ದ್ರಾವಿಡ್ ಸ್ವಹಿತಾಸಕ್ತಿ ವಿಚಾರಣೆ ಸೆ. 26ಕ್ಕೆ
Team Udayavani, Aug 27, 2019, 5:08 AM IST
ಹೊಸದಿಲ್ಲಿ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ (ಎನ್ಸಿಎ) ರಾಹುಲ್ ದ್ರಾವಿಡ್ ಅವರ ಸ್ವಹಿತಾಸಕ್ತಿ ಸಂಘರ್ಷದ ವಿಚಾರಣೆ ಸೆ. 26ಕ್ಕೆ ಮುಂಬಯಿಯಲ್ಲಿ ನಡೆಯಲಿದೆ. ಬಿಸಿಸಿಐನ ವಿಶೇಷ ವಿಚಾರಣಾಧಿಕಾರಿ ಡಿ.ಕೆ. ಜೈನ್ ಅವರು ದ್ರಾವಿಡ್ಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.
ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ದ್ರಾವಿಡ್ ವಿರುದ್ಧ ಸ್ವಹಿತಾಸಕ್ತಿ ಸಂಘರ್ಷದ ದೂರು ದಾಖಲಿಸಿದ್ದಾರೆ. ಇಂಡಿಯಾ ಸಿಮೆಂಟ್ಸ್ ಉಪಾಧ್ಯಕ್ಷನಾಗುವುದರ ಜತೆಗೆ, ಎನ್ಸಿಎ ಮುಖ್ಯಸ್ಥರಾಗಿರುವುದು ಸ್ವಹಿತಾಸಕ್ತಿ ಎನ್ನುವುದು ಆರೋಪ.