ಆಸೀಸ್‌ ಕ್ರಿಕೆಟ್‌ನ ಹೊಸಯುಗ ಶುರು


Team Udayavani, May 10, 2018, 1:30 AM IST

Tim-Paine.jpg

ಸಿಡ್ನಿ: ಮುಂದಿನ ತಿಂಗಳು ಇಂಗ್ಲೆಂಡ್‌ ಪ್ರವಾಸಗೈಯುವ ಆಸ್ಟ್ರೇಲಿಯಾದ ಏಕದಿನ ತಂಡದ ನಾಯಕರಾಗಿ ಟಿಮ್‌
ಪೇನ್‌ ಅವರನ್ನು ಹೊಸ ಕೋಚ್‌ ಜಸ್ಟಿನ್‌ ಲ್ಯಾಂಗರ್‌ ಹೆಸರಿಸಿದ್ದಾರೆ.

ಆಸ್ಟ್ರೇಲಿಯಾದ ಹೊಸ ಯುಗ ಆರಂಭಕ್ಕೆ ಹೊಸ ನಾಯಕನ ಆಯ್ಕೆಯಾಗಿದೆ. ಈ ಮೂಲಕ ಚೆಂಡು ವಿರೂಪ ಹಗರಣದಿಂದ ಆಗಿರುವ ಹೊಡೆತವನ್ನು ಶಮನಗೊಳಿಸಲು ಪ್ರಯತ್ನಿಸಲಾಗಿದೆ.

ಆಸ್ಟ್ರೇಲಿಯಾ ತಂಡದ ಘನತೆ, ಗೌರವವನ್ನು ಮರಳಿ ಪಡೆಯುವ ದೃಷ್ಟಿಯಿಂದ ಲ್ಯಾಂಗರ್‌ ಕೋಚ್‌ ಆಗಿ ಮೊದಲ ದೊಡ್ಡ ನಿರ್ಧಾರಕ್ಕೆ ಬಂದಿದ್ದು ಪೇನ್‌ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. 33ರ ಹರೆಯದ ವಿಕೆಟ್‌ಕೀಪರ್‌ ಆಗಿರುವ ಪೇನ್‌ ಈಗಾಗಲೇ ಟೆಸ್ಟ್‌ ತಂಡದ ನಾಯಕರೂ ಆಗಿದ್ದಾರೆ. ಚೆಂಡಿನ ರೂಪ ಕೆಡಿಸಿದ ಹಗರಣದಲ್ಲಿ ಸ್ಟೀವನ್‌ ಸ್ಮಿತ್‌ 12 ತಿಂಗಳ ನಿಷೇಧಕ್ಕೆ ಒಳಗಾದ ಬಳಿಕ ಪೇನ್‌ ಅವರನ್ನು ಟೆಸ್ಟ್‌ ನಾಯಕರನ್ನಾಗಿ ನೇಮಕ ಮಾಡಲಾಗಿತ್ತು.
ದಕ್ಷಿಣ ಆಫ್ರಿಕಾದ ದುರಂತ ಪ್ರವಾಸದ ಬಳಿಕ ಈ ಐದು ಪಂದ್ಯಗಳ ಏಕದಿನ ಸರಣಿ ಆಸ್ಟ್ರೇಲಿಯಾದ ಮೊದಲ
ಕೂಟವಾಗಿದೆ. ಹಾಗಾಗಿ ಆಟಗಾರರ ಆಟ, ನಡತೆಯನ್ನು ಗಂಭೀರವಾಗಿ ಪರಿಗಣಿಸುವ ಸಾಧ್ಯತೆಯಿದೆ.
ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳುವ 15 ಸದಸ್ಯರ ತಂಡವನ್ನು ಮುನ್ನಡೆಸುವಲ್ಲಿ ಪೇನ್‌ ಅವರ ಸಾಮರ್ಥ್ಯದ ಮೇಲೆ
ಕ್ರಿಕೆಟ್‌ ಆಸ್ಟ್ರೇಲಿಯಾಕ್ಕೆ ಸಂಪೂರ್ಣ ನಂಬಿಕೆಯಿದೆ ಎಂದು ಆಯ್ಕೆ ಸಮಿತಿಯ ಮುಖ್ಯಸ್ಥ ಟ್ರೆವರ್‌ ಹಾನ್ಸ್‌ ಹೇಳಿದ್ದಾರೆ.

ಏರಾನ್‌ ಫಿಂಚ್‌ ಉಪನಾಯಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಖಾಯಂ ಏಕದಿನ ನಾಯಕನ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯಾ ತಂಡವು ಜೂ.13ರಂದು ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ತಂಡವನ್ನು ಎದುರಿಸುವ ಮೂಲಕ ಸರಣಿಗೆ ಚಾಲನೆ ನೀಡಲಿದೆ. 2019ರ ವಿಶ್ವಕಪ್‌ ಮುಂಚಿತವಾಗಿ ಆಟಗಾರರು ಇಲ್ಲಿನ ಪಿಚ್‌ ಅರಿತುಕೊಳ್ಳಲು ಈ ಸರಣಿ ಉಪಕಾರಯಾಗಲಿದೆ  ಎಂದು  ಹಾನ್ಸ್‌  ವಿವರಿಸಿದರು. 
ಇಂಗ್ಲೆಂಡ್‌ನ‌ಲ್ಲಿ ನಡೆಯಲಿರುವ ಏಕೈಕ ಟಿ20 ಪಂದ್ಯಕ್ಕೂ 14 ಸದಸ್ಯರ ತಂಡವನ್ನು ಕ್ರಿಕೆಟ್‌ ಆಸ್ಟ್ರೇಲಿಯಾ ಪ್ರಕಟಿಸಿ ದೆ. ಆಬಳಿಕ ಜಿಂಬಾಬ್ವೆ ಮತ್ತು ಪಾಕಿಸ್ತಾನ ತಂಡಗಳು ಭಾಗವಹಿಸಲಿರುವ ತ್ರಿಕೋನ ಸರಣಿ ನಡೆಯಲಿದೆ. ಫಿಂಚ್‌ ತಂಡವನ್ನು ಮುನ್ನಡೆಸಲಿದ್ದರೆ ಅಲೆಕ್ಸ್‌ ಕರೇ ಉಪನಾಯಕರಾಗಿರುತ್ತಾರೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.