ನಾಲ್ಕನೇ ಟೆಸ್ಟ್ ಗೆ ಇಂಗ್ಲೆಂಡ್ ತಂಡದಿಂದ ಬಟ್ಲರ್ ಔಟ್- ಕ್ರಿಸ್ ವೋಕ್ಸ್ ಸೇರ್ಪಡೆ
Team Udayavani, Aug 30, 2021, 1:11 PM IST
ಲಂಡನ್: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸಿರುವ ಇಂಗ್ಲೆಂಡ್ ತಂಡ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್ ತಂಡವನ್ನು ಸೇರಿದ್ದಾರೆ.
ಗಾಯಗೊಂಡಿದ್ದ ಕ್ರಿಸ್ ವೋಕ್ಸ್ ಕಳೆದ ಒಂದು ವರ್ಷದಿಂದ ಯಾವುದೇ ಟೆಸ್ಟ್ ಪಂದ್ಯ ಆಡಿಲ್ಲ. ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕರೆಸಿಕೊಳ್ಳಲಾಗಿದೆ. ಬಲ ಭುಜದ ನೋವಿಗೆ ಒಳಗಾಗಿದ್ದ ಮಾರ್ಕ್ ವುಡ್ ಇದೀಗ ಚೇತರಿಸಿಕೊಂಡಿದ್ದು ಅವರನ್ನೂ ಸೇರಿಸಿಕೊಳ್ಳಲಾಗಿದೆ.
ಇಬ್ಬರು ವೇಗಿಗಳ ಸೇರ್ಪಡೆಯೊಂದಿಗೆ ಇಂಗ್ಲೆಂಡ್ ತಂಡಕ್ಕೆ ಮತ್ತಷ್ಟಯ ಬಲ ಬಂದಿದೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ರೂಟ್ ಪಡೆಯಲ್ಲಿ ಜೇಮ್ಸ್ ಆ್ಯಂಡರ್ಸನ್, ಒಲಿ ರಾಬಿನ್ಸನ್, ಕ್ರೆಗ್ ಓವರ್ಟನ್ , ಸ್ಯಾಮ್ ಕರ್ರನ್ ಆಡಿದ್ದರು.
ಇದನ್ನೂ ಓದಿ:ಐಪಿಎಲ್ ಆರಂಭಕ್ಕೂ ಮೊದಲೇ ಆರ್ ಸಿಬಿಗೆ ಶಾಕ್: ಪ್ರಮುಖ ಆಲ್ ರೌಂಡರ್ ತಂಡದಿಂದ ಔಟ್
ಬಟ್ಲರ್ ಔಟ್: ಮೂರು ಪಂದ್ಯದಲ್ಲಿ ಆಡಿದ್ದ ವಿಕೆಟ್ ಕೀಪರ್ ಬ್ಯಾಟ್ಸಮನ್ ಜೋಸ್ ಬಟ್ಲರ್ ಅವರನ್ನು ಕೈಬಿಡಲಾಗಿದೆ. ಬಟ್ಲರ್ ಬ್ಯಾಟ್ ನಿಂದ ನಿರೀಕ್ಷಿತ ಮಟ್ಟದಲ್ಲಿ ರನ್ ಬಂದಿರಲಿಲ್ಲ. ಅವರ ಬದಲಿಗೆ ಸ್ಯಾಮ್ ಬಿಲ್ಲಿಂಗ್ ಅವರನ್ನು ಕರೆಸಿಕೊಳ್ಳಲಾಗಿದೆ.
ನಾಲ್ಕನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 2ರಿಂದ ಆರಂಭವಾಗಲಿದೆ. ದಿ ಓವಲ್ ನಲ್ಲಿ ಈ ಪಂದ್ಯ ನಡೆಯಲಿದೆ. ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದರೆ, ಎರಡನೇ ಪಂದ್ಯ ಭಾರತ ಗೆದ್ದುಕೊಂಡಿತ್ತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯಿಸಿತ್ತು.
ನಾಲ್ಕನೇ ಟೆಸ್ಟ್ ಗೆ ಇಂಗ್ಲೆಂಡ್ ತಂಡ: ಜೋ ರೂಟ್ (ನಾ), ಮೊಯೀನ್ ಅಲಿ, ಜೇಮ್ಸ್ ಆಂಡರ್ಸನ್, ಜಾನಿ ಬೈರ್ಸ್ಟೋ (ವಿ.ಕೀ), ಸ್ಯಾಮ್ ಬಿಲ್ಲಿಂಗ್ಸ್ (ವಿ.ಕೀ), ರೋರಿ ಬರ್ನ್ಸ್, ಸ್ಯಾಮ್ ಕರ್ರನ್, ಹಸೀಬ್ ಹಮೀದ್, ಡಾನ್ ಲಾರೆನ್ಸ್, ಡೇವಿಡ್ ಮಲನ್, ಕ್ರೇಗ್ ಓವರ್ಟನ್, ಒಲಿ ಪೋಪ್, ಒಲಿ ರಾಬಿನ್ಸನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ