ಪಾಕಿಸ್ಥಾನಕ್ಕೆ ತವರಿನಲ್ಲೇ ಸರಣಿ ಸೋಲು: ಟೆಸ್ಟ್ ಚಾಂಪಿಯನ್ ಶಿಪ್ ನಿಂದ ಹೊರಬಿದ್ದ ಬಾಬರ್ ಪಡೆ


Team Udayavani, Dec 12, 2022, 3:12 PM IST

ಪಾಕಿಸ್ಥಾನಕ್ಕೆ ತವರಿನಲ್ಲೇ ಸರಣಿ ಸೋಲು: ಟೆಸ್ಟ್ ಚಾಂಪಿಯನ್ ಶಿಪ್ ನಿಂದ ಹೊರಬಿದ್ದ ಬಾಬರ್ ಪಡೆ

ಮುಲ್ತಾನ್: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಸೋಲನುಭವಿಸಿದ ಪಾಕಿಸ್ಥಾನವು ತವರಿನಲ್ಲಿ ಮತ್ತೊಂದು ಸರಣಿ ಕಳೆದುಕೊಂಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲೂ ಪಾಕಿಸ್ಥಾನದ ಹೋರಾಟ ಅಂತ್ಯವಾಗಿದೆ.

ಮೊದಲ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿದ್ದ ಪಾಕಿಸ್ಥಾನವು ಎರಡನೇ ಪಂದ್ಯದಲ್ಲೂ 26 ರನ್ ಅಂತರದ ಸೋಲನುಭವಿಸಿದೆ.

ಮುಲ್ತಾನ್ ಪಂದ್ಯದ ಮೊದಲ ಇನ್ನಿಂಗ್ ನಲ್ಲಿ ಇಂಗ್ಲೆಂಡ್ 281 ರನ್ ಗಳಿಸಿದ್ದರೆ, ಪಾಕಿಸ್ಥಾನ 202 ರನ್ ಮಾತ್ರ ಗಳಿಸಿತ್ತು. ಎರಡನೇ ಇನ್ನಿಂಗ್ ನಲ್ಲಿ ಇಂಗ್ಲೆಂಡ್ 275 ರನ್ ಗಳಿಸಿದರೆ, ಗೆಲುವಿಗೆ 355 ರನ್ ಗುರಿ ಪಡೆದ ಪಾಕಿಸ್ಥಾನ 328 ರನ್ ಗಳಿಗೆ ಆಲೌಟಾಯಿತು.

ನಾಲ್ಕು ವಿಕೆಟ್ ಗೆ 198 ರನ್ ಗಳಿಸಿದ್ದಲ್ಲಿಂದ ಇಂದಿನ ದಿನದಾಟ ಆರಂಭಿಸಿದ ಪಾಕ್, ಸೌದ್ ಶಕೀಲ್ ಮತ್ತು ನವಾಜ್ ಬೆಂಬಲ ನೀಡಿದರು. ಶಕೀಲ್ 94 ರನ್ ಮಾಡಿದರೆ, ನವಾಜ್ 40 ರನ್ ಗಳಿಸಿದರು. ಅಘಾ ಸಲ್ಮಾನ್ ಕೊನೆಯಲ್ಲಿ ಅಜೇಯ 20 ರನ್ ಗಳಿಸಿದರು.

ಎರಡನೇ ಹೊಸ ಚೆಂಡಿನಿಂದ ದಾಳಿ ನಡೆಸಿದ ಮಾರ್ಕ್ ವುಡ್ ಇಂಗ್ಲೆಂಡ್ ಗೆ ವರವಾದರು. ಮಾರ್ಕ್ ವುಡ್ ನಾಲ್ಕು ವಿಕೆಟ್ ಪಡೆದು ಮಿಂಚಿದರೆ, ರಾಬಿನ್ಸನ್ ಮತ್ತು ಆ್ಯಂಡರ್ಸನ್ ತಲಾ ಎರಡು ವಿಕೆಟ್ ಪಡೆದರು.

ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಇಂಗ್ಲೆಂಡ್ ತನ್ನ ಕೊನೆಯ 9 ಟೆಸ್ಟ್‌ಗಳಲ್ಲಿ 8 ಅನ್ನು ಗೆದ್ದಿದೆ. ಪಾಕಿಸ್ಥಾನ ಸರಣಿಯ ಮೂರನೇ ಟೆಸ್ಟ್ ಪಂದ್ಯ ಕರಾಚಿಯಲ್ಲಿ ನಡೆಯಲಿದೆ.

ಫೈನಲ್ ರೇಸ್ ನಿಂದ ಹೊರಕ್ಕೆ

ಈ ಗೆಲುವಿನೊಂದಿಗೆ ಇಂಗ್ಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲೀಗ 44.44 ಪರ್ಸೆಂಟೈಲ್‌ ನೊಂದಿಗೆ 5 ನೇ ಸ್ಥಾನದಲ್ಲಿದೆ. ಆದರೆ ಪಾಕಿಸ್ತಾನ 42.42 ಪರ್ಸೆಂಟೈಲ್‌ ನೊಂದಿಗೆ 6 ನೇ ಸ್ಥಾನದಲ್ಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ರೇಸ್ ನಿಂದ ಪಾಕಿಸ್ಥಾನ ಬಹುತೇಕ ಹೊರಬಿದ್ದಿದೆ. ಫೈನಲ್‌ನಲ್ಲಿ ಸ್ಥಾನ ಪಡೆಯಲು ಪಾಕಿಸ್ತಾನವು ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಸೈಕಲ್‌ ನಲ್ಲಿ ತನ್ನ ಉಳಿದ ಐದು ಟೆಸ್ಟ್ ಪಂದ್ಯಗಳಲ್ಲಿ ನಾಲ್ಕನ್ನು ಗೆಲ್ಲಬೇಕಾಗಿತ್ತು. ಆದರೆ ಈಗಾಗಲೇ ಎರಡು ಪಂದ್ಯ ಸೋತಿದ್ದು, ಇನ್ನು ಇಂಗ್ಲೆಂಡ್ ವಿರುದ್ಧ ಒಂದು ಪಂದ್ಯ, ನ್ಯೂಜಿಲ್ಯಾಂಡ್ ವಿರುದ್ಧ ಎರಡು ಪಂದ್ಯವಾಡಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.