ಟೆಸ್ಟ್‌  ಸರಣಿ  ಗೆದ್ದ ಇಂಗ್ಲೆಂಡ್‌


Team Udayavani, Nov 19, 2018, 11:23 AM IST

england.jpg

ಕ್ಯಾಂಡಿ: ಶ್ರೀಲಂಕಾ ವಿರುದ್ಧದ ಕ್ಯಾಂಡಿ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್‌ 57 ರನ್ನುಗಳ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಗೆಲುವಿಗೆ 301 ರನ್ನುಗಳ ಗುರಿ ಪಡೆದ ಲಂಕಾ, ಅಂತಿಮ ದಿನವಾದ ರವಿವಾರ 243ಕ್ಕೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು. 

ಇದರೊಂದಿಗೆ ಇಂಗ್ಲೆಂಡ್‌ ಮೊದಲ ಬಾರಿಗೆ ವಿದೇಶಿ ಪ್ರವಾಸವೊಂದರ ವೇಳೆ ಟೆಸ್ಟ್‌, ಏಕದಿನ ಹಾಗೂ ಟಿ20 ಸರಣಿಗಳನ್ನೆಲ್ಲ ಗೆದ್ದು ಮೆರೆದಂತಾಯಿತು. ಏಕದಿನದಲ್ಲಿ 3-1 ಜಯ ಗಳಿಸಿದ ಇಂಗ್ಲೆಂಡ್‌, ಅನಂತರ ಏಕೈಕ ಟಿ20 ಪಂದ್ಯದಲ್ಲೂ ಗೆದ್ದು ಬಂದಿತ್ತು.

ಇದು 2001ರ ಬಳಿಕ ಶ್ರೀಲಂಕಾ ನೆಲದಲ್ಲಿ ಇಂಗ್ಲೆಂಡ್‌ ಸಾಧಿಸಿದ ಮೊದಲ ಟೆಸ್ಟ್‌ ಸರಣಿ ಗೆಲುವು. ಏಶ್ಯದಲ್ಲಿ 2012ರ ಬಳಿಕ, ವಿದೇಶದಲ್ಲಿ 2015-16ರ ಬಳಿಕ ಒಲಿದ ಮೊದಲ ಸರಣಿ ಜಯವೂ ಹೌದು. 

ಶ್ರೀಲಂಕಾ 7ಕ್ಕೆ 226 ರನ್‌ ಗಳಿಸಿದಲ್ಲಿಂದ ಅಂತಿಮ ದಿನದಾಟ ಮುಂದುವರಿಸಿತ್ತು. ಜಾಕ್‌ ಲೀಚ್‌ (83ಕ್ಕೆ 5) ಮತ್ತು ಮೊಯಿನ್‌ ಅಲಿ (72ಕ್ಕೆ 4) ಸೇರಿಕೊಂಡು ಲಂಕಾ ಇನ್ನಿಂಗ್ಸಿಗೆ ತೆರೆ ಎಳೆದರು. ಈ ಸಾಧನೆಯೊಂದಿಗೆ ಜೋ ರೂಟ್‌ ಶತಕ ಬಾರಿಸಿದ 15 ಟೆಸ್ಟ್‌ಗಳಲ್ಲಿ ಇಂಗ್ಲೆಂಡ್‌ ಅಜೇಯವಾಗಿ ಉಳಿದಂತಾಯಿತು. ಅವರ 11 ಶತಕಗಳ ವೇಳೆ ಇಂಗ್ಲೆಂಡ್‌ ಜಯಿಸಿತ್ತು, ಉಳಿದ 4 ಟೆಸ್ಟ್‌ ಡ್ರಾಗೊಂಡಿದ್ದವು.

ಸ್ಪಿನ್ನರ್‌ಗಳಿಗೆ 38 ವಿಕೆಟ್‌!
ಈ ಟೆಸ್ಟ್‌ ಪಂದ್ಯದ 38 ವಿಕೆಟ್‌ಗಳನ್ನು ಸ್ಪಿನ್ನರ್‌ಗಳೇ ಉರುಳಿಸಿದ್ದೊಂದು ದಾಖಲೆ. 1969ರ ಭಾರತ-ನ್ಯೂಜಿಲ್ಯಾಂಡ್‌ ನಡುವಿನ ನಾಗ್ಪುರ ಟೆಸ್ಟ್‌ ಪಂದ್ಯದಲ್ಲಿ ಸ್ಪಿನ್ನರ್‌ಗಳು 37 ವಿಕೆಟ್‌ ಕೆಡವಿದ್ದು ಈವರೆಗಿನ ದಾಖಲೆಯಾಗಿತ್ತು. ವೇಗದ ಬೌಲರ್‌ಗಳು ಒಂದೂ ವಿಕೆಟ್‌ ಉರುಳಿಸದೆ ಇಂಗ್ಲೆಂಡ್‌ ಜಯ ಸಾಧಿಸಿದ ಕೇವಲ 3ನೇ ನಿದರ್ಶನ ಇದಾಗಿದೆ. ಸರಣಿಯ 3ನೇ ಹಾಗೂ ಅಂತಿಮ ಟೆಸ್ಟ್‌ ನ. 23ರಿಂದ ಕೊಲಂಬೊದಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.