ಪಾಕಿಗೆ ಫಾಲೋಆನ್‌; ಗೆಲುವಿನತ್ತ ಆಸೀಸ್‌


Team Udayavani, Dec 2, 2019, 1:17 AM IST

pakige-folloon

ಅಡಿಲೇಡ್‌: ಡೇ-ನೈಟ್‌ ಟೆಸ್ಟ್‌ ಪಂದ್ಯದಲ್ಲಿ ಪಾಕಿಸ್ಥಾನಕ್ಕೆ ಫಾಲೋಆನ್‌ ಹೇರಿದ ಆಸ್ಟ್ರೇಲಿಯ, ಸತತ 2ನೇ ಇನ್ನಿಂಗ್ಸ್‌ ಗೆಲುವಿನತ್ತ ದಾಪುಗಾಲಿಕ್ಕಿದೆ.

ಆಸ್ಟ್ರೇಲಿಯದ 589 ರನ್ನುಗಳ ಭಾರೀ ಮೊತ್ತಕ್ಕೆ ಉತ್ತರವಾಗಿ 96 ರನ್ನಿಗೆ 6 ವಿಕೆಟ್‌ ಉದುರಿಸಿಕೊಂಡಿದ್ದ ಪಾಕಿಸ್ಥಾನ, 3ನೇ ದಿನವಾದ ರವಿವಾರ 302 ರನ್‌ ಮಾಡಿತು. ಆದರೆ 287 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ್ದರಿಂದ ಆಸೀಸ್‌ ಕಪ್ತಾನ ಟಿಮ್‌ ಪೇನ್‌ ಯಾವುದೇ ಮುಲಾಜಿಲ್ಲದೆ ಪ್ರವಾಸಿಗರಿಗೆ ಫಾಲೋಆನ್‌ ಹೇರಿದರು. ಪಾಕ್‌ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕುಸಿತ ಅನುಭವಿಸಿದ್ದು, 39 ರನ್ನಿಗೆ 3 ವಿಕೆಟ್‌ ಕಳೆದುಕೊಂಡಿದೆ. ಕಾಂಗರೂ ಪಡೆಯನ್ನು ಮರಳಿ ಬ್ಯಾಟಿಂಗಿಗೆ ಇಳಿಸಬೇಕಾದರೆ ಇನ್ನೂ 248 ರನ್‌ ಮಾಡಬೇಕಿದೆ.

ಯಾಸಿರ್‌ ಶಾ ಶತಕ
ಪಾಕಿಸ್ಥಾನದ ಮೊದಲ ಇನ್ನಿಂಗ್ಸ್‌ ಕುಸಿತದ ತೀವ್ರತೆಯನ್ನು ಕಂಡಾಗ ತಂಡ ಇನ್ನೂರರ ಗಡಿ ಮಟ್ಟುವುದೂ ಅನುಮಾನವಿತ್ತು. ಆದರೆ ಬಾಬರ್‌ ಆಜಂ ಮತ್ತು ಯಾಸಿರ್‌ ಶಾ ಅವರ ಹೋರಾಟದಿಂದ ಮುನ್ನೂರರ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಇವರಿಬ್ಬರು 7ನೇ ವಿಕೆಟಿಗೆ 105 ರನ್‌ ಜತೆಯಾಟ ನಡೆಸಿದರು.

ಯಾಸಿರ್‌ ಶಾ ಅವರ ಚೊಚ್ಚಲ ಶತಕ ಪಾಕಿಸ್ಥಾನದ ಸರದಿಯ ವಿಶೇಷವೆನಿಸಿತು. 4 ರನ್‌ ಮಾಡಿ ಆಡುತ್ತಿದ್ದ ಅವರು 113 ರನ್‌ ಬಾರಿಸಿ ಅಂತಿಮ ವಿಕೆಟ್‌ ರೂಪದಲ್ಲಿ ಪೆವಿಲಿಯನ್‌ ಸೇರಿಕೊಂಡರು. ಈವರೆಗೆ ಟೆಸ್ಟ್‌ನಲ್ಲಿ 42 ರನ್‌ ಗಡಿ ದಾಟದ ಶಾ, ಒಟ್ಟು 213 ಎಸೆತ ನಿಭಾಯಿಸಿ 13 ಬೌಂಡರಿ ಹೊಡೆದರು.

ಬಾಬರ್‌ ಆಜಂ ಕೇವಲ 3 ರನ್‌ ಕೊರತೆಯಿಂದ ಸೆಂಚುರಿ ತಪ್ಪಿಸಿಕೊಂಡರು. 97 ರನ್‌ ಮಾಡಿದ ಬಾಬರ್‌, ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಕೀಪರ್‌ ಟಿಮ್‌ ಪೇನ್‌ಗೆ ಕ್ಯಾಚಿತ್ತು ನಿರಾಸೆ ಅನುಭವಿಸಿದರು. 132 ಎಸೆತಗಳ ಈ ಇನ್ನಿಂಗ್ಸ್‌ ನಲ್ಲಿ 11 ಬೌಂಡರಿ ಸೇರಿತ್ತು.

6 ವಿಕೆಟ್‌ ಹಾರಿಸಿದ ಸ್ಟಾರ್ಕ್‌
ವೇಗಿ ಮಿಚೆಲ್‌ ಸ್ಟಾರ್ಕ್‌ 6 ವಿಕೆಟ್‌ ಹಾರಿಸಿ ಪಾಕ್‌ ಸರದಿಯನ್ನು ಸೀಳಿದರು. ದ್ವಿತೀಯ ಸರದಿಯಲ್ಲಿ ಹ್ಯಾಝಲ್‌ವುಡ್‌ 2, ಸ್ಟಾರ್ಕ್‌ ಒಂದು ವಿಕೆಟ್‌ ಉರುಳಿಸಿದ್ದಾರೆ. ಇಮಾಮ್‌ ಉಲ್‌ ಹಕ್‌ (0), ಅಜರ್‌ ಅಲಿ (9), ಬಾಬರ್‌ ಆಜಂ (8) ಈಗಾಗಲೇ ಆಟ ಮುಗಿಸಿದ್ದಾರೆ. ಆರಂಭಕಾರ ಶಾನ್‌ ಮಸೂದ್‌ (14) ಮತ್ತು ಅಸದ್‌ ಶಫೀಕ್‌ (8) ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌
ಆಸ್ಟ್ರೇಲಿಯ-3 ವಿಕೆಟಿಗೆ 589 ರನ್‌ ಡಿಕ್ಲೇರ್‌. ಪಾಕಿಸ್ಥಾನ-302 (ಶಾ 113, ಬಾಬರ್‌ 97, ಅಬ್ಟಾಸ್‌ 29. ಸ್ಟಾರ್ಕ್‌ 66ಕ್ಕೆ 6, ಕಮಿನ್ಸ್‌ 83ಕ್ಕೆ 3) ಮತ್ತು 3 ವಿಕೆಟಿಗೆ 39.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.