ಧ್ರುವ ಜುರೆಲ್‌ ಶತಕ; ಭಾರತ ಚಾಂಪಿಯನ್‌

ಅಂಡರ್‌-19 ಚತುಷ್ಕೋನ ಏಕದಿನ ಕ್ರಿಕೆಟ್‌ ಸರಣಿ

Team Udayavani, Jan 10, 2020, 12:16 AM IST

Dhruv-Jurel

ಡರ್ಬನ್‌: ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಅಭ್ಯಾಸಾರ್ಥವಾಗಿ ನಡೆದ ಚತುಷ್ಕೋನ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಗುರುವಾರ ಡರ್ಬನ್‌ನ “ಕಿಂಗ್ಸ್‌ಮೀಡ್‌ ಸ್ಟೇಡಿಯಂ’ನಲ್ಲಿ ನಡೆದ ಫೈನಲ್‌ ಹಣಾಹಣಿಯಲ್ಲಿ ಪ್ರಿಯಂ ಗರ್ಗ್‌ ಸಾರಥ್ಯದ ಭಾರತದ ಕಿರಿಯರ ಪಡೆ ಆತಿಥೇಯ ದಕ್ಷಿಣ ಆಫ್ರಿಕಾವನ್ನು 69 ರನ್ನುಗಳಿಂದ ಬಗ್ಗುಬಡಿಯಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಭಾರತ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಧ್ರುವ ಜುರೆಲ್‌ ಅವರ ಆಕರ್ಷಕ ಶತಕ ಸಾಹಸದಿಂದ 7 ವಿಕೆಟಿಗೆ 259 ರನ್‌ ಪೇರಿಸಿ ಸವಾಲೊಡ್ಡಿತು. ಜವಾಬಿತ್ತ ದಕ್ಷಿಣ ಆಫ್ರಿಕಾ 43.1 ಓವರ್‌ಗಳಲ್ಲಿ 190ಕ್ಕೆ ಆಲೌಟ್‌ ಆಯಿತು.

4ನೇ ವಿಕೆಟಿಗೆ 164 ರನ್‌
ಭಾರತದ ಆರಂಭ ಅತ್ಯಂತ ಆಘಾತಕಾರಿ ಯಾಗಿತ್ತು. ವೇಗಿ ಗೆರಾಲ್ಡ್‌ ಕೋಟಿj ದಾಳಿಗೆ ತತ್ತರಿಸಿ 13 ರನ್‌ ಆಗುವಷ್ಟರಲ್ಲಿ 3 ವಿಕೆಟ್‌ ಉದುರಿಸಿಕೊಂಡಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್‌ (0), ದಿವ್ಯಾಂಶ್‌ ಸಕ್ಸೇನಾ (6) ಮತ್ತು ನಾಯಕ ಪ್ರಿಯಂ ಗರ್ಗ್‌ (2) ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಭಾರತದ ಸ್ಥಿತಿ ಚಿಂತಾಜನಕವೆನಿಸಿತು.

ಆದರೆ ವನ್‌ಡೌನ್‌ ಬ್ಯಾಟ್ಸ್‌ಮನ್‌ ತಿಲಕ್‌ ವರ್ಮ ಮತ್ತು ವಿಕೆಟ್‌ ಕೀಪರ್‌ ಧ್ರುವ ಜುರೆಲ್‌ ಹರಿಣಗಳ ದಾಳಿಗೆ ಸಡ್ಡು ಹೊಡೆದು ನಿಂತರು. ನಿಧಾನವಾಗಿ ಇನ್ನಿಂಗ್ಸ್‌ ಬೆಳೆಸುತ್ತ 4ನೇ ವಿಕೆಟಿಗೆ 164 ರನ್‌ ಪೇರಿಸಿದರು.

44ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಉತ್ತರಪ್ರದೇಶದ ಬಲಗೈ ಆಟಗಾರ ಧ್ರುವ ಜುರೆಲ್‌ ಆಕರ್ಷಕ ಹಾಗೂ ಜವಾಬ್ದಾರಿಯುತ ಆಟವಾಡಿ 101 ರನ್‌ ಬಾರಿಸಿದರು. 115 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್‌ ಒಳಗೊಂಡಿತ್ತು.

ಹೈದರಾಬಾದ್‌ನ ಎಡಗೈ ಬ್ಯಾಟ್ಸ್‌ಮನ್‌ ತಿಲಕ್‌ ವರ್ಮ ಕೊಡುಗೆ 70 ರನ್‌. 103 ಎಸೆತ ಎದುರಿಸಿದ ವರ್ಮ, 7 ಬೌಂಡರಿ, 1 ಸಿಕ್ಸರ್‌ ಹೊಡೆದರು.

ಈ ಜೋಡಿ ಬೇರ್ಪಟ್ಟ ಬಳಿಕ ಸಿದ್ದೇಶ್‌ ವೀರ್‌ ಸಿಡಿದು ನಿಂತರು. 37 ಎಸೆತಗಳಿಂದ ಅಜೇಯ 48 ರನ್‌ ಬಾರಿಸಿದರು (3 ಬೌಂಡರಿ, 2 ಸಿಕ್ಸರ್‌).

ಜಾಕ್‌ ಲೀಸ್‌ ಹೋರಾಟ
ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ನಿರಂತರವಾಗಿ ವಿಕೆಟ್‌ಗಳನ್ನು ಉರುಳಿಸಿಕೊಳ್ಳುತ್ತ ಹೋಯಿತು. 95 ರನ್‌ ಆಗುವಷ್ಟರಲ್ಲಿ 5 ಮಂದಿಯ ಆಟ ಮುಗಿದಿತ್ತು. ಆದರೆ ಕೆಳ ಕ್ರಮಾಂಕದಲ್ಲಿ ಜಾಕ್‌ ಲೀಸ್‌ ಉತ್ತಮ ಹೋರಾಟವೊಂದನ್ನು ಸಂಘಟಿಸಿ ಆತಿಥೇಯರ ಆಸೆಯನ್ನು ಜೀವಂತವಾಗಿರಿಸಿದರು. ಲೀಸ್‌ ಆಫ್ರಿಕಾ ಸರದಿಯ ಏಕೈಕ ಅರ್ಧ ಶತಕಕ್ಕೆ ಸಾಕ್ಷಿಯಾದರು (52).

ಸ್ಪಿನ್ನರ್‌ಗಳಾದ ಅಥರ್ವ ಅಂಕೋಲೆಕರ್‌ 4, ರವಿ ಬಿಶ್ನೋಯಿ 2 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರ್‌
ಭಾರತ-7 ವಿಕೆಟಿಗೆ 259 (ಧ್ರುವ ಜುರೆಲ್‌ 101, ತಿಲಕ್‌ ವರ್ಮ 70, ಸಿದ್ದೇಶ್‌ ವೀರ್‌ ಔಟಾಗದೆ 48, ಗೆರಾಲ್ಡ್‌ ಕೋಟಿj 19ಕ್ಕೆ 3). ದಕ್ಷಿಣ ಆಫ್ರಿಕಾ-43.1 ಓವರ್‌ಗಳಲ್ಲಿ 190 (ಲೀಸ್‌ 52, ಬರ್ಡ್‌ 39, ವುÂರೆನ್‌ 24, ಅಂಕೋಲೆಕರ್‌ 31ಕ್ಕೆ 4, ಬಿಶ್ನೋಯಿ 29ಕ್ಕೆ 2).

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.