ವಿಶ್ವಕಪ್‌ ಗೆದ್ದ ಬಳಿಕ ಧೋನಿಯನ್ನು ನಾಯಕತ್ವದಿಂದ ಇಳಿಸಲು ನಿರ್ಧರಿಸಿದ್ದ ಬಿಸಿಸಿಐ


Team Udayavani, Aug 17, 2020, 5:24 PM IST

Dhoni-Srinivasan

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ವಿಶ್ವಕಪ್‌ ಗೆದ್ದ ಬಳಿಕ ಎಂ.ಎಸ್‌. ಧೋನಿ ಅವರನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸಲು ಬಿಸಿಸಿಐ ಮುಂದಾಗಿತ್ತು ಎಂಬ ಮಾಹಿತಿ ಬಿಸಿಸಿಐನ ಮಾಜಿ ಅಧ್ಯಕ್ಷರಿಂದಲೇ ಬಹಿರಂಗೊಂಡಿದೆ.

2011ರ ವಿಶ್ವಕಪ್‌ ಬಳಿಕ ಮಹೇಂದ್ರ ಸಿಂಗ್‌ ಧೋನಿ ಟೀಮ್‌ ಇಂಡಿಯಾದ ನಾಯಕನಾಗಲು ಆಯ್ಕೆ ಸಮಿತಿ ಬಯಸುತ್ತಿರಲಿಲ್ಲ.

ಆದರೆ ನಾನು ಅವರ ನಾಯಕತ್ವವನ್ನು ಉಳಿಸಲು ಮಂಡಳಿಯ ಅಧ್ಯಕ್ಷನಾಗಿ ನನ್ನ ಅಧಿಕಾರವನ್ನು ಬಳಸಿಕೊಂಡೆ ಎಂದು ಭಾರತದ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನ ಮಾಜಿ ಅಧ್ಯಕ್ಷ ಎನ್‌. ಶ್ರೀನಿವಾಸನ್‌ ಬಹಿರಂಗಪಡಿಸಿದ್ದಾರೆ.

2011ರಲ್ಲಿ ಧೋನಿ ನಾಯಕತ್ವದಲ್ಲಿ 28 ವರ್ಷಗಳ ಅನಂತರ ಟೀಮ್‌ ಇಂಡಿಯಾ ಎರಡನೆ ಬಾರಿ ಏಕದಿನ ವಿಶ್ವಕಪ್‌ ಗೆದ್ದಿತ್ತು. ಆದರೆ ವಿಶ್ವ ಚಾಂಪಿಯನ್‌ ಆಗಿದ್ದ ಭಾರತ ತಂಡವು 2011-12ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಿತ್ತು. ಅಲ್ಲಿ ಟೆಸ್ಟ್‌ ಸರಣಿಯನ್ನು 0-4ರಿಂದ ಕಳೆದುಕೊಂಡಿತು. ಇದರಿಂದ ಅಸಮಧಾನಗೊಂಡ ಬಿಸಿಸಿಐ ಸ್ವಲ್ಪ ಸಮಯದ ಬಳಿಕ ಧೋನಿ ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿತ್ತು ಎಂದಿದ್ದಾರೆ.

ಆಗಿನ ಬಿಸಿಸಿಐ ಕಾರ್ಯದರ್ಶಿ ಸಂಜಯ್‌ ಜಗ್ಡೇಲ್‌ ಅವರು “ಸರ್‌ ಧೋನಿ ಅವರನ್ನು ಭಾರತೀಯ ಕ್ರಿಕೆಟ್‌ ತಂಡಕ್ಕೆ ನಾಯಕನನ್ನಾಗಿ ಮಾಡಲು ಆಯ್ಕೆ ಸಮಿತಿ ಸದಸ್ಯರು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದರು. ಬಳಿಕ ನಾನು ನೇರವಾಗಿ ಸಭೆಗೆ ಹೋಗಿ ಮಂಡಳಿಯ ಅಧ್ಯಕ್ಷನಾಗಿ ನನ್ನ ಹಕ್ಕುಗಳನ್ನು ಚಲಾಯಿಸಿ, ಧೋನಿ ತಂಡದ ನಾಯಕನಾಗಿರುತ್ತೇನೆ ಎಂದು ಹೇಳಿ ಸಭೆಯಿಂದ ನಿರ್ಗಮಿಸಿದ್ದೆ ಎಂದು ಶ್ರೀನಿವಾಸನ್‌ ನೆನಪಿಸಿಕೊಂಡಿದ್ದಾರೆ.

ಧೋನಿ ಅವರನ್ನು ತೆಗೆದುಹಾಕಲು ಕಾರಣ?
28 ವರ್ಷಗಳ ಬಳಿಕ ಭಾರತ ವಿಶ್ವಕಪ್‌ ಗೆದ್ದಿತ್ತು. ಆದರೆ ಬಳಿಕ ನಾವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೆಸ್ಟ್‌ ಸರಣಿಯನ್ನು ಕಳೆದುಕೊಂಡೆವು. ಆದ್ದರಿಂದ ಆಯ್ಕೆ ಸಮಿತಿ ಸಭೆಯಲ್ಲಿ ಧೋನಿ ಅವರನ್ನು ಏಕದಿನ ನಾಯಕತ್ವದಿಂದ ತೆಗೆದುಹಾಕಲು ಒತ್ತಾಯಗಳು ಕೇಳಿಬಂದಿದ್ದವು. ಆದರೆ ನಾನು ಅದಕ್ಕೆ ಸೊಪ್ಪು ಹಾಕಿಲ್ಲ. ನೀವು ಅವರನ್ನು ಏಕದಿನ ತಂಡದ ನಾಯಕತ್ವದಿಂದ ಹೇಗೆ ತೆಗೆದು ಹಾಕುತ್ತೀರಿ? ಎಂದು ಪ್ರಶ್ನಿಸಿದ್ದೆ ಎಂದರು. ಧೋನಿಯನ್ನು ನಾಯಕತ್ವ ಸ್ಥಾನದಿಂದ ತೆಗೆದುಹಾಕಲು ಅವರಲ್ಲಿ ಬಲವಾದ ಕಾರಣಗಳು ಇರಲಿಲ್ಲ. ಅದಕ್ಕಿಂತಲೂ ಹೆಚ್ಚಾಗಿ ಧೋನಿ ಅವರ ಬದಲಿ ಯಾರು ಎಂಬುದಕ್ಕೆ ಆಯ್ಕೆದಾರರು ಯೋಚಿಸಿರಲಿಲ್ಲ ಎಂದರು.

ಬಿಸಿಸಿಐನ ಹಳೆಯ ಸಂವಿಧಾನದ ಪ್ರಕಾರ, ತಂಡವನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯು ಮಂಡಳಿಯ ಅಧ್ಯಕ್ಷರ ಅನುಮೋದನೆ ಪಡೆಯಬೇಕಾಗಿತ್ತು. ಆದರೆ ಲೋಧಿ ಸಮಿತಿಯ ಶಿಫಾರಸುಗಳು ಜಾರಿಗೆ ಬಂದ ಬಳಿಕ ಆಯ್ಕೆ ಪ್ರಕರಣದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಹಕ್ಕನ್ನು ಮುಖ್ಯ ಆಯ್ಕೆಗಾರನಿಗೆ ನೀಡಲಾಗಿತ್ತು.

ಇದೀಗ ಶ್ರೀನಿವಾಸನ್‌ ಅವರ ಈ ಹೇಳಿಕೆಯು ಧೋನಿ ಅವರನ್ನು 2011ರಲ್ಲಿ ಏಕದಿನ ತಂಡದ ನಾಯಕತ್ವದಿಂದ ತೆಗೆದುಹಾಕುವ ಯೋಚನೆಯಲ್ಲಿ ಬಿಸಿಸಿಐ ಹೊಂದಿತ್ತು ಎಂಬ ಊಹಾಪೋಹಗಳನ್ನು ಖಚಿತಪಡಿಸುತ್ತದೆ. ಬಿಸಿಸಿಐ ಅಧ್ಯಕ್ಷರಾಗಿ ಮತ್ತು ಐಪಿಎಲ್‌ ಚೆನ್ನೆç ಸೂಪರ್‌ ಕಿಂಗ್ಸ್‌ ಮಾಲಕರಾಗಿದ್ದ ಶ್ರೀನಿವಾಸನ್‌ ಅವರು ಮಧ್ಯಪ್ರವೇಶಿಸಿ ಧೋನಿ ನಾಯಕತ್ವವನ್ನು ಉಳಿಸಿದ್ದನ್ನು ಇದು ಖಚಿತಪಡಿಸುತ್ತದೆ.

ಬಳಿಕದ ಬೆಳವಣಿಗೆಯಲ್ಲಿ ಮೊಹಿಂದರ್‌ ಅಮರನಾಥ್‌ ಅವರನ್ನು ಆಯ್ಕೆ ಸಮಿತಿಯಿಂದ ತೆಗೆದುಹಾಕಲಾಗಿತ್ತು. ಯಾಕೆಂದರೆ ಅವರು ಶ್ರೀಕಾಂತ್‌ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ತೆರೆಮರೆಯಲ್ಲಿ ಕೆಲಸಮಾಡುತ್ತಿದ್ದರು. ಆ ಸಮಯದಲ್ಲಿ ಧೋನಿ ಅವರನ್ನು ನಾಯಕತ್ವದಿಂದ ತೆಗೆದುಹಾಕಬೇಕೆಂದು ಪ್ರತಿಪಾದಿಸುವವರ ಸಾಲಿನಲ್ಲಿ ಅಮರನಾಥ್‌ ಮುಂಚೂಣಿಯಲ್ಲಿದ್ದರು.

 

 

 

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.