ಮೊದಲ ಟೆಸ್ಟ್‌ಗೆ ಇಂಗ್ಲೆಂಡ್‌ ತಂಡ


Team Udayavani, Jul 27, 2018, 6:30 AM IST

ecb.jpg

ಎಜ್‌ಬಾಸ್ಟನ್‌: ಪ್ರವಾಸಿ ಭಾರತ ವಿರುದ್ಧ ಆ. 1ರಿಂದ ಎಜ್‌ಬಾಸ್ಟನ್‌ನಲ್ಲಿ ಆರಂಭವಾಗುವ ಮೊದಲ ಟೆಸ್ಟ್‌ ಪಂದ್ಯಕ್ಕೆ 13 ಸದಸ್ಯರ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಲಾಗಿದೆ. 2016ರ ಬಳಿಕ ಇದೇ ಮೊದಲ ಬಾರಿ ಅದಿಲ್‌ ರಶೀದ್‌ ಅವರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಎಸೆಕ್ಸ್‌ನ ಸೀಮರ್‌ ಜೆಮೀ ಪೋರ್ಟರ್‌ಗಿದು ಚೊಚ್ಚಲ ಟೆಸ್ಟ್‌ ಪಂದ್ಯದ ಸಂಭ್ರಮವಾಗಿದೆ.

ರಶೀದ್‌ ಅವರ ಸೇರ್ಪಡೆ ಎಲ್ಲರಿಗೂ ಆಶ್ಚರ್ಯವಾಗಿದೆ. ಭಾರತ ವಿರುದ್ಧ ಈ ಹಿಂದೆ ಉತ್ತಮ ನಿರ್ವಹಣೆ ದಾಖಲಿಸಿದ್ದ ಮೊಯಿನ್‌ ಅಲಿ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. 2014ರಲ್ಲಿ ಭಾರತ ವಿರುದ್ಧ ನಡೆದ ಟೆಸ್ಟ್‌ ಸರಣಿಯಲ್ಲಿ ಅವರು 23 ಸರಾಸರಿಯಂತೆ 19 ವಿಕೆಟ್‌ ಉರುಳಿಸಿದ್ದರು. ಇದು ಅವರ ಮೊದಲ ಟೆಸ್ಟ್‌ ಸರಣಿಯಾಗಿತ್ತು.

ಒಂದು ವೇಳೆ ರಶೀದ್‌ ಎಜ್‌ಬಾಸ್ಟನ್‌ನಲ್ಲಿ ಆಡಿದರೆ ಇಂಗ್ಲೆಂಡ್‌ ಅವಳಿ ಸ್ಪಿನ್‌ ದಾಳಿಯೊಂದಿಗೆ ಭಾರತವನ್ನು ಎದುರಿಸುವ ಸಾಧ್ಯತೆಯಿದೆ. ತವರಿನ ಟೆಸ್ಟ್‌ನಲ್ಲಿ ರಶೀದ್‌ ಆಡುತ್ತಿರುವುದು ಇದೇ ಮೊದಲ ಸಲವಾಗಿದೆ. ಈ ಹಿಂದೆ ಆಡಿದ 10 ಟೆಸ್ಟ್‌ ಪಂದ್ಯಗಳು ವಿದೇಶಿ ನೆಲದಲ್ಲಿ ಆಗಿದೆ. 2015-16ರಲ್ಲಿ ಯುಎಇಯಲ್ಲಿ ಪಾಕಿಸ್ಥಾನ ವಿರುದ್ಧ ಅವರು ಟೆಸ್ಟ್‌ಗೆ ಪಾದಾರ್ಪಣೆಗೈದಿದ್ದರು.

ಕಳೆದ ಫೆಬ್ರವರಿಯಲ್ಲಿ ಯಾರ್ಕ್‌ಶೈರ್‌ ಜತೆ ಏಕದಿನ ಕ್ರಿಕೆಟ್‌ ಆಡಲು ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ರಶೀದ್‌ ಟೆಸ್ಟ್‌ ಕ್ರಿಕೆಟ್‌ ಆಡದಿದ್ದರೂ ಅವರ ಸಾಮರ್ಥ್ಯ, ವೈಟ್‌ ಬಾಲ್‌ ಫಾರ್ಮ್ನ ಆಧಾರದಲ್ಲಿ ಟೆಸ್ಟ್‌ಗೆ ಆಯ್ಕೆ ಮಾಡಲಾಗಿದೆ ಎಂದು ನೂತನ ರಾಷ್ಟ್ರೀಯ ಆಯ್ಕೆಗಾರ ಎಡ್‌ ಸ್ಮಿತ್‌ ಹೇಳಿದ್ದಾರೆ. ಕಳೆದ ಮೇ ತಿಂಗಳಲ್ಲಿ ಪಾಕಿಸ್ಥಾನ ಸರಣಿಗೆ ಜೋಸ್‌ ಬಟ್ಲರ್‌ ಅವರನ್ನು ಇದೇ ರೀತಿ ಆಯ್ಕೆ ಮಾಡಿ ತಂಡ ಯಶಸ್ಸು ಸಾಧಿಸಿತ್ತು.

ಇಂಗ್ಲೆಂಡ್‌ ತಂಡ
ಜೋ ರೂಟ್‌ (ನಾಯಕ), ಮೊಯಿನ್‌ ಅಲಿ, ಜೇಮ್ಸ್‌ ಆ್ಯಂಡರ್ಸನ್‌, ಜಾನಿ ಬೇರ್‌ಸ್ಟೊ, ಸ್ಟುವರ್ಟ್‌ ಬ್ರಾಡ್‌, ಜೋಸ್‌ ಬಟ್ಲರ್‌, ಅಲಸ್ಟೇರ್‌ ಕುಕ್‌, ಸ್ಯಾಮ್‌ ಕ್ಯುರಾನ್‌, ಕೀಟನ್‌ ಜೆನ್ನಿಂಗ್ಸ್‌, ಡೇವಿಡ್‌ ಮಾಲನ್‌, ಜೆಮೀ ಪೋರ್ಟರ್‌, ಅದಿಲ್‌ ರಶೀದ್‌, ಬೆನ್‌ ಸ್ಟೋಕ್ಸ್‌

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.