360 ರನ್‌ ಬೆನ್ನಟ್ಟಿ ಗೆದ್ದ ಇಂಗ್ಲೆಂಡ್‌


Team Udayavani, Feb 22, 2019, 12:30 AM IST

97.jpg

ಬ್ರಿಜ್‌ಟೌನ್‌: ನಿವೃತ್ತಿಯ ಸೂಚನೆ ನೀಡಿದ ಕ್ರಿಸ್‌ ಗೇಲ್‌ ಅವರ ಸ್ಫೋಟಕ ಶತಕದಿಂದ ರಂಗೇರಿಸಿಕೊಂಡರೂ ಪ್ರವಾಸಿ ಇಂಗ್ಲೆಂಡ್‌ ಎದುರಿನ ಬೃಹತ್‌ ಮೊತ್ತದ ಏಕದಿನ ಸೆಣಸಾಟದಲ್ಲಿ ವೆಸ್ಟ್‌ ಇಂಡೀಸ್‌ 6 ವಿಕೆಟ್‌ಗಳ ಸೋಲಿಗೆ ತುತ್ತಾಗಿದೆ.

ಬುಧವಾರ ಇಲ್ಲಿನ “ಕೆನ್ಸಿಂಗ್ಟನ್‌ ಓವಲ್‌’ನಲ್ಲಿ ನಡೆದ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ 8 ವಿಕೆಟಿಗೆ 360 ರನ್‌ ಬಾರಿಸಿ ಸವಾಲೊಡ್ಡಿತು. ಇದನ್ನು ದಿಟ್ಟ ರೀತಿಯಲ್ಲಿ ಸ್ವೀಕರಿಸಿದ ಇಂಗ್ಲೆಂಡ್‌ 48.4 ಓವರ್‌ಗಳಲ್ಲಿ ನಾಲ್ಕೇ ವಿಕೆಟಿಗೆ 364 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು.
ಈ ಪಂದ್ಯ ಒಟ್ಟು 3 ಶತಕಗಳಿಗೆ ಸಾಕ್ಷಿಯಾಯಿತು. ಮೊದಲು ಕ್ರಿಸ್‌ ಗೇಲ್‌ 129 ಎಸೆತಗಳಿಂದ 135 ರನ್‌ ಬಾರಿಸಿದರು (12 ಸಿಕ್ಸರ್‌, 3 ಬೌಂಡರಿ). ಬಳಿಕ ಚೇಸಿಂಗ್‌ ವೇಳೆ ಜಾಸನ್‌ ರಾಯ್‌ 85 ಎಸೆತಗಳಿಂದ 123 ರನ್‌ (15 ಬೌಂಡರಿ, 3 ಸಿಕ್ಸರ್‌) ಮತ್ತು ನಾಯಕ ಜೋ ರೂಟ್‌ 97 ಎಸೆತಗಳಿಂದ 102 ರನ್‌ (9 ಬೌಂಡರಿ) ಸಿಡಿಸಿ ಇಂಗ್ಲೆಂಡನ್ನು ದಡ ಮುಟ್ಟಿಸಿದರು. ಈ ಪಂದ್ಯದಲ್ಲಿ ಒಟ್ಟು 29 ಸಿಕ್ಸರ್‌, 58 ಬೌಂಡರಿ ಸಿಡಿಯಲ್ಪಟ್ಟಿತು! ರಾಯ್‌-ರೂಟ್‌ 2ನೇ ವಿಕೆಟಿಗೆ 114 ರನ್‌, ರೂಟ್‌-ಮಾರ್ಗನ್‌ 3ನೇ ವಿಕೆಟಿಗೆ 116 ರನ್‌ ಪೇರಿಸಿ ಕೆರಿಬಿಯನ್‌ ಬೌಲರ್‌ಗಳನ್ನು ಕಾಡಿದರು.

ಗೇಲ್‌ ಸಿಕ್ಸರ್‌ ದಾಖಲೆ
ಎಂದಿನ ಸಿಡಿಲಬ್ಬರದ ಬ್ಯಾಟಿಂಗ್‌ 
ಪ್ರದರ್ಶಿಸಿದ ಕ್ರಿಸ್‌ ಗೇಲ್‌ 24ನೇ ಶತಕದೊಂದಿಗೆ ಭರ್ಜರಿ ಪುನರಾಗಮನ ಸಾರಿದರು. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸರ್ವಾಧಿಕ ಸಿಕ್ಸರ್‌ ಬಾರಿಸಿದ ಶಾಹಿದ್‌ ಅಫ್ರಿದಿ ದಾಖಲೆಯನ್ನು ಮುರಿದರು. ಗೇಲ್‌ ಅವರ ಒಟ್ಟು ಸಿಕ್ಸರ್‌ ಗಳಿಕೆ ಈಗ 488ಕ್ಕೆ ಏರಿದೆ. ಇದು ಅವರ 444ನೇ ಅಂತಾರಾಷ್ಟ್ರೀಯ ಪಂದ್ಯ. ಟೆಸ್ಟ್‌ನಲ್ಲಿ 98, ಏಕದಿನದಲ್ಲಿ 287 ಹಾಗೂ ಟಿ20ಯಲ್ಲಿ 103 ಸಿಕ್ಸರ್‌ ಬಾರಿಸಿದ ಸಾಧನೆ ಗೇಲ್‌ ಅವರದಾಗಿದೆ. ಅಫ್ರಿದಿ 524 ಪಂದ್ಯಗಳಿಂದ 476 ಸಿಕ್ಸರ್‌ ಹೊಡೆದಿ ದ್ದಾರೆ. 398 ಸಿಕ್ಸರ್‌ ಸಿಡಿಸಿರುವ ಬ್ರೆಂಡನ್‌ ಮೆಕಲಮ್‌ ಅವರಿಗೆ 3ನೇ ಸ್ಥಾನ. ಅನಂತ ರದ ಸ್ಥಾನದಲ್ಲಿರುವವರೆಂದರೆ ಸನತ್‌ ಜಯ ಸೂರ್ಯ (352) ಮತ್ತು ರೋಹಿತ್‌ ಶರ್ಮ (349).

ಸಂಕ್ಷಿಪ್ತ ಸ್ಕೋರ್‌: ವೆಸ್ಟ್‌ ಇಂಡೀಸ್‌-8 ವಿಕೆಟಿಗೆ 360 (ಗೇಲ್‌ 135, ಹೋಪ್‌ 64, ಡ್ಯಾರನ್‌ ಬ್ರಾವೊ 40, ಸ್ಟೋಕ್ಸ್‌ 37ಕ್ಕೆ 3, ರಶೀದ್‌ 74ಕ್ಕೆ 3, ವೋಕ್ಸ್‌ 59ಕ್ಕೆ 2). ಇಂಗ್ಲೆಂಡ್‌-48.4 ಓವರ್‌ಗಳಲ್ಲಿ 4 ವಿಕೆಟಿಗೆ 364 (ರಾಯ್‌ 123, ರೂಟ್‌ 102, ಮಾರ್ಗನ್‌ 65, ಹೋಲ್ಡರ್‌ 63ಕ್ಕೆ 2). ಪಂದ್ಯಶ್ರೇಷ್ಠ: ಜಾಸನ್‌ ರಾಯ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.