ಮಹಿಳಾ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್; ಮಿಥಾಲಿ ರಾಜ್ ಪಡೆಯಲ್ಲಿ ಐವರು ಪದಾರ್ಪಣೆ
Team Udayavani, Jun 16, 2021, 3:33 PM IST
ಬ್ರಿಸ್ಟಲ್: ಬಹು ವರ್ಷಗಳ ಕಾಯುವಿಕೆಯ ಬಳಿಕ ಭಾರತ ಮಹಿಳಾ ತಂಡ ಇಂದು ಟೆಸ್ಟ್ ಪಂದ್ಯ ಆಡುತ್ತಿದೆ. ಇಂಗ್ಲೆಂಡ್ ವನಿತೆಯರ ವಿರುದ್ಧ ಬ್ರಿಸ್ಟಲ್ ನಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕಿ ಹೀತರ್ ನೈಟ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
7 ವರ್ಷಗಳ ಬಳಿಕ ಭಾರತದ ವನಿತೆಯರು ಆಡಲಿರುವ ಮೊದಲ ಟೆಸ್ಟ್ ಎಂಬ ಕಾರಣಕ್ಕೆ ಸಾಕಷ್ಟು ಕುತೂಹಲ ಹಾಗೂ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಭಾರತ 2014ರಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಮೈಸೂರಿನಲ್ಲಿ ತನ್ನ ಕೊನೆಯ ಟೆಸ್ಟ್ ಆಡಿತ್ತು. ಅಂದು ಕೂಡ ಮಿಥಾಲಿ ಅವರೇ ಭಾರತದ ನಾಯಕಿ ಆಗಿದ್ದರು. ಇಂದು ಕೂಡಾ ಮಿಥಾಲಿ ರಾಜ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹರ್ಮನ್ ಪ್ರೀತ್ ಕೌರ್ ಉಪನಾಯಕಿಯಾಗಿದ್ದಾರೆ.
ಇದನ್ನೂ ಓದಿ:ಕೊಕೊಕೊಲಾ ಕಂಪನಿಗೆ ಭಾರೀ ನಷ್ಟ ತಂದಿಟ್ಟಿತು ರೊನಾಲ್ಡೊ ಮಾಡಿದ ಈ ಒಂದು ಕೆಲಸ!
ಐವರು ಪದಾರ್ಪಣೆ: ಭಾರತ ತಂಡದಲ್ಲಿ ಇಂದು ಐವರು ಆಟಗಾರರು ಪದಾರ್ಪಣೆ ಮಾಡುತ್ತಿದ್ದಾರೆ. ಯುವ ಸ್ಪೋಟಕ ಆಟಗಾರ್ತಿ ಶಫಾಲಿ ವರ್ಮಾ, ತಾನಿಯಾ ಭಾಟಿಯಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್ ಮತ್ತು ಸ್ನೇಹ ರಾಣಾ ಇಂದು ತಮ್ಮ ಮೊದಲ ಟೆಸ್ಟ್ ಪಂದ್ಯವಾಡುತ್ತಿದ್ದಾರೆ.
ದಾಖಲೆ ಭಾರತದ ಪರ:ಇಂಗ್ಲೆಂಡ್ ನೆಲದಲ್ಲಿ ಭಾರತೀಯರ ಟೆಸ್ಟ್ ದಾಖಲೆ ಅತ್ಯುತ್ತಮವಾಗಿದೆ ಎಂಬುದೊಂದು ಪ್ಲಸ್ ಪಾಯಿಂಟ್. ಇಲ್ಲಿ ಆಡಿದ ಕಳೆದೆರಡೂ ಟೆಸ್ಟ್ಗಳಲ್ಲಿ ಭಾರತ ಜಯ ಸಾಧಿಸಿರುವುದನ್ನು ಮರೆಯುವಂತಿಲ್ಲ.
ತಂಡಗಳು
ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಪೂನಂ ರಾವತ್, ಮಿಥಾಲಿ ರಾಜ್ (ನಾಯಕಿ), ಹರ್ಮನ್ಪ್ರೀತ್ ಕೌರ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ತಾನಿಯಾ ಭಾಟಿಯಾ (ವಿ.ಕೀ), ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಕರ್, ಶಿಖಾ ಪಾಂಡೆ
ಇಂಗ್ಲೆಂಡ್: ಲಾರೆನ್ ವಿನ್ಫೀಲ್ಡ್ ಹಿಲ್, ಟಮ್ಮಿ ಬ್ಯೂಮಾಂಟ್, ಹೀತರ್ ನೈಟ್ (ನಾಯಕಿ), ನಟಾಲಿಯಾ ಸ್ಕಿವರ್, ಆಮಿ ಎಲ್ಲೆನ್ ಜೋನ್ಸ್ (ವಿ.ಕೀ), ಸೋಫಿಯಾ ಡಂಕ್ಲೆ, ಜಾರ್ಜಿಯಾ ಎಲ್ವಿಸ್, ಕ್ಯಾಥರೀನ್ ಬ್ರಂಟ್, ಅನ್ಯಾ ಶ್ರಬ್ಸೋಲ್, ಸೋಫಿ ಎಕ್ಲೆಸ್ಟೋನ್, ಕೇಟ್ ಕ್ರಾಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ