ಮಾಧ್ಯಮಗಳಿಂದ ದೂರವಿರಲು ಸೂಚಿಸಿದ ಧೋನಿ’
Team Udayavani, Jul 29, 2018, 12:07 PM IST
ಹೊಸದಿಲ್ಲಿ: ತಾನು ಭಾರತ ತಂಡಕ್ಕೆ ಆಯ್ಕೆಯಾದೊಡನೆಯೇ ಮಹೇಂದ್ರ ಸಿಂಗ್ ಧೋನಿ ಮಾಧ್ಯಮಗಳಿಂದ ದೂರ ಇರುವಂತೆ ಸೂಚಿಸಿದ್ದರು ಎಂಬುದಾಗಿ ಉದಯೋನ್ಮುಖ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಹೇಳಿದ್ದಾರೆ.
“ಯಾವುದೇ ದಿನಪತ್ರಿಕೆಯನ್ನು ಓದಬೇಡ. ಹಾಗೆಯೇ ಸಾಮಾಜಿಕ ಜಾಲತಾಣಗಳಿಂದ ಸಾಧ್ಯವಾದಷ್ಟು ದೂರ ಉಳಿಯಲು ಪ್ರಯತ್ನಿಸು. ಇದರಿಂದ ಕ್ರಿಕೆಟ್ನತ್ತ ಹೆಚ್ಚಿನ ಗಮನ ನೀಡಲು ಸಾಧ್ಯವಾಗುತ್ತದೆ…’ ಎಂಬುದಾಗಿ ಧೋನಿ ಸೂಚಿಸಿದ್ದರು ಎಂದು ಶ್ರೇಯಸ್ ಅಯ್ಯರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. “ಮಾಧ್ಯಮಗಳೆಲ್ಲ ನಮ್ಮ ಬದುಕಿನ ಅವಿಭಾಜ್ಯ ಅಂಗಗಳೇ ಆಗಿವೆ. ಇದರಿಂದ ದೂರವಿರಲು ನಾನು ಪ್ರಯತ್ನಿಸುತ್ತಿದ್ದೇನೆ’ ಎಂದು ಅಯ್ಯರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ