ಟೀಂ ಇಂಡಿಯಾ ಜೈವಿಕ ಸುರಕ್ಷಾ ವಲಯದಿಂದ ಹೊರಬಂದ ಐವರು ಆಟಗಾರರು
Team Udayavani, Jun 21, 2021, 9:43 AM IST
Representative Image used
ಸೌಥಾಂಪ್ಟನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ನಲ್ಲಿ ಅವಕಾಶ ಪಡೆಯದ ಭಾರತದ ಐವರು ಕ್ರಿಕೆಟಿಗರನ್ನು ಜೈವಿಕ ಸುರಕ್ಷಾ ವಲಯದಿಂದ ಬಿಡುಗಡೆಗೊಳಿಸಲಾಗಿದೆ.
ಸುದೀರ್ಘ ಪ್ರವಾಸದ ಹಿನ್ನೆಲೆಯಲ್ಲಿ ಆಟಗಾರರು ಮಾನಸಿಕವಾಗಿ ಕುಗ್ಗಬಾರದು ಎಂಬುದು ಇದರ ಉದ್ದೇಶ. ಚಾಂಪಿಯನ್ ಶಿಪ್ ಫೈನಲ್ ಗೆ ಅಂತಿಮಗೊಳಿಸಿದ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯದ ಮಾಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ಕೆ.ಎಲ್.ರಾಹುಲ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಇದೀಗ ಜೈವಿಕ ಸುರಕ್ಷಾ ವಲಯದಿಂದ ಹೊರ ಬಂದಿದ್ದಾರೆ.
ಇದನ್ನೂ ಓದಿ:ಫೈನಲ್ ಟೆಸ್ಟ್: ಕಾನ್ವೇ ಅರ್ಧಶತಕದ ನೆರವಿನಿಂದ ಉತ್ತಮ ಆರಂಭ ಪಡೆದ ಕಿವೀಸ್
ಕಳೆದ ಮೇ 19ರಿಂದ ಭಾರತದ ಆಟಗಾರರು ಬಯೋ ಬಬಲ್ ನಲ್ಲಿದ್ದಾರೆ. ಅಂದು ಮುಂಬೈ ಹೋಟೆಲ್ ನಲ್ಲಿ ಕ್ವಾರಂಟೈನ್ ಗೆ ಒಳಗಾದ ಆಟಗಾರರು ಬಳಿಕ ಇಂಗ್ಲೆಂಡ್ ಗೆ ಆಗಮಿಸಿ ಅಲ್ಲಿ ಕ್ವಾರಂಟೈನ್ ನಲ್ಲಿದ್ದರು. ಚಾಂಪಿಯನ್ ಶಿಪ್ ಫೈನಲ್ ಬಳಿಕ ಇಂಗ್ಲೆಂಡ್ ಸರಣಿಗೆ ಇನ್ನೂ ಒಂದು ತಿಂಗಳ ಕಾಲ ಸಮಯವಿದೆ. ಈ ವೇಳೆ ಆಟಗಾರರು ನಿರಂತರ ಬಬಲ್ ನಲ್ಲಿದ್ದರೆ ಮಾನಸಿಕವಾಗಿ ಕುಗ್ಗುತ್ತಾರೆ ಎಂಬ ಕಾರಣಕ್ಕೆಅವರನ್ನು ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..