ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಕ್ರೀಡಾಕೂಟಕ್ಕೆ ಮೀನುಗಾರ ಆಯ್ಕೆ

ಕೆನಡಾದಲ್ಲಿ ನಡೆಯುವ ಚಾಂಪಿಯನ್‌ಶಿಪ್‌ನಲ್ಲಿ ಆಡಲಿರುವ ಕುಂದಾಪುರದ ಸತೀಶ್‌ ಖಾರ್ವಿ

Team Udayavani, Aug 8, 2019, 5:47 AM IST

KU

ವಿಶೇಷ ವರದಿ-ಕುಂದಾಪುರ: ವೃತ್ತಿಯಲ್ಲಿ ಮೀನುಗಾರರಾಗಿದ್ದು, ಪ್ರವೃತ್ತಿಯಲ್ಲಿ ಕ್ರೀಡಾಪಟುವಾಗಿದ್ದ ಕುಂದಾಪುರದ ಖಾರ್ವಿಕೇರಿಯ ಸತೀಶ್‌ ಖಾರ್ವಿ ಅವರು ರಾಷ್ಟ್ರಮಟ್ಟದಲ್ಲಿ ಮಿಂಚಿ, ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಸ್ಪರ್ಧೆಗೆ ಆಯ್ಕೆಯಾದ ಸಾಧನೆಗೆ ಪಾತ್ರರಾಗಿದ್ದಾರೆ.

ಸತೀಶ್‌ ಖಾರ್ವಿ ಅವರದು ಮೂಲ ಕಸುಬು ಮೀನುಗಾರಿಕೆ. ಆದರೂ ಪವರ್‌ ಲಿಫ್ಟಿಂಗ್‌ನಲ್ಲಿ ಸತತ ಪ್ರಯತ್ನದ ಫಲವಾಗಿ, ಸೆಪ್ಟಂಬರ್‌ 15 ರಿಂದ ಕೆನಾಡದಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಸ್ಪರ್ಧೆಗೆ ಆಯ್ಕೆಯಾಗಿದ್ದು, ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಖಾರ್ವಿಕೇರಿಯ ದಾಸ ಖಾರ್ವಿ – ಕಮಲ ಖಾರ್ವಿ ದಂಪತಿಯ ಪುತ್ರನಾದ ಸತೀಶ್‌ ಅವರು, ಚಿಕ್ಕಂದಿನಿಂದಲೇ ದೇಹದಾಡ್ಯì, ಕಬಡ್ಡಿ, ಕ್ರಿಕೆಟ್‌, ಪವರ್‌ ಲಿಫ್ಟಿಂಗ್‌ ಸಹಿತ ಬಹುತೇಕ ಹೆಚ್ಚಿನೆಲ್ಲ ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ಅದರಲ್ಲೂ ಪವರ್‌ ಲಿಫ್ಟಿಂಗ್‌ ಬಗ್ಗೆ ವಿಶೇಷ ಆಸಕ್ತಿಯಿದ್ದ ಇವರು, 1995 ರಲ್ಲಿ ಕುಂದಾಪುರದ ಹಕ್ಯುìಲಸ್‌ ಜಿಮ್‌ ಸದಸ್ಯರಾಗಿ ಅಲ್ಲಿ ನರಸಿಂಹ ದೇವಾಡಿಗ ಅವರಿಂದ ಪವರ್‌ ಲಿಫ್ಟಿಂಗ್‌ ಕುರಿತು ಮೊದಲ ಪಾಠ ಕಲಿತರು.

ಬಳಿಕ ಬೆಂಗಳೂರಿನ ಕೋರಮಂಗಲ ಕ್ಲಬ್‌ ಸಂಸ್ಥೆಯಲ್ಲಿ ತರಬೇತಿ ಪಡೆದು, ಅಲ್ಲಿ ಹಾಗೂ ಬೇರೆ – ಬೇರೆ ಜಿಮ್‌ ಸೆಂಟರ್‌ನಲ್ಲಿ ತರಬೇತುದಾರರಾಗಿ ಸುಮಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಇದಾದ ಅನಂತರ 2011ರಲ್ಲಿ ತಾವೇ ಸ್ವತಃ ಕುಂದಾಪುರದಲ್ಲಿ ನ್ಯೂ ಹಕ್ಯುìಲಸ್‌ ಜಿಮ್‌ ಆರಂಭಿಸಿ, ಗ್ರಾಮೀಣ ಭಾಗದ ಹಲವು ಕ್ರೀಡಾಪಟುಗಳಿಗೆ ಫಿಟ್‌ನೆಸ್‌ ಕಾಪಾಡಿಕೊಳ್ಳಲು ನೆರವಾದರು.

ಇದಲ್ಲದೆ ಇವರ ನೇತೃತ್ವದಲ್ಲಿ ಕುಂದಾಪುರ ಭಾಗದಲ್ಲಿಯೇ ಜಿಲ್ಲಾ, ರಾಜ್ಯ ಮಟ್ಟದ ದೇಹದಾಡ್ಯì, ಪವರ್‌ ಲಿಫ್ಟಿಂಗ್‌ ಸ್ಪರ್ಧೆಗಳನ್ನು ಆಯೋಜಿಸಿದ್ದರು.

ಮೀನುಗಾರಿಕಾ ಕುಟುಂಬ
ಇವರದು ಹುಟ್ಟು ಮೀನುಗಾರಿಕಾ ಕುಟುಂಬ. ಈಗಲೂ ಸತೀಶ್‌ ಖಾರ್ವಿ ಅವರ ಮನೆಯವರು, ಸಂಬಂಧಿಕರು ಮೀನುಗಾರಿಕೆ ವೃತ್ತಿಯನ್ನೇ ಮಾಡು ತ್ತಿದ್ದಾರೆ. ಇವರು ಕೂಡ ಮೊದಲ 10 -12 ವರ್ಷ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.

3 ರಾಷ್ಟ್ರೀಯ ಪದಕ
ಸತೀಶ್‌ ಖಾರ್ವಿಯವರು ಇದೇ ಮೊದಲ ಬಾರಿಗೆ ವಿಶ್ವ ಮಟ್ಟದ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದು, ಈವರೆಗೆ ರಾಷ್ಟ್ರೀಯ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌ನಲ್ಲಿ 1 ಬೆಳ್ಳಿ ಪದಕ ಹಾಗೂ 2 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಇನ್ನು ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ 5 ಚಿನ್ನದ ಪದಕಗಳನ್ನು ಪಡೆದ ಸಾಧನೆಗೆ ಪಾತ್ರರಾಗಿದ್ದಾರೆ.

ಕನಸು ನನಸು
ನಮ್ಮದು ಮೀನುಗಾರಿಕಾ ಕುಟುಂಬವಾಗಿದ್ದರೂ, ನನಗೆ ಚಿಕ್ಕಂದಿನಿಂದಲೇ ಕ್ರೀಡೆಯಲ್ಲಿ ಏನಾದರೂ ಸಾಧನೆ ಮಾಡಬೇಕು ಎನ್ನುವ ಕನಸಿತ್ತು. ಈವರೆಗೆ ರಾಷ್ಟ್ರ, ರಾಜ್ಯ ಮಟ್ಟದ ಟೂರ್ನಿಯಲ್ಲಿ ಆಡಿ, ಗೆದ್ದಿದ್ದರೂ, ಇದೇ ಮೊದಲ ಬಾರಿಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದ ಟೂರ್ನಿಯಲ್ಲಿ ಪ್ರತಿನಿಧಿಸುವ ಮೂಲಕ ಬಹುದಿನದ ಕನಸೊಂದು ನನಸಾಗುತ್ತಿದೆ.
ಸತೀಶ್‌ ಖಾರ್ವಿ,
ಕುಂದಾಪುರ

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.