂದ್ಯದ ಮೂರನೇ ದಿನದಾಟ ಅಂತ್ಯವಾಗಿದೆ. ಡೆವೋನ್ ಕಾನ್ವೇ ಅರ್ಧಶತಕದ ನೆರವಿನಿಂದ ನ್ಯೂಜಿಲ್ಯಾಂಡ್ ತಂಡ ಎರಡು ವಿಕೆಟ್ ನಷ್ಟಕ್ಕೆ 101  ರನ್ ಗಳಿಸಿದೆ.

ಇದಕ್ಕೂ ಮೊದಲು ಭಾರತ 3ಕ್ಕೆ 146 ರನ್‌ ಗಳಿಸಿದಲ್ಲಿಂದ ದಿನದಾಟ ಮುಂದುವರಿಸಿತ್ತು. ಆದರೆ ಕಿವೀಸ್‌ ವೇಗಕ್ಕೆ ತತ್ತರಿಸಿದ ತಂಡ ಮೊದಲ ಅವಧಿಯಲ್ಲೇ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಟಕ್ಕೆ ಸಿಲುಕಿತು. ಸ್ಕೋರ್ 149ಕ್ಕೆ ಏರಿದ ವೇಳೆ ಕೊಹ್ಲಿ ವಿಕೆಟನ್ನು ಉರುಳಿಸುವ ಮೂಲಕ ವೇಗಿ ಜಾಮೀಸನ್‌ ಭಾರತದ ಕುಸಿತಕ್ಕೆ ಚಾಲನೆ ನೀಡಿದರು. ಕೊಹ್ಲಿ ಹಿಂದಿನ ದಿನದ ಮೊತ್ತಕ್ಕೇ ವಾಪಸಾದರು (44). 132 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ ಕೇವಲ ಒಂದು ಬೌಂಡರಿ ಒಳಗೊಂಡಿತ್ತು. ಮತ್ತೆ 7 ರನ್‌ ಒಟ್ಟುಗೂಡುವಷ್ಟರಲ್ಲಿ ರಿಷಭ್‌ ಪಂತ್‌ ಅವರನ್ನೂ ಜಾಮೀಸನ್‌ ಪೆವಿಲಿಯನ್ನಿಗೆ ಕಳುಹಿಸಿದರು. ಖಾತೆ ತೆರೆಯಲು 19 ಎಸೆತ ತೆಗೆದುಕೊಂಡ ಪಂತ್‌ ಆಟ ಒಂದೇ ಬೌಂಡರಿಗೆ ಸೀಮಿತಗೊಂಡಿತು.

ಕೊಹ್ಲಿಯೊಂದಿಗೆ 61 ರನ್‌ ಜತೆಯಾಟದಲ್ಲಿ ಪಾಲ್ಗೊಂಡ ರಹಾನೆ ಅರ್ಧ ಶತಕಕ್ಕೆ ಒಂದು ರನ್‌ ಬೇಕೆನ್ನುವಾಗ ವ್ಯಾಗ್ನರ್‌ ಮೋಡಿಗೆ ಸಿಲುಕಿದರು. 49 ರನ್‌ ಮಾಡಿದ ರಹಾನೆ ಭಾರತದ ಸರದಿಯ ಟಾಪ್‌ ಸ್ಕೋರರ್‌ (117 ಎಸೆತ, 5 ಬೌಂಡರಿ). ಪಂತ್‌ ಮತ್ತು ರಹಾನೆ ಇಬ್ಬರೂ ಸ್ಲಿಪ್‌ ಫೀಲ್ಡರ್‌ ಲ್ಯಾಥಂಗೆ ಕ್ಯಾಚಿತ್ತರು. ಅಶ್ವಿ‌ನ್‌ 22, ಜಡೇಜ 15 ರನ್‌ ಮಾಡಿದರು. ಭಾರತ 217 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಲ್ಯಾಥಂ – ಕಾನ್ವೇ ಆರಂಭ: ನ್ಯೂಜಿಲ್ಯಾಂಡ್ ಗೆ ಲ್ಯಾಥಂ – ಕಾನ್ವೇ ಜೋಡಿ ಉತ್ತಮ ಆರಂಭ ಒದಗಿಸಿತು. ಇವರಿಬ್ಬರು ಮೊದಲ ವಿಕೆಟ್ ಗೆ 70 ರನ್ ಸೇರಿಸಿದರು. ಈ ವೇಳೆ 30 ರನ್ ಗಳಿಸಿದ್ದ ಲ್ಯಾಥಂ ಅಶ್ವಿನ್ ಗೆ ವಿಕೆಟ್ ಒಪ್ಪಿಸಿದರು. ನಂತರ ನಾಯಕ ವಿಲಯಮ್ಸನ್ ಜೊತೆ ಬ್ಯಾಟಿಂಹ್ ಮುಂದುವರಿಸಿದ ಕಾನ್ವೇ ಸತತ ಮೂರನೇ ಟೆಸ್ಟ್ ಪಂದ್ಯದ ಅರ್ಧಶತಕ ಬಾರಿಸಿದರು.

52 ರನ್ ಗಳಸಿದ್ದ ಕಾನ್ವೇ ಇಶಾಂತ್ ಶರ್ಮಾ ಎಸೆತದಲ್ಲಿ ಶಮಿಗೆ ಕ್ಯಾಚ್ ನೀಡಿ ಔಟಾದರು. ದಿನದಾಟದ ಅಂತ್ಯಕ್ಕೆ ಕಿವೀಸ್ ಎರಡು ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿದೆ. ಸದ್ಯ 12 ರನ್ ಗಳಿಸಿರುವ ವಿಲಿಯಮ್ಸನ್ ಮತ್ತು ಖಾತೆ ತೆರೆಯದ ರಾಸ್ ಟೇಲರ್ ಕ್ರೀಸ್ ನಲ್ಲಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.