ಸುದೀರ್ಘ ಸ್ನಾನ ಮಾಡಬೇಡಿ: ಕ್ರಿಕೆಟಿಗರಿಗೆ ಬಿಸಿಸಿಐ ಸೂಚನೆ
Team Udayavani, Aug 16, 2022, 11:10 PM IST
ಹರಾರೆ: ಜಿಂಬಾಬ್ವೆ ರಾಜಧಾನಿ ಹರಾರೆಯಲ್ಲೀಗ ನೀರಿನ ತೀವ್ರ ಅಭಾವ ತಲೆದೋರಿದೆ. ಕೆಲವು ಕಡೆ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ಇಂಥ ಸಂದರ್ಭದಲ್ಲೇ ಟೀಮ್ ಇಂಡಿಯಾ 3 ಪಂದ್ಯಗಳ ಸರಣಿಗಾಗಿ ಹರಾರೆಯಲ್ಲಿ ಬೀಡುಬಿಟ್ಟಿದೆ. ಇಲ್ಲಿನ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಕ್ರಿಕೆಟಿಗರಿಗೆ ಸುದೀರ್ಘ ಸ್ನಾನ ಮಾಡದಂತೆ ಸೂಚಿಸಿದೆ.
“ಅನಿವಾರ್ಯ ಸಂದರ್ಭದಲ್ಲಷ್ಟೇ ಸ್ನಾನ ಮಾಡಿ. ನೀರನ್ನು ಪೋಲು ಮಾಡಬೇಡಿ. ಕಡಿಮೆ ನೀರನ್ನು ಬಳಸಿ’ ಎಂದು ಬಿಸಿಸಿಐ ಹೇಳಿದೆ.
ಕ್ರಿಕೆಟಿಗರು ನಾನಾ ಒತ್ತಡದ ಸಂದರ್ಭದಲ್ಲಿ, ಔಟಾಗಿ ಬಂದೊಡನೆ ಒತ್ತಡವನ್ನು ನಿವಾರಿಸುವ ಸಲುವಾಗಿ ಶವರ್ ಕೆಳಗೆ ಗಂಟೆಗಟ್ಟಲೆ ನಿಂತು ಸ್ನಾನ ಮಾಡುವುದಿದೆ.
ಈ ಬಾರಿ ಹರಾರೆಯಲ್ಲಿ ಇದಕ್ಕೆಲ್ಲ ಕಡಿವಾಣ ಹಾಕಲಾಗಿದೆ. ಅಲ್ಲದೇ ಭಾರತದ ಕ್ರಿಕೆಟಿಗರಿಗೆ ಈಜುಕೊಳದ ಅಭ್ಯಾಸಕ್ಕೂ ಅವಕಾಶ ಕಲ್ಪಿಸಲಾಗಿಲ್ಲ.
2018ರ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯೂ ಭಾರತೀಯ ಕ್ರಿಕೆಟಿಗರಿಗೆ ಇಂಥದೇ ಪರಿಸ್ಥಿತಿ ಎದುರಾಗಿತ್ತು. ಅಂದು ಕೇಪ್ಟೌನ್ನಲ್ಲಿ ನೀರಿನ ಅಭಾವ ತಲೆದೋರಿದಾಗ ಮಿತವಾಗಿ ನೀರನ್ನು ಬಳಸಲು ಬಿಸಿಸಿಐ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ