ಚಿನ್ನಸ್ವಾಮಿ ಕ್ರೀಡಾಂಗಣದ ಮೇಲ್ಛಾವಣಿ ಸೋರಿಕೆ :ಟ್ರೋಲ್ ಗೆ ಗುರಿಯಾದ ಬಿಸಿಸಿಐ
Team Udayavani, Jun 20, 2022, 2:03 PM IST
ಬೆಂಗಳೂರು : ಭಾನುವಾರ ನಡೆದ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ ನಿರ್ಣಾಯಕ ಟಿ 20 ಪಂದ್ಯ ಮಳೆಯಲ್ಲಿ ಕೊಚ್ಚಿ ಹೋಗಿದ್ದು ಒಂದೆಡೆಯಾದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮೇಲ್ಛಾವಣಿ ಸೋರಿಕೆಯಾಗಿರುವುದು ಅಭಿಮಾನಿಗಳು ಬಿಸಿಸಿಐ ಅನ್ನು ಟ್ರೋಲ್ ಮಾಡುವಂತೆ ಮಾಡಿದೆ.
ಪಂದ್ಯ ಭಾರಿ ಮಳೆಯಿಂದಾಗಿ ರದ್ದಾಗಿದ್ದು, ಕ್ರೀಡಾಂಗಣದ ಮೇಲ್ಛಾವಣಿ ಸೋರಿಕೆಯಿಂದಾಗಿ ಅಭಿಮಾನಿಗಳು ಪರದಾಡಬೇಕಾಯಿತು. ಈ ಕುರಿತು ಸಾಮಾಜಿಕ ತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು, ಹಲವರು ಬಿಸಿಸಿಐ ಅನ್ನುಟ್ರೊಲ್ ಮಾಡಿದ್ದಾರೆ.
ಭಾನುವಾರ ಮಳೆ ಸುರಿಯುತ್ತಿದ್ದರೂ, ಅಭಿಮಾನಿಗಳು ಪಂದ್ಯ ಮತ್ತೆ ಪ್ರಾರಂಭವಾಗುವ ನಿರೀಕ್ಷೆಯಲ್ಲಿ ಕ್ರೀಡಾಂಗಣದಲ್ಲಿ ಕಾಯುತ್ತಿದ್ದರು. ದುರದೃಷ್ಟವಶಾತ್, ಮೇಲ್ಛಾವಣಿಯಲ್ಲಿ ನೀರಿನ ಸೋರಿಕೆಯಿಂದಾಗಿ ಅಭಿಮಾನಿಗಳು ಕೆಟ್ಟ ಅನುಭವ ಪಡೆಯಬೇಕಾಯಿತು.
ಬಿಸಿಸಿಐ ಕಳೆದ ವಾರ 48,000 ಕೋಟಿ ರೂ. ಗೂ ಹೆಚ್ಚು ಮೌಲ್ಯದ ಬಂಪರ್ ಐಪಿಎಲ್ ಮಾಧ್ಯಮ ಹಕ್ಕುಗಳ ಒಪ್ಪಂದವನ್ನು ಘೋಷಿಸಿದೆ. ಆ ಹಣವನ್ನು ಬಳಸಿ ಕ್ರೀಡಾಂಗಣಗಳನ್ನು ನವೀಕರಿಸಿ ಎಂಬ ಸಲಹೆಗಳನ್ನು ನೀಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕ್ರೀಡಾಂಗಣಗಳು ಮತ್ತು ಸೌಲಭ್ಯಗಳನ್ನು ನವೀಕರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿರುವುದರಿಂದ ಶೀಘ್ರದಲ್ಲೇ ಅದು ಸಾಧ್ಯವಾಗುತ್ತದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’