ಇಂಗ್ಲೆಂಡ್ ಎದುರು ಸೋತ ಭಾರತ ವನಿತಾ ತಂಡ: ಒದ್ದೆ ಮೈದಾನ ಎಂದ ಹರ್ಮನ್ ಪ್ರೀತ್
Team Udayavani, Sep 11, 2022, 9:24 AM IST
ಚೆಸ್ಟರ್ ಲಿ ಸ್ಟ್ರೀಟ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ವನಿತಾ ತಂಡವು ಮೊದಲ ಟಿ20 ಪಂದ್ಯದಲ್ಲಿ ಮುಗ್ಗರಿಸಿದೆ. ಹರ್ಮನ್ ಪಡೆ ಸರಣಿಯ ಆರಂಭಿಕ ಪಂದ್ಯದಲ್ಲಿ ಒಂಬತ್ತು ವಿಕೆಟ್ ಗಳ ಹೀನಾಯ ಸೋಲನುಭವಿಸಿತು.
ಇಲ್ಲಿನ ರಿವರ್ ಸೈಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡಸಿದ ಭಾರತ 20 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 132 ರನ್ ಗಳಿಸಿದರೆ, ಇಂಗ್ಲೆಂಡ್ ತಂಡವು ಒಂದು ವಿಕೆಟ್ ನಷ್ಟಕ್ಕೆ ಕೇವಲ 13 ಓವರ್ ಗಳಲ್ಲಿ ಗುರಿ ತಲುಪಿತು.
ಭಾರತದ ಪರ 29 ರನ್ ಗಳಿಸಿದ ದೀಪ್ತಿ ಶರ್ಮಾ ಅವರದ್ದೇ ಹೆಚ್ಚಿನ ಗಳಿಕೆ. ಉಳಿದಂತೆ ಸ್ಮೃತಿ ಮಂಧನಾ 23 ರನ್, ನಾಯಕಿ ಹರ್ಮನ್ 20 ರನ್ ಗಳಿಸಿದರು. ಇಂಗ್ಲೆಂಡ್ ಪರ ಸಾರಾ ಗ್ಲೆನ್ ನಾಲ್ಕು ವಿಕೆಟ್ ಕಿತ್ತು ಮಿಂಚಿದರು.
ಇದನ್ನೂ ಓದಿ:ಕರ್ತವ್ಯ ನಿರ್ವಹಣೆಯಲ್ಲಿ ಲೋಪ : ಪೊಲೀಸ್ ಸಿಬ್ಬಂದಿಗಳನ್ನೇ ಜೈಲಿಗೆ ಹಾಕಿದ ಪೊಲೀಸ್ ಅಧಿಕಾರಿ
ಸುಲಭ ಗುರಿ ಬೆನ್ನತ್ತಿದ ಇಂಗ್ಲೆಂಡ್ ಗೆ ಸೋಫಿಯಾ ಡಂಕ್ಲಿ ಅದ್ಭುತ ಆರಂಭ ಒದಗಿಸಿದರು. ಡಂಕ್ಲಿ 61 ರನ್ ಗಳಿಸಿದರೆ, ಡೇನಿಯಲ್ ವ್ಯಾಟ್ 24 ರನ್, ಏಲಿಸ್ ಕ್ಯಾಪ್ಸೆ ಅಜೇಯ 32 ರನ್ ಗಳಿಸಿದರು.
ಒದ್ದೆ ಅಂಗಳ: ಪಂದ್ಯದ ಬಳಿಕ ಮಾತನಾಡಿದ ಭಾರತೀಯ ನಾಯಕಿ ಹರ್ಮನ್ ಪ್ರೀತ್ ಕೌರ್ ಮೈದಾನ ಒಣಗಿರಲಿಲ್ಲ ಎಂದು ದೂರಿದರು. “ನಾವು ಬಲವಂತವಾಗಿ ಆಡಿದ್ದೇವೆ ಎಂದು ನನಗೆ ಅನಿಸುತ್ತಿದೆ. ಪರಿಸ್ಥಿತಿ ಸೂಕ್ತವಾಗಿರಲಿಲ್ಲ. ನೆಲ ತುಂಬಾ ತೇವವಾಗಿತ್ತು. ಇದರಿಂದ ಗಾಯಗೊಳ್ಳುವ ಸಾಧ್ಯತೆಗಳು ಹೆಚ್ಚು. ನಮ್ಮ ಆಟಗಾರರೊಬ್ಬರು ಗಾಯಗೊಂಡಿದ್ದರಿಂದ ನಮ್ಮಲ್ಲಿ ಒಬ್ಬ ಬೌಲರ್ ಕಡಿಮೆಯಾದರು” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Gukesh: ಚಾಂಪಿಯನ್ ಗುಕೇಶ್ಗೆ ಭವ್ಯ ಸ್ವಾಗತ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ