ಪ್ರತಿಭೆ ಗುರುತಿಸಿದ್ದಕ್ಕೆ ಖುಷಿಯಾಗಿದೆ: ಸುಕೇಶ್‌ ಹೆಗ್ಡೆ


Team Udayavani, Mar 8, 2018, 6:45 AM IST

0603AJKE07.jpg

ಅಜೆಕಾರು: ಛಲವೊಂದಿದ್ದರೆ ಜೀವನದಲ್ಲಿ ಗುರಿ ಮುಟ್ಟಬಹುದು ಎಂಬುದನ್ನು ಸಾಧಿಸಿ ತೋರಿಸಿದ್ದಾರೆ ಗ್ರಾಮೀಣ ಕ್ರೀಡಾ ಪ್ರತಿಭೆ ಸುಕೇಶ್‌ ಹೆಗ್ಡೆ.

ಪ್ರಸ್ತುತ ಬೆಂಗಳೂರಿನಲ್ಲಿ ವಿಜಯ ಬ್ಯಾಂಕ್‌ ಉದ್ಯೋಗಿಯಾಗಿರುವ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗ್ರಾಮೀಣ ಪ್ರದೇಶವಾದ ಕಡ್ತಲದ ಕಬಡ್ಡಿ ಪ್ರತಿಭೆ ಸುಕೇಶ್‌ ಹೆಗ್ಡೆ ರಾಜ್ಯ ಸರಕಾರದ 2016ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಂದರ್ಭದಲ್ಲಿ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಸುಕೇಶ್‌, ಪ್ರತಿಭೆಯನ್ನು ಗುರುತಿಸಿದ್ದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ.

“ರಾಜ್ಯ ಸರಕಾರ ನನ್ನನ್ನು ಗುರುತಿಸಿ ಏಕಲವ್ಯ ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ. ಕಳೆದ ಒಂದು ದಶಕದಿಂದ ಗ್ರಾಮೀಣ ಕ್ರೀಡೆ ಕಬಡ್ಡಿಯಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ತೃಪ್ತಿ ತಂದಿದೆ’ ಎಂದಿದ್ದಾರೆ.

“ಪ್ರಶಸ್ತಿಯನ್ನು ತಂದೆ-ತಾಯಿಗೆ, ನಿರಂತರ ಪೋ›ತ್ಸಾಹ ನೀಡಿದ ಹುಟ್ಟೂರ ಜನತೆಗೆ, ಅಭಿಮಾನಿ ವೃಂದಕ್ಕೆ ಅರ್ಪಿಸುತ್ತಿದ್ದೇನೆ. ಕಬಡ್ಡಿಗೆ ಇನ್ನಷ್ಟು ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಸೇರಿಸಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡುವುದೇ ನನ್ನ ಮೊದಲ ಉದ್ದೇಶ. ನನ್ನ ಈ ಸಾಧನೆಯ ಹಿಂದೆ ತರಬೇತಿ ನೀಡಿದ ಶಿಕ್ಷಕರು ಹಾಗೂ ತರಬೇತುದಾರರ ಶ್ರಮ ಬಹಳಷ್ಟಿದೆ’ ಎಂದು ಸುಕೇಶ್‌ ಹೆಗ್ಡೆ, ಇವರೆಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಕೃಷಿ ಕುಟುಂಬದ ಕ್ರೀಡಾ ಪ್ರತಿಭೆ
ಕಡ್ತಲ ಆಲದಪಾಡಿಯ ಕರುಣಾಕರ ಹೆಗ್ಡೆ-ರತ್ನಾವತಿ ದಂಪತಿಯ ಮೂವರು ಮಕ್ಕಳಲ್ಲಿ ಕೊನೆಯವರಾದ ಸುಕೇಶ್‌ ಕೃಷಿ ಕುಟುಂಬದಿಂದ ಬಂದ ಪ್ರತಿಭಾನ್ವಿತ ಕ್ರೀಡಾ ಪ್ರತಿಭೆ. ಕುಕ್ಕುಜೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವಾಗಲೇ ಕ್ರೀಡಾ ಚಟುವಟಿಕೆಯಲ್ಲಿ ಗಮನಾರ್ಹ ಸಾಧನೆಗೈದು, ಕುಕ್ಕುಜೆ ಪ್ರೌಢ ಶಾಲೆಯಲ್ಲಿ ಆ್ಯತ್ಲೆಟಿಕ್ಸ್‌ ಹಾಗೂ ಕಬಡ್ಡಿಯಲ್ಲಿ ಗುರುತಿಸಿಕೊಂಡಿದ್ದರು. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಶಂಕರ್‌ ಹಾಗೂ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್‌ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ ಕಬಡ್ಡಿ ಕೋಚ್‌ ರವಿ ಸುವರ್ಣರ ಸಲಹೆ, ಸಹಕಾರ ಸುಕೇಶ್‌ ಹೆಗ್ಡೆಗೆ ಕಬಡ್ಡಿಯಲ್ಲಿ ಮಿಂಚಲು ನೆರವಾಯಿತು.

ಕ್ರೀಡಾ ಕೋಟಾದಲ್ಲಿ ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದಿರುವ ಸುಕೇಶ್‌ ಹೆಗ್ಡೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಶೆಟ್ಟಿಯವರ ಸೂಕ್ತ ತರಬೇತಿಯೊಂದಿಗೆ ರಾಜ್ಯ, ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ಭರವಸೆಯ ಆಟಗಾರನಾಗಿ ಬೆಳೆದರು.

2013ರಲ್ಲಿ ಪ್ರಾರಂಭಗೊಂಡ ಪೊ› ಕಬಡ್ಡಿ ಪಂದ್ಯಾಟದಲ್ಲಿ ಪಾಲ್ಗೊಳ್ಳುವ ಮೂಲಕ ಸುಕೇಶ್‌ ಹೆಗ್ಡೆಯವರ ಪ್ರತಿಭೆ ರಾಷ್ಟ್ರ ಮಟ್ಟದಲ್ಲಿ ಅನಾವರಣಗೊಂಡಿತು. ಪೊ› ಕಬಡ್ಡಿಯ 5 ಆವೃತ್ತಿಗಳಲ್ಲಿಯೂ ಆಡಿರುವ ಇವರು ಮೊದಲ 4 ಆವೃತ್ತಿಗಳಲ್ಲಿ ತೆಲುಗು ಟೈಟಾನ್ಸ್‌ ತಂಡವನ್ನು ಪ್ರತಿನಿಧಿಸಿದ್ದರು. 5ನೇ ಆವೃತ್ತಿಯಲ್ಲಿ ಗುಜರಾತ್‌ ಪೋರ್ಚುನ್‌ ಜೈಂಟ್ಸ್‌ ತಂಡದ ನಾಯಕನಾಗಿ ಕಳೆದ ಸಾಲಿನಲ್ಲಿ ತಂಡ ದ್ವಿತೀಯ ಸ್ಥಾನ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

2014ರಲ್ಲಿ ಥಾಯ್ಲೆಂಡ್‌ನ‌ಲ್ಲಿ ನಡೆದ ಬೀಚ್‌ ಏಶ್ಯನ್‌ ಗೇಮ್ಸ್‌ನಲ್ಲಿ ಭಾರತ ಕಬಡ್ಡಿ ತಂಡದ ಸದಸ್ಯನಾಗಿ ಭಾಗವಹಿಸಿದ್ದ ಇವರು 2016ರಲ್ಲಿ ಗುಹಾಟಿಯಲ್ಲಿ ನಡೆದ ಸೌತ್‌ ಏಶ್ಯನ್‌ ಗೇಮ್ಸ್‌ನಲ್ಲಿ ಭಾರತ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದರು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.