ಏಕದಿನ: ವನಿತೆಯರಿಗೆ ಸರಣಿ ಗೆಲುವಿನ ತವಕ


Team Udayavani, Sep 21, 2022, 6:15 AM IST

ಏಕದಿನ: ವನಿತೆಯರಿಗೆ ಸರಣಿ ಗೆಲುವಿನ ತವಕ

ಕ್ಯಾಂಟರ್‌ಬರಿ: ಇಂಗ್ಲೆಂಡ್‌ ನೆಲದಲ್ಲಿ 1999ರ ಬಳಿಕ ಏಕದಿನ ಸರಣಿಯನ್ನು ಗೆಲ್ಲುವ ಉಜ್ವಲ ಅವಕಾಶವೊಂದು ಭಾರತದ ವನಿತೆಯರಿಗೆ ಎದುರಾಗಿದೆ.

ಬುಧವಾರ ಕ್ಯಾಂಟರ್‌ಬರಿಯ  ಸೇಂಟ್‌ ಲಾರೆನ್ಸ್‌ ಗ್ರೌಂಡ್‌ನ‌ಲ್ಲಿ ದ್ವಿತೀಯ ಮುಖಾಮುಖಿ ನಡೆಯಲಿದ್ದು, ಇದನ್ನು ಗೆದ್ದರೆ ಐತಿಹಾಸಿಕ ಸರಣಿ ಹರ್ಮನ್‌ಪ್ರೀತ್‌ ಕೌರ್‌ ಬಳಗದ್ದಾಗಲಿದೆ. 1999ರಲ್ಲಿ ಭಾರತ ಕೊನೆಯ ಸಲ ಇಂಗ್ಲೆಂಡ್‌ ನೆಲದಲ್ಲಿ ಸರಣಿ ಜಯಭೇರಿ ಮೊಳಗಿಸಿತ್ತು. ಅಂಜುಮ್‌ ಚೋಪ್ರಾ ಅವರ ಶತಕ ಹಾಗೂ ಅರ್ಧಶತಕ ಭಾರತದ 2-1 ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

ಗೆಲುವಿನೊಂದಿಗೆ ಆರಂಭ: ಈ ಬಾರಿ ಭಾರತ ತಂಡ ಜಯದೊಂದಿಗೆ ಸರಣಿ ಆರಂಭಿಸಿದೆ. ಹೋವ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ನಮ್ಮ ವನಿತೆಯರು 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದರು. ಇದೇ ಲಯದಲ್ಲಿ ಸಾಗಿದರೆ ದ್ವಿತೀಯ ಪಂದ್ಯವನ್ನೂ ವಶಪಡಿಸಿಕೊಳ್ಳಬಹುದು. ಆದರೆ ಈ ಸರಣಿ ಅಂತಿಮ ಪಂದ್ಯದಲ್ಲಿ ಇತ್ಯರ್ಥವಾದರೆ ಕಷ್ಟ. ಏಕೆಂದರೆ, ಭಾರತದ ವನಿತೆಯರು ನಿರ್ಣಾಯಕ ಮುಖಾಮುಖೀಯಲ್ಲಿ ಗೆಲುವಿನ ಮುಖ ಕಾಣುವುದೇ ಅಪರೂಪ!

39 ವರ್ಷದ ಅನುಭವಿ ವೇಗಿ ಜೂಲನ್‌ ಗೋಸ್ವಾಮಿಗೆ ಸ್ಮರಣೀಯ ವಿದಾಯ ಕೋರಲಿಕ್ಕಾದರೂ ಭಾರತ ಈ ಸರಣಿಯನ್ನು ಗೆಲ್ಲಲೇಬೇಕಿದೆ. ಹೋವ್‌ ಪಂದ್ಯದಲ್ಲಿ ಸ್ವತಃ ಜೂಲನ್‌ ಅವರೇ ಮುಂಚೂಣಿಯಲ್ಲಿ ನಿಂತು ಇಂಗ್ಲೆಂಡ್‌ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದ್ದನ್ನು ಮರೆಯುವಂತಿಲ್ಲ. ಅಲ್ಲಿ ಇವರ ಬೌಲಿಂಗ್‌ ಫಿಗರ್‌ ಇಷ್ಟೊಂದು ಆಕರ್ಷಕವಾಗಿತ್ತು: 10-2-20-1.

ಚೇಸಿಂಗ್‌ ವೇಳೆ ಸ್ಮತಿ ಮಂಧನಾ, ಯಾಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್‌ ಕೌರ್‌ ಇಂಗ್ಲೆಂಡ್‌ ಬೌಲಿಂಗ್‌ ಆಕ್ರಮಣಕ್ಕೆ ಸಡ್ಡು ಹೊಡೆದು ನಿಂತಿದ್ದರು. ಆದರೆ ಶಫಾಲಿ ವರ್ಮ ಕ್ಲಿಕ್‌ ಆಗಿರಲಿಲ್ಲ. ಈ ಡ್ಯಾಶಿಂಗ್‌ ಓಪನರ್‌ ಸಿಡಿದು ನಿಂತರೆ ಭಾರತಕ್ಕೆ ಬಂಪರ್‌ ಖಂಡಿತ.

ತಿರುಗಿ ಬಿದ್ದೀತು ಇಂಗ್ಲೆಂಡ್‌: ಇಂಗ್ಲೆಂಡ್‌ ಅಷ್ಟು ಸುಲಭದಲ್ಲಿ ಶರಣಾಗುವ ತಂಡವಲ್ಲ, ಅದೂ ತವರು ನೆಲದಲ್ಲಿ. ಮೂವರು ಪ್ರಮುಖ ಆಟಗಾರ್ತಿಯರ ಗೈರು ಇಂಗ್ಲೆಂಡ್‌ಗೆ ಹಿನ್ನಡೆಯಾಗಿ ಪರಿಣಮಿಸಿದೆ. ಮೊದಲ ಪಂದ್ಯದಲ್ಲಿ ಭಾರತ ಇದರ ಲಾಭವನ್ನು ಚೆನ್ನಾಗಿಯೇ ಪಡೆದುಕೊಂಡಿದೆ. ಇಂಗ್ಲೆಂಡ್‌ ಅಗ್ರ ಕ್ರಮಾಂಕದಲ್ಲಿ ವೈಫ‌ಲ್ಯ ಕಂಡಿತ್ತು. ಅಲೈಸ್‌ ಕ್ಯಾಪ್ಸಿ, ಸೋಫಿಯಾ ಡಂಕ್ಲಿ, ಡೇನಿಯಲ್‌ ವ್ಯಾಟ್‌, ಕೊನೆಯಲ್ಲಿ ಡೇವಿಡ್‌ಸನ್‌ ರಿಚರ್ಡ್ಸ್‌ ಬಿರುಸಿನ ಆಟವಾಡಿದ್ದರಿಂದ ತಂಡದ ಮೊತ್ತ ಇನ್ನೂರರ ಗಡಿ ದಾಟಿತ್ತು. ಇವರು ಮತ್ತೆ ಅಪಾಯಕಾರಿಯಾಗಿ ಗೋಚರಿಸುವ ಎಲ್ಲ ಸಾಧ್ಯತೆ ಇದೆ.

 

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.