ಇಂಗ್ಲೆಂಡ್‌-ಆಸೀಸ್ ಏಕದಿನ ಸರಣಿ ಹಿನ್ನಲೆ ಐಪಿಎಲ್‌ ಆರಂಭಿಕ ಸುತ್ತಿಗೆ ಸ್ಟಾರ್ ಆಟಗಾರರು ಗೈರು


Team Udayavani, Aug 15, 2020, 4:42 PM IST

ಇಂಗ್ಲೆಂಡ್‌-ಆಸೀಸ್ ಏಕದಿನ ಸರಣಿ ಹಿನ್ನಲೆ ಐಪಿಎಲ್‌ ಆರಂಭಿಕ ಸುತ್ತಿಗೆ ಸ್ಟಾರ್ ಆಟಗಾರರು ಗೈರು

ಹೊಸದಿಲ್ಲಿ: ಆಸ್ಟ್ರೇಲಿಯ ಮತ್ತು ಇಂಗ್ಲೆಂಡಿನ ಅನೇಕ ಸ್ಟಾರ್‌ ಆಟಗಾರರು ಐಪಿಎಲ್‌ ಪಂದ್ಯಾವಳಿಯ ಆರಂಭಿಕ ಸುತ್ತಿನ ಕೆಲವು ಪಂದ್ಯಗಳಿಗೆ ಗೈರಾಗಲಿದ್ದಾರೆ. ಐಪಿಎಲ್‌ಗ‌ೂ ಸ್ವಲ್ಪ ಮೊದಲು ಇಂಗ್ಲೆಂಡ್‌-ಆಸ್ಟ್ರೇಲಿಯ ನಡುವೆ ತಲಾ 3 ಪಂದ್ಯಗಳ ಏಕದಿನ ಮತ್ತು ಟಿ20 ಸರಣಿ ನಡೆಯಲಿರುವುದೇ ಇದಕ್ಕೆ ಕಾರಣ.

ಆಸ್ಟ್ರೇಲಿಯ ಏಕದಿನ ತಂಡದ ನಾಯಕ ಆ್ಯರನ್‌ ಫಿಂಚ್‌, ಸ್ಟೀವನ್‌ ಸ್ಮಿತ್‌, ಇಂಗ್ಲೆಂಡಿನ ವಿಶ್ವಕಪ್‌ ವಿಜೇತ ತಂಡದ ನಾಯಕ ಇಯಾನ್‌ ಮಾರ್ಗನ್‌, ಜೋಫ್ರಾ ಆರ್ಚರ್‌, ಬೆನ್‌ ಸ್ಟೋಕ್ಸ್‌ ಮೊದಲಾದವರೆಲ್ಲ ಈ ಯಾದಿಯಲ್ಲಿದ್ದಾರೆ. ಇವರ್ಯಾರಿಗೂ ಸೆ. 26ರ ಮೊದಲು ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದು. 2020ರ ಐಪಿಎಲ್‌ ಸೆ. 19ರಿಂದ ಆರಂಭವಾಗಲಿದೆ.

 ಸೆ. 16ರ ತನಕ ಸರಣಿ
ಇಂಗ್ಲೆಂಡ್‌-ಆಸ್ಟ್ರೇಲಿಯ ನಡುವಿನ ಸರಣಿ ಸೆ. 4ರಿಂದ 16ರ ತನಕ ನಡೆಯಲಿದೆ. ಇದು ಮುಗಿದ ಕೂಡಲೇ ಯುಎಇಗೆ ಆಗಮಿಸಿದರೂ ಕ್ರಿಕೆಟಿಗರೆಲ್ಲ 6 ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಹಾಗೆಯೇ 3 ಕೋವಿಡ್‌ ಟೆಸ್ಟ್‌ಗೆ ಒಳಗಾಗಬೇಕಿದೆ. ಈ ಮೂರೂ ಪರೀಕ್ಷೆಗಳ ವೇಳೆ ನೆಗೆಟಿವ್‌ ಫ‌ಲಿತಾಂಶ ಬಂದರಷ್ಟೇ ಕ್ರಿಕೆಟಿಗರು ಜೈವಿಕ ಸುರಕ್ಷಾ ವಲಯವನ್ನು ಪ್ರವೇಶಿಸಬಹುದಾಗಿದೆ. ಈ ಕ್ವಾರಂಟೈನ್‌ ನಿಯಮವನ್ನು ಸಡಿಲಿಸಲು ಎಲ್ಲ ಫ್ರಾಂಚೈಸಿಗಳು ಮನವಿ ಮಾಡಿದರೂ ಬಿಸಿಸಿಐ ಇದನ್ನು ತಳ್ಳಿಹಾಕಿದೆ.

ಮುಂಬೈಗೆ ನಷ್ಟವಿಲ್ಲ
ಆಸ್ಟ್ರೇಲಿಯ ಮತ್ತು ಇಂಗ್ಲೆಂಡಿನ ಒಟ್ಟು 29 ಕ್ರಿಕೆಟಿಗರು ಐಪಿಎಲ್‌ನಲ್ಲಿ ಆಡಲಿದ್ದಾರೆ. ಮುಂಬೈ ಇಂಡಿಯನ್ಸ್‌ ಹೊರತುಪಡಿಸಿ ಉಳಿದ ಎಲ್ಲ ತಂಡಗಳಲ್ಲೂ ಇಲ್ಲಿನ ಸದಸ್ಯರನ್ನು ಕಾಣಬಹುದು. ಮುಂಬೈ ತಂಡದ ಕ್ರಿಸ್‌ ಲಿನ್‌ ಮತ್ತು ನಥನ್‌ ಕೋಲ್ಟರ್‌ ನೈಲ್‌ ಇಂಗ್ಲೆಂಡ್‌ ಪ್ರವಾಸಕ್ಕಾಗಿ ಆಸ್ಟ್ರೇಲಿಯ ತಂಡಕ್ಕೆ ಆಯ್ಕೆಯಾಗಿಲ್ಲ.

ಇವುಗಳಲ್ಲಿ ಭಾರೀ ಹೊಡೆತ ತಿನ್ನುವ ತಂಡವೆಂದರೆ ರಾಜಸ್ಥಾನ್‌ ರಾಯಲ್ಸ್‌. ಬಟ್ಲರ್‌, ಸ್ಮಿತ್‌, ಆರ್ಚರ್‌ ಮೊದಲಾದ ಸ್ಟಾರ್‌ ಆಟಗಾರರ ಗೈರು ಈ ತಂಡಕ್ಕೆ ಬಾಧಿಸಲಿದೆ. ಸನ್‌ರೈಸರ್ ಹೈದರಾಬಾದ್‌ ತಂಡ ನಾಯಕ ಡೇವಿಡ್‌ ವಾರ್ನರ್‌ ಸೇವೆಯನ್ನು ಕಳೆದುಕೊಳ್ಳಲಿದೆ. ಆಗ ಕೇನ್‌ ವಿಲಿಯಮ್ಸನ್‌ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.