- Saturday 07 Dec 2019
ಈಡೆನ್ ಪಿಂಕ್ ಟೆಸ್ಟ್ ; ಇಶಾಂತ್ ದಾಳಿಗೆ ಬಾಂಗ್ಲಾ ಬ್ಯಾಟ್ಸ್ ಮನ್ ಗಳು ಕಂಗಾಲು
ಪಿಂಕ್ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಇಶಾಂತ್ ಶರ್ಮಾ
Team Udayavani, Nov 22, 2019, 6:02 PM IST
ಕೊಲ್ಕೊತ್ತಾ: ಇಲ್ಲಿನ ಈಡೆನ್ ಗಾರ್ಡನ್ ಮೈದಾನದಲ್ಲಿ ಭಾರತ ಮತ್ತು ಬಾಂಗ್ಲಾ ದೇಶಗಳ ನಡುವೆ ನಡೆಯುತ್ತಿರುವ ಮೊತ್ತ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯಾಟದಲ್ಲಿ ಭಾರತೀಯ ಬೌಲರ್ ಗಳ ನಿಖರ ದಾಳಿಗೆ ಅಂಜಿ ಬಾಂಗ್ಲಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡಿದ್ದಾರೆ. ಇದರ ಪರಿಣಾಮವಾಗಿ ಬಾಂಗ್ಲಾ ತನ್ನ ಪ್ರಥಮ ಇನ್ನಿಂಗ್ಸ್ ನಲ್ಲಿ 106 ರನ್ ಗಳಿಗೆ ಆಲೌಟಾಗಿದೆ.
ಪಿಂಕ್ ಚೆಂಡಿನ ಮೋಡಿಗೆ ಪರದಾಡಿದ ಬಾಂಗ್ಲಾ ಬ್ಯಾಟ್ಸ್ ಮನ್ ಗಳು ಒಬ್ಬರ ಹಿಂದೊಬ್ಬರು ಪೆವಿಲಿಯನ್ ಪರೇಡ್ ನಡೆಸಿದರು. ಆರಂಭಿಕ ಬ್ಯಾಟ್ಸ್ ಮನ್ ಶದ್ಮಾನ್ ಇಸ್ಲಾಂ (29), ಲಿಟನ್ ದಾಸ್ (ಗಾಯಗೊಂಡು ನಿವೃತ್ತಿ 24) ಹಾಗೂ ನಯೀಮ್ ಹಸನ್ (19) ಮಾತ್ರವೇ ಎರಡಂಕೆ ಮೊತ್ತವನ್ನು ದಾಖಲಿಸಲು ಸಫಲರಾದರು. ಬಾಂಗ್ಲಾ ಬ್ಯಾಟಿಂಗ್ ಸರದಿಯಲ್ಲಿ ನಾಲ್ವರು ಬ್ಯಾಟ್ಸ್ ಮನ್ ಗಳು ಶೂನ್ಯಕ್ಕೆ ಔಟಾಗಿದ್ದು ಭಾರತೀಯ ವೇಗಿಗಳ ಪಿಂಕ್ ಬಾಲ್ ಮೊನಚಿಗೆ ಸಾಕ್ಷಿಯಾಗಿತ್ತು.
ವೇಗಿ ಇಶಾಂತ್ ಶರ್ಮಾ ಅವರು 05 ವಿಕೆಟ್ ಪಡೆಯುವ ಮೂಲಕ ಪಿಂಕ್ ಬಾಲ್ ಟೆಸ್ಟ್ ಪಂದ್ಯಾಟದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರರಾದರು. ಉಳಿದಂತೆ ಉಮೇಶ್ ಯಾದವ್ ಮತ್ತು ಮಹಮ್ಮದ್ ಶಮಿ ಕ್ರಮವಾಗಿ 03 ಮತ್ತ 02 ವಿಕೆಟ್ ಪಡೆದರು. ನಾಲ್ವರು ಬಾಂಗ್ಲಾ ಬ್ಯಾಟ್ಸ್ ಮನ್ ಗಳು ಬೌಲ್ಡ್ ಆಗಿದ್ದು ಇನ್ನಿಂಗ್ಸ್ ನ ಇನ್ನೊಂದು ವಿಶೇಷವಾಗಿತ್ತು.
ಬಾಂಗ್ಲಾದ ಸಾಧಾರಣ ಮೊತ್ತಕ್ಕೆ ಉತ್ತರವಾಗಿ ತನ್ನ ಪ್ರಥಮ ಇನ್ನಿಂಗ್ಸ್ ಪ್ರಾರಂಭಿಸಿದ ಭಾರತ ಈ ವರದಿ ಪ್ರಕಟವಾಗುವ ಸಮಯದವರೆಗೆ ಮಯಾಂಕ್ ಅಗರ್ವಾಲ್ (14) ಅವರ ವಿಕೆಟ್ ಕಳೆದುಕೊಂಡು 35 ರನ್ ಗಳಿಸಿ ಆಟವಾಡುತ್ತಿದೆ. ರೋಹಿತ್ ಶರ್ಮಾ ಮತ್ತು ಚೇತೇಶ್ವರ ಪೂಜಾರ ಅವರು ಬ್ಯಾಟಿಂಗ್ ನಡೆಸುತ್ತಿದ್ದಾರೆ.
ಪ್ರಥಮ ಇನ್ನಿಂಗ್ಸ್ ನಲ್ಲಿ ಬಾಂಗ್ಲಾ ಆಟ 30.3 ಓವರ್ ಗಳಿಗೆ ಆಲೌಟ್ ಆಯ್ತು. ರಾತ್ರಿ ಬಳಿಕ ಈ ಮೈದಾನದಲ್ಲಿ ಇಬ್ಬನಿ ಬೀಳುವ ಸಾಧ್ಯತೆ ಇರುವುದರಿಂದ ಎರಡನೇ ಅವಧಿಯ ಆಟ ಹೇಗೆ ಸಾಗಲಿದೆ ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳದ್ದಾಗಿದೆ.
ಈ ವಿಭಾಗದಿಂದ ಇನ್ನಷ್ಟು
-
ಮುಂಬಯಿ: ಇತ್ತೀಚೆಗೆ ವಿಶ್ವ ದರ್ಜೆಯ ಕ್ರಿಕೆಟಿಗರು ವಿಪರೀತ ಒತ್ತಡದಿಂದಾಗಿ ಖಿನ್ನತೆಗೆ ಒಳಗಾಗುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಸ್ಟ್ರೇಲಿಯದ...
-
ಪೋಖರಾ (ನೇಪಾಲ): 13ನೇ ಸೌತ್ ಏಶ್ಯನ್ ಗೇಮ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಭಾರತ ತನ್ನ ಪ್ರಾಬಲ್ಯ ಮುಂದುವರಿಸಿದೆ. ಶುಕ್ರವಾರ ಆಶ್ಮಿತಾ ಚಾಲಿಹಾ ಮತ್ತು...
-
ಮೆಲ್ಬರ್ನ್: ಭಾರತ ತನ್ನ ಕ್ರಿಕೆಟ್ ಇತಿಹಾಸದ ಮೊದಲ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಯಶಸ್ವಿಯಾಗಿ ಆಡಿ ಮುಗಿಸಿದೆ. ಮುಂದೆ ಭಾರತ ಪ್ರವಾಸ ಕೈಗೊಳ್ಳಲಿರುವ ತಂಡಗಳು...
-
ಹೈದರಾಬಾದ್: ವೆಸ್ಟ್ ಇಂಡೀಸಿನ ಬೃಹತ್ ಮೊತ್ತಕ್ಕೆ ಬೆದರದೇ ಮುನ್ನುಗ್ಗಿ ಹೋದ ಭಾರತ, ಹೈದರಾಬಾದ್ ಟಿ20 ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದು ಮೆರೆದಾಡಿದೆ. ಕೆ.ಎಲ್....
-
ನವದೆಹಲಿ: ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಟಿ20 ಕ್ರಿಕೆಟ್ ಕೂಟದ ಪ್ರಮುಖ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಮಾಲೀಕರಾಗಿ ಮಾಜಿ...
ಹೊಸ ಸೇರ್ಪಡೆ
-
ಲಕ್ನೋ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಎಗ್ಗಿಲ್ಲದೇ ಮುಂದುವರಿದಿದೆ. ಗುರುವಾರವಷ್ಟೇ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಮೇಲೆ ಬೆಂಕಿ ಹಚ್ಚಿ...
-
ಹೊಸದಿಲ್ಲಿ: ಪಾಕಿಸ್ಥಾನ, ಅಫ್ಘಾನಿಸ್ಥಾನ, ಬಾಂಗ್ಲಾದೇಶಗಳಲ್ಲಿ ಕಿರುಕುಳ ಅನುಭವಿಸುತ್ತಿದ್ದವರಿಗೆ ಉತ್ತಮ ನಾಳೆಯ ಅವಕಾಶವನ್ನು ಕಲ್ಪಿಸುವುದೇ ಪೌರತ್ವ (ತಿದ್ದುಪಡಿ)...
-
ಹೊಸದಿಲ್ಲಿ: ಈರುಳ್ಳಿ ದರ ಕಡಿಮೆಯಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿ ಸುತ್ತಿಲ್ಲ. ಶುಕ್ರವಾರ ಈರುಳ್ಳಿ ಬೆಲೆ ಕೇಜಿಗೆ 165 ರೂ. ತಲುಪಿದೆ. ವಿದೇಶಗಳಿಂದ ಆಮದು ಮಾಡಿಕೊಂಡಿರುವ...
-
ನವದೆಹಲಿ: ತನ್ನನ್ನು ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನ ಸಹಿತ ಇತರೇ ನಾಲವರು ದುಷ್ಕರ್ಮಿಗಳಿಂದ ಗುರುವಾರದಂದು ಹಲ್ಲೆಗೊಳಗಾಗಿ ಬಳಿಕ ಬೆಂಕಿ ಹಚ್ಚಲ್ಪಟ್ಟಿದ್ದ...
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...