ಗಾಲೆ: ಲಂಕೆಗೆ ಸೋಲಿನ ಬಲೆ


Team Udayavani, Nov 10, 2018, 6:00 AM IST

ap1192018000109b.jpg

ಗಾಲೆ: ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಗಾಲೆ ಟೆಸ್ಟ್‌ ಪಂದ್ಯವನ್ನು ನಾಲ್ಕೇ ದಿನಗಳಲ್ಲಿ 211 ರನ್ನುಗಳ ಭಾರೀ ಅಂತರದಿಂದ ಕಳೆದುಕೊಂಡ ಶ್ರೀಲಂಕಾ, ತನ್ನ ಲೆಜೆಂಡ್ರಿ ಸ್ಪಿನ್ನರ್‌ ರಂಗನ ಹೆರಾತ್‌ ಅವರಿಗೆ ಸೋಲಿನ ವಿದಾಯ ಹೇಳಿದೆ. ಸ್ವತಃ ಹೆರಾತ್‌ ಅವರೇ ರನೌಟಾಗುವ ಮೂಲಕ ಲಂಕೆಯ ಸೋಲನ್ನು ಸಾರಿದ್ದು ಆತಿಥೇಯರ ನೋವಿನ ಕ್ಷಣಗಳಿಗೆ ಸಾಕ್ಷಿಯಾಯಿತು.

ಗೆಲುವಿಗಾಗಿ 462 ರನ್ನುಗಳ ಕಠಿನ ಸವಾಲು ಪಡೆದಿದ್ದ ಶ್ರೀಲಂಕಾ, ಪಂದ್ಯದ 4ನೇ ದಿನವಾದ ಶುಕ್ರವಾರ 85.1 ಓವರ್‌ಗಳಲ್ಲಿ ಭರ್ತಿ 250 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಆಫ್ಸ್ಪಿನ್ನರ್‌ ಮೊಯಿನ್‌ ಅಲಿ 71ಕ್ಕೆ 4 ಹಾಗೂ ಎಡಗೈ ಸ್ಪಿನ್ನರ್‌ ಜಾಕ್‌ ಲೀಚ್‌ 60ಕ್ಕೆ 3 ವಿಕೆಟ್‌ ಕಳಚಿ ಲಂಕಾ ಪರಿಸ್ಥಿತಿಯನ್ನು ಬಿಗಡಾಯಿಸುವಂತೆ ಮಾಡಿದರು. ಸಾಮಾನ್ಯವಾಗಿ ಏಶ್ಯದ ಟ್ರ್ಯಾಕ್‌ಗಳಲ್ಲಿ ಚಡಪಡಿಸುವ ಆಂಗ್ಲರ ಪಡೆ, ಗಾಲೆಯಲ್ಲಿ ಸ್ಪಿನ್‌ ಮೂಲಕವೇ ಲಂಕೆಗೆ ಬಲೆ ಬೀಸಿದ್ದೊಂದು ವಿಶೇಷ. ಇದಕ್ಕೂ ಮುನ್ನ ಏಕದಿನ ಸರಣಿಯನ್ನು 3-1, ಟಿ20 ಸರಣಿಯನ್ನು 1-0 ಅಂತರದಿಂದ ಇಂಗ್ಲೆಂಡ್‌ ವಶಪಡಿಸಿಕೊಂಡಿತ್ತು.

ಗಾಲೆಯಲ್ಲಿ ಮೊದಲ ಗೆಲುವು
ಇದು ಗಾಲೆಯಲ್ಲಿ ಇಂಗ್ಲೆಂಡಿಗೆ ಒಲಿದ ಮೊದಲ ಟೆಸ್ಟ್‌ ಗೆಲುವು. ಕಳೆದ 14 ವಿದೇಶಿ ಟೆಸ್ಟ್‌ಗಳಲ್ಲಿ ಸಾಧಿಸಿದ ಮೊದಲ ಜಯ ಕೂಡ ಹೌದು. ಇಂಗ್ಲೆಂಡ್‌ ಕೊನೆಯ ಸಲ ವಿದೇಶದಲ್ಲಿ ಟೆಸ್ಟ್‌ ಜಯಿಸಿದ್ದು 2016ರಲ್ಲಿ. ಅದು ಬಾಂಗ್ಲಾದೇಶ ವಿರುದ್ಧದ ಚಿತ್ತಗಾಂಗ್‌ ಪಂದ್ಯವಾಗಿತ್ತು. ಅಂತರ 22 ರನ್‌.

ವಿಕೆಟ್‌ ನಷ್ಟವಿಲ್ಲದೆ 15 ರನ್‌ ಮಾಡಿದಲ್ಲಿಂದ ಶ್ರೀಲಂಕಾ 4ನೇ ದಿನದಾಟ ಆರಂಭಿಸಿತ್ತು. ದಿಮುತ್‌ ಕರುಣರತ್ನೆ (26)-ಕೌಶಲ ಸಿಲ್ವ (30) ಮೊದಲ ವಿಕೆಟಿಗೆ 51 ರನ್‌ ಪೇರಿಸುವಲ್ಲಿ ಯಶಸ್ವಿಯಾದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಇಂಗ್ಲೆಂಡ್‌ ಬೌಲರ್‌ಗಳು ಮೇಲುಗೈ ಸಾಧಿಸಿದರು. ಲಂಚ್‌ ವೇಳೆ 98 ರನ್ನಿಗೆ 3 ವಿಕೆಟ್‌ ಬಿತ್ತು. ಆರಂಭಿಕರಿಬ್ಬರ ಜತೆ ಧನಂಜಯ ಡಿ’ಸಿಲ್ವ (21) ಕೂಡ ಆಟ ಮುಗಿಸಿದ್ದರು.ಮಧ್ಯಮ ಕ್ರಮಾಂಕದಲ್ಲಿ ಕುಸಲ್‌ ಮೆಂಡಿಸ್‌ (45) ಮತ್ತು ಏಂಜೆಲೊ ಮ್ಯಾಥ್ಯೂಸ್‌ (53) ಸ್ವಲ್ಪ ಕಾಲ ಕ್ರೀಸ್‌ ಆಕ್ರಮಿಸಿಕೊಂಡರೂ ಪ್ರಯೋಜನವಾಗಲಿಲ್ಲ. ಟೀ ವೇಳೆಗೆ 190ಕ್ಕೆ 5 ವಿಕೆಟ್‌ ಉರುಳಿತು; ಲಂಕೆಯ ಸೋಲು ಖಾತ್ರಿಯಾಯಿತು.

ನಾಯಕ ದಿನೇಶ್‌ ಚಂಡಿಮಾಲ್‌ (1), ಕೀಪರ್‌ ನಿರೋಷನ್‌ ಡಿಕ್ವೆಲ್ಲ (16) ಬೇಗನೇ ಪೆವಿಲಿಯನ್‌ ಸೇರಿದರೆ, ದಿಲುÅವಾನ್‌ ಪೆರೆರ 30 ರನ್‌ ಹೊಡೆದರು.

ಇಂಗ್ಲೆಂಡ್‌ ಕೀಪರ್‌ ಬೆನ್‌ ಫೋಕ್ಸ್‌ ಚೊಚ್ಚಲ ಟೆಸ್ಟ್‌ನಲ್ಲೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಒಂದು ಶತಕ ಸಹಿತ 144 ರನ್‌, 2 ಕ್ಯಾಚ್‌, ಒಂದು ಸ್ಟಂಪಿಂಗ್‌ ಹಾಗೂ ಒಂದು ರನೌಟ್‌ ಮಾಡಿದ ಸಾಹಸ ಫೋಕ್ಸ್‌ ಅವರದಾಗಿತ್ತು. ಸರಣಿಯ 2ನೇ ಟೆಸ್ಟ್‌ ನ. 14ರಿಂದ ಕ್ಯಾಂಡಿಯಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-342 ಮತ್ತು 6 ವಿಕೆಟಿಗೆ 322 ಡಿಕ್ಲೇರ್‌. ಶ್ರೀಲಂಕಾ-203 ಮತ್ತು 250 (ಮ್ಯಾಥ್ಯೂಸ್‌ 53, ಮೆಂಡಿಸ್‌ 45, ಸಿಲ್ವ 30, ಪೆರೆರ 30, ಅಲಿ 71ಕ್ಕೆ 4, ಲೀಚ್‌ 60ಕ್ಕೆ 3). ಪಂದ್ಯಶ್ರೇಷ್ಠ: ಬೆನ್‌ ಫೋಕ್ಸ್‌.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.