ನೊವಾಕ್‌ ಜೊಕೋವಿಕ್‌ ವಿಂಬಲ್ಡನ್‌ ವೀರ: ಸತತ 4ನೇ ಪ್ರಶಸ್ತಿ

 21ನೇ ಗ್ರ್ಯಾನ್‌ಸ್ಲಾಮ್‌ ಗೌರವ : ಕಿರ್ಗಿಯೋಸ್‌ ವಿಫ‌ಲ

Team Udayavani, Jul 10, 2022, 11:45 PM IST

ನೊವಾಕ್‌ ಜೊಕೋವಿಕ್‌ ವಿಂಬಲ್ಡನ್‌ ವೀರ: ಸತತ 4ನೇ ಪ್ರಶಸ್ತಿ

ಲಂಡನ್‌: ಸರ್ಬಿಯನ್‌ ಟೆನಿಸಿಗ ನೊವಾಕ್‌ ಜೊಕೋವಿಕ್‌ ಸತತ 4ನೇ ಸಲ ವಿಂಬಲ್ಡನ್‌ ಪ್ರಶಸ್ತಿಯನ್ನೆತ್ತಿ ತನಗಿಲ್ಲಿ ಯಾರೂ ಸಾಟಿ ಇಲ್ಲ ಎಂದು ಸಾರಿದ್ದಾರೆ.

ರವಿವಾರದ ಫೈನಲ್‌ನಲ್ಲಿ ಅವರು ಆಸ್ಟ್ರೇಲಿಯದ ನಿಕ್‌ ಕಿರ್ಗಿಯೋಸ್‌ ವಿರುದ್ಧ ಮೊದಲ ಸೆಟ್‌ ಕಳೆದುಕೊಂಡು, 4ನೇ ಸೆಟ್‌ ಅನ್ನು ಟೈ ಬ್ರೇಕರ್‌ನಲ್ಲಿ ಗೆದ್ದು ಪರಾಕ್ರಮ ಮೆರೆದರು. ಅಂತರ 4-6, 6-3, 6-4, 7-6 (7-3). ಇದು ಜೊಕೋ ಗೆದ್ದ 21ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ.

ಸೆಮಿಫೈನಲ್‌ನಲ್ಲಿ ವಾಕ್‌ ಓವರ್‌ ಪಡೆದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಕಂಡ ನಿಕ್‌ ಕಿರ್ಗಿಯೋಸ್‌ಗೆ ಇಲ್ಲಿ ಯಾವುದೇ ಮ್ಯಾಜಿಕ್‌ ಸಾಧ್ಯವಾಗಲಿಲ್ಲ.

7ನೇ ವಿಂಬಲ್ಡನ್‌ ಪ್ರಶಸ್ತಿ
ಇದು 8ನೇ ವಿಂಬಲ್ಡನ್‌ ಫೈನಲ್‌ನಲ್ಲಿ ಜೊಕೋವಿಕ್‌ ಜಯಿಸಿದ 7ನೇ ಪ್ರಶಸ್ತಿ. ಅವರು ಸೋತದ್ದು ಒಂದು ಫೈನಲ್‌ನಲ್ಲಿ ಮಾತ್ರ. ಅದು 2013ರಷ್ಟು ಹಿಂದೆ. ಅಂದು ಜೊಕೋಗೆ ಆಘಾತವಿಕ್ಕಿದವರು ಬ್ರಿಟನ್‌ನವರೇ ಆದ ಆ್ಯಂಡಿ ಮರ್ರೆ.

ಜೊಕೋವಿಕ್‌ 2018, 2019 ಮತ್ತು 2021ರಲ್ಲಿ ಕಿರೀಟ ಏರಿಸಿಕೊಂಡು ಹ್ಯಾಟ್ರಿಕ್‌ ಸಾಧಿಸಿದ ಹೆಗ್ಗಳಿಕೆ ಯೊಂದಿಗೆ ಫೈನಲ್‌ ಆಡಲಿಳಿದಿದ್ದರು. ಕೋವಿಡ್‌ ಕಾರಣದಿಂದ 2020ರಲ್ಲಿ ವಿಂಬಲ್ಡನ್‌ ನಡೆದಿರಲಿಲ್ಲ.

ರವಿವಾರದ ಪರಾಕ್ರಮದೊಂದಿಗೆ 7 ಸಲ ವಿಂಬಲ್ಡನ್‌ ಟ್ರೋಫಿಯನ್ನೆತ್ತಿ ಪೀಟ್‌ ಸಾಂಪ್ರಸ್‌ ಅವರೊಂದಿಗೆ ಜೊಕೋ ಜಂಟಿ 2ನೇ ಸ್ಥಾನ ಅಲಂಕರಿಸಿದರು. ರೋಜರ್‌ ಫೆಡರರ್‌ 8 ಸಲ ಚಾಂಪಿಯನ್‌ ಆದದ್ದು ವಿಂಬಲ್ಡನ್‌ ದಾಖಲೆ.
ಇದು ಜೊಕೋವಿಕ್‌ ಆಡಿದ 32ನೇ ಗ್ರ್ಯಾನ್‌ಸ್ಲಾಮ್‌ ಫೈನಲ್‌. ಇದೊಂದು ದಾಖಲೆ. 31 ಫೈನಲ್‌ಗ‌ಳಲ್ಲಿ ಆಡಿದ ರೋಜರ್‌ ಫೆಡರರ್‌ ದಾಖಲೆ ಪತನಗೊಂಡಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.