ಮಯಾಮಿ ಓಪನ್‌ ಟೆನಿಸ್‌ ಪ್ರಿ-ಕ್ವಾರ್ಟರ್‌ ತಲುಪಿದ ಜೊಕೋವಿಕ್‌


Team Udayavani, Mar 26, 2019, 6:00 AM IST

Miami-Open,-Novak-Djokovic,

ಮಯಾಮಿ: “ಮಯಾಮಿ ಓಪನ್‌’ ಕೂಟದಲ್ಲಿ ನಂ.ವನ್‌ ಟೆನಿಸಿಗ ನೋವಾಕ್‌ ಜೊಕೋವಿಕ್‌, ಸಿಮೋನಾ ಹಾಲೆಪ್‌ ಹಾಗೂ ವೀನಸ್‌ ವಿಲಿಯಮ್ಸ್‌ ಪ್ರಿ-ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

7ನೇ ಪ್ರಶಸ್ತಿ ಮೇಲೆ ಗುರಿಯಿಟ್ಟಿರುವ ಜೊಕೋವಿಕ್‌ ಸೋಮವಾರದ ಪಂದ್ಯದಲ್ಲಿ ಆರ್ಜೆಂಟೀನಾದ ಫೆಡ್ರಿಕೊ ಡೆಲ್ಬೋನಿಸ್‌ ವಿರುದ್ಧ 7-5, 4-6, 6-1 ಸೆಟ್‌ಗಳಿಂದ ಸೋಲಿಸಿದರು.

ಈ ಗೆಲುವಿನ ಮೂಲಕ ಜೊಕೋವಿಕ್‌ ಆರ್ಜೆಂಟೀನಾ ಆಟಗಾರರ ವಿರುದ್ಧ ತಮ್ಮ ದಾಖಲೆಯನ್ನು ಇನ್ನಷ್ಟು ಉತ್ತಮಪಡಿಸಿಕೊಂಡರು. 2007ರಿಂದ ಆರ್ಜೆಂಟೀನಾದ ಆಟಗಾರ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ಮಾತ್ರ ಜೊಕೋವಿಕ್‌ ವಿರುದ್ಧ ಗೆಲುವು ದಾಖಲಿಸಿದ್ದರು. ಉಳಿದಂತೆ ಆರ್ಜೆಂಟೀನಾದ ಯಾವುದೇ ಆಟಗಾರ ಜೊಕೋ ವಿರುದ್ಧ ಮೇಲುಗೈ ಸಾಧಿಸಿಲ್ಲ.

ಜೊಕೋವಿಕ್‌ ಅವರ ಮುಂದಿನ ಎದುರಾಳಿ 22ನೇ ಶ್ರೇಯಾಂಕಿತ ಸ್ಪೇನ್‌ ಟೆನಿಸಿಗ ರಾಬರ್ಟೊ ಬಟಿಸ್ಟ ಅಗುಟ್‌. ಅವರು ಇಟಲಿಯ ಫ್ಯಾಬಿಯೊ ಫೊಗ್ನಿನಿ ವಿರುದ್ಧ 6-1, 6-4 ನೇರ ಸೆಟ್‌ಗಳಿಂದ ಜಯ ಸಾಧಿಸಿದರು.

ಹಾಲಿ ಚಾಂಪಿಯನ್‌, ಅಮೆರಿಕದ ಜಾನ್‌ ಇಸ್ನರ್‌ ಸ್ಪೇನ್‌ನ ಆಲ್ಬರ್ಟ್‌ ರವೋಸ್‌ ವಿನೋಲಸ್‌ ಅವರನ್ನು 7-5, 7-6 (8-6) ಸೆಟ್‌ಗಳಿಂದ ಸೋಲಿಸಿದರು. ಮುಂದಿನ ಪಂದ್ಯದಲ್ಲಿ ಅವರ ಎದುರಾಳಿ ಬ್ರಿಟನ್ನಿನ ಕೈಲ್‌ ಎಡ್ಮಂಡ್‌. ಅವರು ಕೆನಡಾದ ಮಿಲೋಸ್‌ ರಾನಿಕ್‌ ವಿರುದ್ಧ 6-4, 6-4 ನೇರ ಸೆಟ್‌ಗಳಿಂದ ಗೆದ್ದರು.

ಹಾಲೆಪ್‌-ವೀನಸ್‌ ಮುಖಾಮುಖೀ
ನಂ.1 ಪಟ್ಟವನ್ನು ಮತ್ತೆ ಪಡೆಯುವ ಕನಸನ್ನು ಜೀವಂತವಾಗಿರಿಸಿರುವ ರೊಮೇನಿಯಾದ ಸಿಮೋನಾ ಹಾಲೆಪ್‌ ಸ್ಲೋವೆನಿಯಾದ ಪೊಲೊನಾ ಹರ್ಕಾಂಗ್‌ ವಿರುದ್ಧ 5-7, 7-6 (7-1), 6-2 ಜಯಿಸಿ 16ನೇ ಸುತ್ತು ಪ್ರವೇಶಿಸಿದ್ದಾರೆ. ಇಲ್ಲಿ ಅವರು ವೀನಸ್‌ ವಿಲಿಯಮ್ಸ್‌ ವಿರುದ್ಧ ಆಡಲಿದ್ದಾರೆ. ಸದ್ಯ 3ನೇ ರ್‍ಯಾಂಕಿನಲ್ಲಿರುವ ಹಾಲೆಪ್‌ ಚೊಚ್ಚಲ “ಮಯಾಮಿ ಓಪನ್‌’ ಜಯಿಸಿದರೆ ಮತ್ತೆ ಅಗ್ರಸ್ಥಾನಕ್ಕೇರುವ ಅವಕಾಶವಿದೆ.

ಇನ್ನೊಂದು ಪಂದ್ಯದಲ್ಲಿ 7 ಬಾರಿಯ ಗ್ರ್ಯಾನ್‌ ಸ್ಲಾಮ್‌ ಚಾಂಪಿಯನ್‌ ವೀನಸ್‌ ವಿಲಿಯಮ್ಸ್‌ ರಶ್ಯದ ದರಿಯಾ ಕಸತ್ಕಿನಾ ಅವರನ್ನು 6-3, 6-1 ನೇರ ಗೇಮ್‌ಗಳಿಂದ ಸೋಲಿಸಿದರು.

ಚಾಂಪಿಯನ್‌ ಸ್ಟೀಪನ್ಸ್‌ ಔಟ್‌
ಇನ್ನೊಂದೆಡೆ ಅಮೆರಿಕದ ಸ್ಲೋನ್‌ ಸ್ಟೀಫ‌ನ್ಸ್‌ ಅವರ ಪ್ರಶಸ್ತಿ ಉಳಿಸಿಕೊಳ್ಳುವ ಆಟ ಕೊನೆಗೊಂಡಿದೆ. ಅವರು ಜರ್ಮನಿಯ ತಜಾನಾ ಮರಿಯಾ ವಿರುದ್ಧ 6-3, 6-2 ಸೆಟ್‌ಗಳಿಂದ ಪರಾಭವಗೊಂಡರು. ಸ್ಪೀಫ‌ನ್ಸ್‌ ಅವರಿಗಿದು ಎರಡನೇ ಅನಿರೀಕ್ಷಿತ ಸೋಲು. ಕಳೆದ ಇಂಡಿಯನ್‌ ವೆಲ್ಸ್‌ ಕೂಟದಲ್ಲಿ ಅವರು 3ನೇ ಸುತ್ತಿನಲ್ಲೇ ಎಡವಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.