![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Hockey; ಐದು ಪಂದ್ಯಗಳ ಸರಣಿ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ನಾಲ್ಕನೇ ಸೋಲು
Team Udayavani, Apr 13, 2024, 1:02 AM IST
![1-qwewqeqw](https://www.udayavani.com/wp-content/uploads/2024/04/1-qwewqeqw-620x345.jpg)
ಪರ್ತ್: ಆಸ್ಟ್ರೇಲಿಯ ಪ್ರವಾಸದಲ್ಲಿರುವ ಭಾರತೀಯ ಹಾಕಿ ತಂಡದ ನಿರಾಶಾದಾಯಕ ಪ್ರದರ್ಶನ ಮುಂದುವರಿದಿದೆ. ಶುಕ್ರವಾರ ನಡೆದ ಐದು ಪಂದ್ಯಗಳ ಹಾಕಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯ ವಿರುದ್ಧ 1-3 ಗೋಲುಗಳಿಂದ ಸೋಲನ್ನು ಕಂಡಿದೆ. ಇದು ಭಾರತಕ್ಕೆ ಎದುರಾದ ಸತತ ನಾಲ್ಕನೇ ಸೋಲು ಆಗಿದೆ.
ಅಂತಿಮ ಫಲಿತಾಂಶ ಏನೇ ಆಗಿದ್ದರೂ ಭಾರತೀಯರು ಈ ಪಂದ್ಯ ದಲ್ಲಿ ಸುಧಾರಿತ ಆಟದ ಪ್ರದರ್ಶನ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಆಸ್ಟ್ರೇಲಿಯ ನಿಜಕ್ಕೂ ಹಾಕಿ ಸ್ಪರ್ಧೆಯಲ್ಲಿ ಬಲಿಷ್ಠ ವಾಗಿದೆ. ಈ ಪಂದ್ಯದಲ್ಲಿ ದಾಖಲಾದ ನಾಲ್ಕು ಗೋಲುಗಳು ಪೆನಾಲ್ಟಿ ಕಾರ್ನರ್ ಅವಕಾಶದಿಂದಲೇ ದಾಖ ಲಾಗಿದ್ದವು. ಭಾರೀ ಮಿಂಚು ಇದ್ದ ಕಾರಣ ಈ ಪಂದ್ಯವು 40 ನಿಮಿಷ ತಡವಾಗಿ ಆರಂಭಗೊಂಡಿತ್ತು.
ಸರಣಿಯ ಅಂತಿಮ ಪಂದ್ಯವು ಶನಿವಾರ ನಡೆಯಲಿದೆ.
ಪಂದ್ಯ ಆರಂಭವಾದ 12ನೇ ನಿಮಿಷ ದಲ್ಲಿ ಭಾರತ ಮುನ್ನಡೆ ಸಾಧಿಸಿತ್ತು. ನಾಯಕ ಹರ್ಮನ್ಪ್ರೀತ್ ಸಿಂಗ್ 19ನೇ ನಿಮಿಷದಲ್ಲಿ ಗೋಲನ್ನು ಹೊಡೆದು ಮುನ್ನಡೆ ಸಾಧಿಸಿದ್ದರು. ಆದರೆ ಆ ಬಳಕಿ ಜೆರಿಮಿ ಹೇವಾರ್ಡ್ 47ನೇ ಮತ್ತು ಜ್ಯಾಕ್ ವೆಲ್c 54 ನಿಮಿಷದಲ್ಲಿ ಗೋಲನ್ನು ದಾಖಲಿಸಿ ಆಸ್ಟ್ರೇಲಿಯಕ್ಕೆ 2-1 ಮುನ್ನಡೆ ಒದಗಿಸಿದರು.
ಭಾರತ ಸರಣಿಯ ಮೊದಲ ಪಂದ್ಯ ವನ್ನು 1-5 ಗೋಲುಗಳಿಂದ ಸೋತಿದ್ದರೆ ಎರಡು ಮತ್ತು ಮೂರನೇ ಪಂದ್ಯವನ್ನು ಅನುಕ್ರಮವಾಗಿ 2-4 ಮತ್ತು 1-2 ಗೋಲುಗಳಿಂದ ಸೋತಿತ್ತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.