World Cup ಕೊನೆ ಹಂತದಲ್ಲಿ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ತಂಡದ ಸ್ಟಾರ್‌ ಆಲ್‌ ರೌಂಡರ್‌


Team Udayavani, Nov 1, 2023, 3:50 PM IST

World Cup ಕೊನೆ ಹಂತದಲ್ಲಿ ನಿವೃತ್ತಿ ಘೋಷಿಸಿದ ಇಂಗ್ಲೆಂಡ್‌ ತಂಡದ ಸ್ಟಾರ್‌ ಆಲ್‌ ರೌಂಡರ್‌

ನವದೆಹಲಿ: ಇಂಗ್ಲೆಂಡ್‌ ತಂಡದ ಖ್ಯಾತ ಆಲ್‌ ರೌಂಡರ್‌ ಆಟಗಾರರೊಬ್ಬರು ಅಂತಾರಾಷ್ಟ್ರೀಯ ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿದ್ದಾರೆ.

30 ವರ್ಷದ ಸ್ಟಾರ್‌ ಆಲ್‌ ರೌಂಡರ್‌ ಡೇವಿಡ್ ವಿಲ್ಲಿ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿವೃತ್ತಿ ನೀಡುವುದಾಗಿ ಬುಧವಾರ(ನ.1 ರಂದು) ಘೋಷಿಸಿದ್ದಾರೆ.

ಈ ಕುರಿತು ಸುದೀರ್ಘವಾದ ಇನ್ಸ್ಟಾಗ್ರಾಮ್‌ ಪೋಸ್ಟ್‌ ಹಾಕಿರುವ ಅವರು, “ಸಣ್ಣ ವಯಸ್ಸಿನ ಹುಡುಗನಾಗಿದ್ದಾಗ ಇಂಗ್ಲೆಂಡ್‌ ಪರ ಕ್ರಿಕೆಟ್‌ ಆಡುವ ಕನಸು ಕಂಡಿದ್ದೆ. ಆದ್ದರಿಂದ ಬಹಳ ಎಚ್ಚರಿಗೆ ಹಾಗೂ ಯೋಚಿಸಿ ವಿಶ್ವಕಪ್‌ ನ ಕೊನೆಯ ಹಂತದಲ್ಲಿ ನಾನು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತಿ ಆಗುತ್ತಿದ್ದೇನೆ. ನಾನು ಅಪಾರ ಹೆಮ್ಮೆಯಿಂದ ಅಂಗಿಯನ್ನು ಧರಿಸಿದ್ದೇನೆ ಮತ್ತು ನನ್ನ ಎದೆಯ ಮೇಲಿನ ಬ್ಯಾಡ್ಜ್‌ಗೆ ನಾನು ಸಂಪೂರ್ಣವಾಗಿ ಎಲ್ಲವನ್ನು ನೀಡಿದ್ದೇನೆ. ಜಗತ್ತಿನ ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಉತ್ತಮ ತಂಡದ ಭಾಗವಾಗಿದ್ದಕ್ಕೆ ನಾನು ತುಂಬಾ ಅದೃಷ್ಟಶಾಲಿಯಾಗಿದ್ದೇನೆ. ನನ್ನ ಈ ಪಯಣದಲ್ಲಿ ಸುಂದರ ನೆನಪು ಹಾಗೂ ಕಷ್ಟದ ಸಮಯದಲ್ಲಿ ಜೊತೆಯಾದ ಸ್ನೇಹಿತರನ್ನು ಇಲ್ಲಿ ನಾನು ಕಂಡುಕೊಂಡಿದ್ದೇನೆ. ನನ್ನ ಹೆಂಡತಿ, ಇಬ್ಬರು ಮಕ್ಕಳು, ಅಮ್ಮ ಮತ್ತು ತಂದೆಯ ನಿಮ್ಮ ತ್ಯಾಗ ಮತ್ತು ಬೆಂಬಲವಿಲ್ಲದೆ ನನ್ನ ಕನಸುಗಳನ್ನು ಈಡೇರಿಸಲು ನಾನು ಸಾಧ್ಯವಾಗುತ್ತಿರಲಿಲ್ಲ” ಎಂದು ಬರೆದುಕೊಂಡಿದ್ದಾರೆ.

“ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಶ್ರೇಷ್ಠ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ. ನಾನು ಇನ್ನೂ ವಿಶ್ವಕಪ್‌ನಲ್ಲಿನ ನಮ್ಮ ಪ್ರದರ್ಶನಕ್ಕೂ ನನ್ನ ನಿರ್ಧಾರಕ್ಕೂ ಯಾವುದೇ ಸಂಬಂಧವಿಲ್ಲ ಇಲ್ಲ” ಎಂದು ವಿಲ್ಲಿ ಹೇಳಿದ್ದಾರೆ.

ಐಪಿಎಲ್‌, T20 ಬ್ಲ್ಯಾಸ್ಟ್‌ ಸೇರಿದಂತೆ ಜಗತ್ತಿನ ನಾನಾ ಲೀಗ್‌ ಗಳಲ್ಲಿ ಆಡುವುದನ್ನು ಮುಂದುವರೆಸುವುದಾಗಿ ವಿಲ್ಲಿ ಹೇಳಿದ್ದಾರೆ.

ಇಂಗ್ಲೆಂಡ್‌ ತಂಡ ಈ ಬಾರಿಯ ವಿಶ್ವಕಪ್‌ ನಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿ ಅಂಕಪಟ್ಟಿಯಲ್ಲೊ ಕೊನೆಯ ಸ್ಥಾನದಲ್ಲಿದೆ.

2015 ರಲ್ಲಿ ಐರ್ಲೆಂಡ್‌ ವಿರುದ್ಧದ ಪಂದ್ಯದ ಮೂಲಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಪಾದಾರ್ಪಣೆ  ಮಾಡಿದ ವಿಲ್ಲಿ 70 ಏಕದಿನ ಮತ್ತು 43 T20I ಗಳಲ್ಲಿ ಇಂಗ್ಲೆಂಡ್ ನ್ನು ಪ್ರತಿನಿಧಿಸಿದ್ದಾರೆ. ಅವರು ಏಕದಿನ ಪಂದ್ಯದಲ್ಲಿ 26.12ರ ಸರಾಸರಿಯಲ್ಲಿ 627 ರನ್ ಗಳಿಸಿದ್ದಾರೆ. T20I ಅವರು 51 ವಿಕೆಟ್‌ ಗಳನ್ನು ಪಡೆದಿದ್ದಾರೆ. ಏಕದಿನದಲ್ಲಿ ಅವರು, 94 ವಿಕೆಟ್‌ ಗಳನ್ನು ಪಡೆದಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) 2023-24 ಋತುವಿನ ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿ ವಿಲ್ಲಿ ಅವರ ಹೆಸರು ಕೈಬಿಟ್ಟ ಬಳಿಕ ನಿವೃತ್ತಿ ನಿರ್ಧಾರ ಬಂದಿದೆ.

 

 

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.