ಬಿಸಿಸಿಐ ಮಾಜಿ ಕಾರ್ಯದರ್ಶಿ ಅಮಿತಾಭ್ ಚೌಧರಿ ನಿಧನ
Team Udayavani, Aug 16, 2022, 11:02 PM IST
ರಾಂಚಿ: ಬಿಸಿಸಿಐ ಮಾಜಿ ಕಾರ್ಯದರ್ಶಿ, ಜಾರ್ಖಂಡ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಅಮಿತಾಭ್ ಚೌಧರಿ (62) ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದರು.
ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ, ಜಾರ್ಖಂಡ್ ಪೊಲೀಸ್ ವಿಭಾಗದಲ್ಲಿ ಐಜಿಪಿ ಹುದ್ದೆಯನ್ನೂ ಅಲಂಕರಿಸಿದ್ದ ಅಮಿತಾಭ್ ಚೌಧರಿ, “ಜಾರ್ಖಂಡ್ ಪಬ್ಲಿಕ್ ಸರ್ವೀಸ್ ಕಮಿಶನ್ಸ್’ (ಜೆಪಿ ಎಸ್ಸಿ) ಅಧ್ಯಕ್ಷರಾಗಿಯೂ ಕರ್ತವ್ಯ ನಿಭಾಯಿಸಿದ್ದರು.
ಬಿಹಾರದಿಂದ ಬೇರ್ಪಟ್ಟು ನೂತನ ಜಾರ್ಖಂಡ್ ರಾಜ್ಯ ಉದಯವಾದಾಗ ಇಲ್ಲಿನ ಕ್ರಿಕೆಟ್ ಮಂಡಳಿಯ ರಚನೆಯಲ್ಲಿ ಚೌಧರಿ ಪಾತ್ರ ಮಹತ್ವದ್ದಾಗಿತ್ತು.
ಜಾರ್ಖಂಡ್ಗೆ ಪ್ರಥಮ ದರ್ಜೆ ಕ್ರಿಕೆಟ್ ಮಾನ್ಯತೆ ಲಭಿಸಿದ ಬೆನ್ನಲ್ಲೇ ಬಿಹಾರ ಪರ ಆಡುತ್ತಿದ್ದ ಮಹೇಂದ್ರ ಸಿಂಗ್ ಧೋನಿ ಅವರನ್ನು ಜಾರ್ಖಂಡ್ಗೆ ಕರೆತರುವಲ್ಲಿ, ರಾಂಚಿಯಲ್ಲಿ ಅತ್ಯುತ್ತಮ ದರ್ಜೆಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾ ಣದಲ್ಲಿ ಚೌಧರಿಯೇ ಪ್ರಮುಖ ಪಾತ್ರ ನಿಭಾಯಿಸಿದ್ದರು. ಅಮಿತಾಭ್ ಚೌಧರಿ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ