‘ವರ್ಷದ ನ್ಯೂಝಿಲ್ಯಾಂಡಿಗ’ ಪ್ರಶಸ್ತಿ ರೇಸ್ ನಲ್ಲಿ ಬೆನ್ ಸ್ಟೋಕ್ಸ್!

ನೈಟ್ ಹುಡ್ ಗೌರವಕ್ಕೂ ಬೆನ್ ಸ್ಟೋಕ್ಸ್ ಹೆಸರು ಶಿಫಾರಸು

Team Udayavani, Jul 19, 2019, 7:11 PM IST

Ben-Stokes-726

ವೆಲ್ಲಿಂಗ್ಟನ್ : ವಿಚಿತ್ರವೆಂದರೆ ಇದೇ ಇರ್ಬೇಕು. ಈ ಸಲದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ತನ್ನ ದೇಶದ ತಂಡ ಸೋಲಲು ಪ್ರಮುಖ ಕಾರಣಕರ್ತನಾದವ ಆ ದೇಶದ ಉನ್ನತ ಗೌರವ ಪ್ರಶಸ್ತಿಗೆ ಶಿಫಾರಸುಗೊಳ್ಳುವುದೆಂದರೆ… ಹೌದು, ನ್ಯೂಝಿಲ್ಯಾಂಡ್ ಮೂಲದ ಇಂಗ್ಲೆಂಡ್ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಅವರು ಈ ಸಾಲಿನ ‘ವರ್ಷದ ನ್ಯೂಝಿಲ್ಯಾಂಡಿಗ’ ಪ್ರಶಸ್ತಿಗೆ ಶಿಫಾರಸುಗೊಂಡಿದ್ದಾರೆ.

ನ್ಯೂಝಿಲ್ಯಾಂಡ್ ಮೂಲದವರಾಗಿದ್ದು ಮತ್ತು ಸದ್ಯ ಇಂಗ್ಲೆಂಡ್ ಕ್ರಿಕೆಟ್ ತಂಡದ ಸದಸ್ಯರಾಗಿರುವ ಸ್ಟೋಕ್ಸ್ ಅವರು ಈ ಬಾರಿಯ ಫೈನಲ್ ನಲ್ಲಿ ಆಂಗ್ಲರ ಜಯದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಕೂಟದುದ್ದಕ್ಕೂ ಜಬರ್ದಸ್ತ್ ಆಟವನ್ನು ಪ್ರದರ್ಶಿಸಿದ್ದ ಸ್ಟೋಕ್ಸ್ ಅವರು ಕೂಟದಲ್ಲಿ ಒಟ್ಟು 465 ರನ್ ಗಳನ್ನು ಬಾರಿಸಿದ್ದರು ಮತ್ತು ಫೈನಲ್ ನಲ್ಲಿ ನಿರ್ಣಾಯಕ ಆಟವಾಡುವ ಮೂಲಕ 84 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಿದ್ದರು. ನ್ಯೂಝಿಲ್ಯಾಂಡ್ ತಂಡವನ್ನು ಫೈನಲ್ ವರೆಗೆ ಮುನ್ನಡೆಸಿದ ನಾಯಕ ಕೇನ್ ವಿಲಿಯಮ್ಸ್ ಅವರೂ ಸಹ ಈ ಪ್ರಶಸ್ತಿಯ ರೇಸ್ ನಲ್ಲಿದ್ದಾರೆ.

‘ಸ್ಟೋಕ್ಸ್ ಅವರು ಬ್ಲ್ಯಾಕ್ ಕ್ಯಾಪ್ಸ್ ಪರ ಆಟವಾಡದೇ ಇರಬಹುದು, ಆದರೆ ಕ್ರೈಸ್ಟ್ ಚರ್ಚ್ ನಲ್ಲಿ ಅವರು ಜನಿಸಿದ್ದಾರೆ, ಮತ್ತು ಅವರ ಹೆತ್ತವರು ಈಗಲೂ ಇಲ್ಲಿಯೇ ವಾಸಿಸುತ್ತಿದ್ದಾರೆ ಹಾಗೂ ಈ ನೆಲದ ಪೂರ್ವಜರೊಂದಿಗೆ ಸಂಬಂಧವನ್ನು ಹೊಂದಿದವರಾಗಿದ್ದು ಸ್ಟೋಕ್ಸ್ ಅವರು ನಮ್ಮವರೇ ಎಂದು ಹೇಳಿಕೊಳ್ಳುವ ಅನೇಕರು ಇಲ್ಲಿದ್ದಾರೆ’ ಎಂಬುದಾಗಿ ಈ ಪ್ರಶಸ್ತಿಯ ಮುಖ್ಯ ತೀರ್ಪುಗಾರರಾಗಿರುವ ಕ್ಯಾಮರೂನ್ ಬೆನ್ನೆಟ್ ಅವರ ಹೇಳಿಕೆಯನ್ನು ಉದ್ಧರಿಸಿ ಖಾಸಗಿ ವೆಬ್ ಸೈಟ್ ವರದಿ ಮಾಡಿದೆ.

ಮತ್ತೊಂದು ಬೆಳವಣಿಗೆಯಲ್ಲಿ ಪ್ರಪ್ರಥಮ ಬಾರಿಗೆ ಆಂಗ್ಲರ ನಾಡಿಗೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಸ್ಟೋಕ್ಸ್ ಅವರಿಗೆ ಬ್ರಿಟನ್ನಿನ ಅತ್ಯುನ್ನತ ಗೌರವ ನೈಟ್ ಹುಡ್ ಲಭಿಸುವ ಸೂಚನೆಯೂ ಸಿಕ್ಕಿದೆ. ಇಂಗ್ಲೆಂಡ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿರುವ ಬೋರಿಸ್ ಜಾನ್ಸನ್ ಮತ್ತು ಜೆರಿಮಿ ಹಂಟ್ ಇಬ್ಬರೂ ಸಹ ಸ್ಟೋಕ್ಸ್ ಅವರಿಗೆ ನೈಟ್ ಹುಡ್ ನೀಡಬೇಕೆಂದು ತಮ್ಮ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.

15 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನ್ಯೂಝಿಲ್ಯಾಂಡ್ ಪ್ರಜೆಗಳು ಈ ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳಲು ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಪರಿಗಣಿಸುವ ಅಂತಿಮ 10 ಜನರ ಹೆಸರನ್ನು ಡಿಸೆಂಬರ್ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ ಮತ್ತು 2020ರ ಫೆಬ್ರವರಿಯಲ್ಲಿ ಈ ಪ್ರಶಸ್ತಿಯ ವಿಜೇತರ ಹೆರಸನ್ನು ಘೋಷಿಸಲಾಗುತ್ತದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.