ಫ‌ುಟ್‌ಬಾಲ್‌ ಆಟಗಾರರಿಗೆ ಮೆದುಳು ರೋಗದ ಪ್ರಮಾಣ ಜಾಸ್ತಿ


Team Udayavani, Feb 17, 2017, 3:45 AM IST

Football.jpg

ಲಂಡನ್‌: ಫ‌ುಟ್‌ಬಾಲ್‌ ಆಡುವುದರಿಂದ ಮೆದುಳು ರೋಗ ಬರುತ್ತದೆಯೇ? ಈ ಸಾಧ್ಯತೆ ಜಾಸ್ತಿಯಿದೆ ಎಂದು ಹೇಳುತ್ತದೆ ಒಂದು ಸಮೀಕ್ಷೆ. ಲಂಡನ್ನಿನ ಆಕ್ಟಾ ನ್ಯೂರೋಪ್ಯಾಥೋಲಾಜಿಕಾ ಎಂಬ ನಿಯತಕಾಲಿಕೆಯಲ್ಲಿ ಲಂಡನ್‌ ಇನ್‌ಸ್ಟಿಟ್ಯೂಟ್‌ ಆಫ್ ನ್ಯೂರೋಲಜಿ ಎಂಬ ವಿಶ್ವವಿದ್ಯಾಲಯ ನಡೆಸಿದ ಸಮೀಕ್ಷೆ ಪ್ರಕಟವಾಗಿದೆ. 

ಅದರಲ್ಲಿ ಈ ಆತಂಕಕಾರಿ ಸಂಗತಿ ಹೊರಬಿದ್ದಿದೆ. ಚಿಕ್ಕವಯಸ್ಸಿನಿಂದ ಚೆಂಡನ್ನು ತಲೆಯಿಂದ ಹೊಡೆಯುವ ಅಭ್ಯಾಸವನ್ನು ಫ‌ುಟ್‌ಬಾಲ್‌ ಆಟಗಾರರು ಮಾಡುವುದರಿಂದ ಮೆದುಳು ರೋಗ ಅಥವಾ ಡಿಮೆಂಷಿಯಾ ಬರುತ್ತದೆ ಎನ್ನುವುದು ಸಮೀಕ್ಷೆ ಮಾಡಿದವರ ಅಭಿಪ್ರಾಯ.

ಇದಕ್ಕಾಗಿ ಅವರು 14 ಮಂದಿ ನಿವೃತ್ತ ಫ‌ುಟ್‌ಬಾಲ್‌ ಆಟಗಾರರನ್ನು ಅಧ್ಯಯನ ಮಾಡಿದ್ದಾರೆ. ಇದರಲ್ಲಿ ಒಬ್ಬರು ಹವ್ಯಾಸಿ ಆಟಗಾರರಾಗಿದ್ದಾರೆ. ಈ ಎಲ್ಲ ಆಟಗಾರರನ್ನು 1980ರಿಂದ 2010ರವರೆಗೆ ಇಂಗ್ಲೆಂಡ್‌ನ‌ ಸೌಥ್‌ ವೇಲ್ಸ್‌ನಲ್ಲಿ ನಿರಂತರ ಪರಿಶೀಲನೆಯಲ್ಲಿಡಲಾಗಿತ್ತು. ಈ ಎಲ್ಲ ಆಟಗಾರರು ಸರಾಸರಿ 26ನೇ ವಯಸ್ಸಿನಿಂದ ಫ‌ುಟ್‌ಬಾಲ್‌ ಆಡಲು ಶುರು ಮಾಡಿದ್ದರು. ಇವರೆಲ್ಲರಿಗೆ 60ನೇ ವಯಸ್ಸಿನ ಮಧ್ಯಭಾಗದಲ್ಲಿದ್ದಾಗಲೇ ಡಿಮೆಂಷಿಯಾ ಶುರುವಾಗಿದೆ. 

ಸಾಮಾನ್ಯ ಜನರಿಗೆ ಸರಾಸರಿ 70ನೇ ವಯಸ್ಸಿನ ಮಧ್ಯಭಾಗದಲ್ಲಿ ಡಿಮೆಂಷಿಯಾ ಕಾಣಿಸಿಕೊಳ್ಳುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ತೀವ್ರ ಪ್ರಮಾಣದ ಡಿಮೆಂಷಿಯಾದ ಪರಿಣಾಮ ಅಧ್ಯಯನಕ್ಕೊಳಗಾಗದ 14 ಮಂದಿ ಫ‌ುಟ್‌ಬಾಲಿಗರಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ 6 ಮಂದಿಯ ಮರಣೋತ್ತರ ಪರೀಕ್ಷೆಯಲ್ಲಿ ಡಿಮೆಂಷಿಯಾ ತೀವ್ರ ಪ್ರಮಾಣದಲ್ಲಿರುವುದು ಪತ್ತೆಯಾಗಿದೆ.

ಏಕೆ ಬರುತ್ತದೆ?: ಬಹುತೇಕ ಆಟಗಾರರು ತಮ್ಮ ಬಾಲ್ಯದಿಂದಲೇ ಚೆಂಡನ್ನು ತಲೆಯಿಂದ ಹೊಡೆಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದು ಮೆದುಳು ರೋಗಕ್ಕೆ ಕಾರಣವಾಗುತ್ತದೆ ಎನ್ನುತ್ತಾರೆ ವೈದ್ಯರು. ಅಮೆರಿಕದ ಫ‌ುಟ್‌ಬಾಲ್‌ ಆಟಗಾರರಲ್ಲಿ ಇದರ ಪ್ರಮಾಣ ಜಾಸ್ತಿಯಿದೆ. ತಲೆಗೆ ಸತತವಾಗಿ ಏಟು ತಿನ್ನುವ ಬಾಕ್ಸರ್‌ಗಳಲ್ಲೂ ಇದು ಗರಿಷ್ಠ ಪ್ರಮಾಣದಲ್ಲಿ ಕಂಡುಬರುತ್ತದೆ ಎಂದು ಸಮೀಕ್ಷೆ ಹೇಳಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.