FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ


Team Udayavani, Oct 2, 2023, 4:11 PM IST

FAB FOUR: ಏಕದಿನ ವಿಶ್ವಕಪ್ ನಲ್ಲಿ ಯಾರ ದಾಖಲೆಗಳು ಉತ್ತಮ? ಇಲ್ಲಿದೆ ಮಾಹಿತಿ

ಮಣಿಪಾಲ: ಆಧುನಿಕ ಕ್ರಿಕೆಟ್ ಜಗತ್ತಿನ ಫ್ಯಾಬ್ ಫೋರ್ ಎಂದರೆ ಅದು ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್, ಜೋ ರೂಟ್ ಮತ್ತು ಕೇನ್ ವಿಲಿಯಮ್ಸನ್. ಕಳೆದೊಂದು ದಶಕದಿಂದ ಕ್ರಿಕೆಟ್ ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಈ ನಾಲ್ವರು ಕ್ರಿಕೆಟ್ ಲೋಕದ ಐಕಾನ್ ಗಳು.

2023 ಐಸಿಸಿ ಏಕದಿನ ವಿಶ್ವಕಪ್ ಕೂಟವು ಅಕ್ಟೋಬರ್ 5ರಿಂದ ಆರಂಭವಾಗಲಿದೆ. ಭಾರತದ ಆತಿಥ್ಯದಲ್ಲಿ ನಡೆಯಲಿರುವ ಮೆಗಾ ಕ್ರಿಕೆಟ್ ಕೂಟದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಲಿದೆ. ಸ್ಟಾರ್ ಆಟಗಾರರ ನಡುವೆ ಎಲ್ಲರ ಚಿತ್ತ ಈ ನಾಲ್ಕು ಆಟಗಾರರ ಮೇಲಿದೆ. ಹಾಗಾದರೆ ವಿಶ್ವಕಪ್ ನಲ್ಲಿ ಈ ನಾಲ್ವರ ಪ್ರದರ್ಶನ, ದಾಖಲೆಗಳು ಹೇಗಿದೆ? ಇಲ್ಲಿದೆ ಮಾಹಿತಿ.

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ ನಲ್ಲಿ 26 ಪಂದ್ಯಗಳಲ್ಲಿ 46.8 ಸರಾಸರಿಯಲ್ಲಿ 2 ಶತಕ ಮತ್ತು 6 ಅರ್ಧಶತಕಗಳೊಂದಿಗೆ 1,030 ರನ್ ಗಳಿಸಿದ್ದಾರೆ.

ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ 17 ವಿಶ್ವಕಪ್ ಪಂದ್ಯಗಳಲ್ಲಿ 54.14 ಸರಾಸರಿಯಲ್ಲಿ 3 ಶತಕ ಮತ್ತು 3 ಅರ್ಧಶತಕಗಳೊಂದಿಗೆ 758 ರನ್ ಗಳಿಸಿದ್ದಾರೆ.

ನ್ಯೂಜಿಲ್ಯಾಂಡ್ ಕೇನ್ ವಿಲಿಯಮ್ಸನ್ 2019 ರ ಏಕದಿನ ವಿಶ್ವಕಪ್‌ ನಿಂದ ಉಳಿದಿರುವ ಏಕೈಕ ನಾಯಕ. ವಿಲಿಯಮ್ಸನ್ ವಿಶ್ವಕಪ್‌ ನಲ್ಲಿ 23 ಪಂದ್ಯಗಳಲ್ಲಿ 56.93 ಸರಾಸರಿಯಲ್ಲಿ 2 ಶತಕ ಮತ್ತು 3 ಅರ್ಧಶತಕಗಳೊಂದಿಗೆ 911 ರನ್ ಗಳಿಸಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ 24 ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ 46.33 ಸರಾಸರಿಯಲ್ಲಿ 1 ಶತಕ ಮತ್ತು 8 ಅರ್ಧಶತಕಗಳೊಂದಿಗೆ 834 ರನ್ ಗಳಿಸಿದ್ದಾರೆ.

ಈ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಅವರು ಸಚಿನ್ ತೆಂಡೂಲ್ಕರ್ ಅವರ ಏಕದಿನ ದಾಖಲೆ ಮುರಿಯುವ ಸಾಧ್ಯತೆಯಿದೆ. ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್ ನಲ್ಲಿ 47 ಶತಕ ಬಾರಿಸಿದ್ದು, ಇನ್ನು ಮೂರು ಶತಕ ಗಳಿಸಿದರೆ 50 ಶತಕ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ಸಚಿನ್ ತೆಂಡೂಲ್ಕರ್ ಅವರು 49 ಶತಕಳೊಂದಿಗೆ ಸದ್ಯ ಮೊದಲ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.