Royal Challengers Bangalore; ಫಿನಿಶಿಂಗ್‌ ಪಾತ್ರದಲ್ಲಿ ಡಿ.ಕೆ. ಮಿಂಚು


Team Udayavani, Mar 27, 2024, 6:02 AM IST

dinesh karthik shining in finisher role

ಬೆಂಗಳೂರು: “ಇದು ನನ್ನ ಕೊನೆಯ ಐಪಿಎಲ್‌. ಹೀಗಾಗಿ ನಾನು ಸಾಮರ್ಥ್ಯಕ್ಕೂ ಮಿಗಿಲಾದ ಪ್ರದರ್ಶನ ನೀಡುವ ಹಾಗೂ ಫಿನಿಶಿಂಗ್‌ ಪಾತ್ರವನ್ನು ಯಶಸ್ವಿಯಾಗಿ ನಿಭಾಯಿಸುವ ಯೋಜನೆಯಲ್ಲಿದ್ದೇನೆ’ ಎಂಬುದಾಗಿ ಆರ್‌ಸಿಬಿಯ ಅನುಭವಿ ಆಟಗಾರ ದಿನೇಶ್‌ ಕಾರ್ತಿಕ್‌ ಐಪಿಎಲ್‌ ಆರಂಭಕ್ಕೂ ಮೊದಲೇ ಹೇಳಿದ್ದರು. ಮೊದಲೆರಡು ಪಂದ್ಯಗಳಲ್ಲಿ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಪಂಜಾಬ್‌ ಎದುರಿನ ಚೇಸಿಂಗ್‌ ವೇಳೆ, ಆರ್‌ಸಿಬಿಗೆ ಕೊನೆಯ 3 ಓವರ್‌ಗಳಲ್ಲಿ 36 ರನ್‌ ತೆಗೆಯುವ ಕಠಿನ ಸವಾಲು ಎದುರಾಗಿತ್ತು. ಈ ಹಂತದಲ್ಲಿ ದಿನೇಶ್‌ ಕಾರ್ತಿಕ್‌ ಜತೆ ಕ್ರೀಸ್‌ನಲ್ಲಿದ್ದವರು ಇಂಪ್ಯಾಕ್ಟ್ ಪ್ಲೇಯರ್‌ ಮಹಿಪಾಲ್‌ ಲೊಮ್ರೋರ್‌. ಇವರು ಯಶ್‌ ದಯಾಳ್‌ ಬದಲು ಆಡಲಿಳಿದಿದ್ದರು.

ಅರ್ಷದೀಪ್‌ ಸಿಂಗ್‌ ಎಸೆದ 18ನೇ ಓವರ್‌ನಲ್ಲಿ ಲೊಮ್ರೋರ್‌ ಒಂದು ಫೋರ್‌, ಒಂದು ಸಿಕ್ಸರ್‌ ಸಿಡಿಸಿ ಲೆಕ್ಕಾಚಾರವನ್ನು ಒಂದಿಷ್ಟು ಸರಳಗೊಳಿಸಿದರು. 2 ಓವರ್‌ಗಳಲ್ಲಿ 23 ರನ್‌ ಬೇಕಾಯಿತು. ಬೌಲರ್‌ ಬೇರೆ ಯಾರೂ ಅಲ್ಲ, ಆರ್‌ಸಿಬಿಯಿಂದ ಬೇರ್ಪಟ್ಟ ಹರ್ಷಲ್‌ ಪಟೇಲ್‌. ಇವರ ಮೇಲೆ ಸವಾರಿ ಮಾಡಿದ ದಿನೇಶ್‌ ಕಾರ್ತಿಕ್‌ ಒಂದು ಬೌಂಡರಿ, ಒಂದು ಸಿಕ್ಸರ್‌ ಬಾರಿಸಿದರು. ಅರ್ಷದೀಪ್‌ ಪಾಲಾದ ಕೊನೆಯ ಓವರ್‌ನಲ್ಲಿ 10 ರನ್‌ ಅಗತ್ಯ ಬಿತ್ತು. ಕಾರ್ತಿಕ್‌ ಮೊದಲ ಎಸೆತವನ್ನೇ ಸಿಕ್ಸರ್‌ಗೆ ಬಡಿದಟ್ಟಿದರು. 2ನೇ ಎಸೆತ ವೈಡ್‌. ಅನಂತರ ಬೌಂಡರಿ ಶಾಟ್‌!

ಹೀಗೆ ಹತ್ತೇ ಎಸೆತಗಳಿಂದ ಅಜೇಯ 28 ರನ್‌ (3 ಬೌಂಡರಿ, 2 ಸಿಕ್ಸರ್‌) ಬಾರಿಸಿದ ದಿನೇಶ್‌ ಕಾರ್ತಿಕ್‌ ಆರ್‌ಸಿಬಿ ಗೆಲುವು ಸಾರಿದರು. ಚೆನ್ನೈ ಎದುರಿನ ಆರಂಭಿಕ ಪಂದ್ಯದಲ್ಲೂ ದಿನೇಶ್‌ ಕಾರ್ತಿಕ್‌ ಮಿಂಚಿನ ಗತಿಯಲ್ಲಿ 38 ರನ್‌ ಬಾರಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾಗಿದ್ದರು.

2023ರ ಐಪಿಎಲ್‌ನಲ್ಲಿ ದಿನೇಶ್‌ ಕಾರ್ತಿಕ್‌ ತೀರಾ ಕಳಪೆ ನೀಡಿದ್ದರು. ತಂಡಕ್ಕೆ ಅಗತ್ಯವಿದ್ದಾಗಲೆಲ್ಲ ಕೈಕೊಡುತ್ತ ಬಂದಿದ್ದರು. ಹೀಗಾಗಿ ಈ ಬಾರಿ ಇವರ ಮೇಲೆ ಆರ್‌ಸಿಬಿ ಅಭಿಮಾನಿಗಳಿಗೆ ವಿಶೇಷ ನಂಬಿಕೆ ಇರಲಿಲ್ಲ. ಆದರೀಗ ಕಾರ್ತಿಕ್‌ ನಿರೀಕ್ಷೆಗೂ ಮೀರಿದ ಬ್ಯಾಟಿಂಗ್‌ ಮೂಲಕ ಕೆಳ ಕ್ರಮಾಂಕದಲ್ಲಿ ತಂಡಕ್ಕೆ ಶಕ್ತಿ ತುಂಬುತ್ತಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ.

ವಿದೇಶಿಗರ ವೈಫ‌ಲ್ಯ

ಮೊದಲೆರಡು ಪಂದ್ಯಗಳಲ್ಲಿ ಗಮನಿಸಿದಂತೆ ಆರ್‌ಸಿಬಿಯ ವಿದೇಶಿ ಕ್ರಿಕೆಟಿಗರು ಭಾರೀ ವೈಫ‌ಲ್ಯ ಕಾಣುತ್ತಿದ್ದಾರೆ. ಇಂಥ ಸ್ಥಿತಿಯಲ್ಲಿ ದಿನೇಶ್‌ ಕಾರ್ತಿಕ್‌, ಅನುಜ್‌ ರಾವತ್‌, ಮಹಿಪಾಲ್‌ ಲೊಮ್ರೋರ್‌ ಅವರಂಥ ಕೆಳ ಕ್ರಮಾಂಕದ ಆಟಗಾರರು ರನ್‌ ಗಳಿಸುತ್ತಿರುವುದು ಆರ್‌ಸಿಬಿಯ ಹೆಚ್ಚುಗಾರಿಕೆ ಎನ್ನಬಹುದು.

ಆರ್‌ಸಿಬಿಯ ವಿದೇಶಿ ಕ್ರಿಕೆಟಿಗರ “ಸಾಧನೆ’ಯನ್ನೊಮ್ಮೆ ಗಮನಿಸಿ. ಮೊದಲ ಪಂದ್ಯದಲ್ಲಿ ನಾಯಕ ಫಾ ಡು ಪ್ಲೆಸಿಸ್‌ 35 ರನ್‌ ಮಾಡಿದರೂ ಪಂಜಾಬ್‌ ವಿರುದ್ಧ ಮೂರೇ ರನ್ನಿಗೆ ಆಟ ಮುಗಿಸಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌ ಎರಡೂ ಪಂದ್ಯಗಳಲ್ಲಿ ಠುಸ್‌ ಆಗಿದ್ದಾರೆ. ಚೆನ್ನೈ ವಿರುದ್ಧ ಗೋಲ್ಡನ್‌ ಡಕ್‌ ಸಂಕಟವಾದರೆ, ಪಂಜಾಬ್‌ ವಿರುದ್ಧ ಗಳಿಸಿದ್ದು 3 ರನ್‌ ಮಾತ್ರ.

ತಂಡದ ಪಾಲಿನ ದೊಡ್ಡ ಭರವಸೆಯಾಗಿದ್ದ ಕ್ಯಾಮರಾನ್‌ ಗ್ರೀನ್‌ ಗಳಿಸಿದ್ದು 18 ಮತ್ತು 3 ರನ್‌ ಮಾತ್ರ. ಪಂಜಾಬ್‌ ವಿರುದ್ಧ ಇವರನ್ನು ವನ್‌ಡೌನ್‌ನಲ್ಲಿ ಕಳುಹಿಸಿದ ಪ್ರಯೋಗ ಯಶಸ್ವಿಯಾಗಲಿಲ್ಲ.

ವೆಸ್ಟ್‌ ಇಂಡೀಸ್‌ ವೇಗಿ ಅಲ್ಜಾರಿ ಜೋಸೆಫ್ ಯಾವುದೇ ಪರಿಣಾಮ ಬೀರಿಲ್ಲ. ಜತೆಗೆ ಭಾರೀ ದುಬಾರಿಯೂ ಆಗುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 3.4 ಓವರ್‌ಗಳಿಂದ 38 ರನ್‌ ನೀಡಿ ವಿಕೆಟ್‌ ಲೆಸ್‌ ಎನಿಸಿದರು. ಪಂಜಾಬ್‌ ವಿರುದ್ಧ ಒಂದು ವಿಕೆಟ್‌ ಕೆಡವಲು 43 ರನ್‌ ನೀಡಿದರು.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.