ಭಾರತ ಕೋಚ್‌ ರವಿಶಾಸ್ತ್ರಿಯಿಂದ ಮಾಜಿ ಕ್ರಿಕೆಟಿಗರಿಗೆ ಅವಮಾನ?


Team Udayavani, Dec 19, 2017, 8:22 AM IST

19-3.jpg

ಮುಂಬೈ: ಭಾರತ ಕ್ರಿಕೆಟ್‌ ತಂಡದ ಕೋಚ್‌ ರವಿಶಾಸ್ತ್ರಿ ಭಾರತ ತಂಡದ ಮಾಜಿ ಕ್ರಿಕೆಟಿಗರನ್ನು ಅವಮಾನಿಸಿದ್ದಾರೆಯೇ? ಹೀಗೊಂದು ಚರ್ಚೆ ಶುರುವಾಗಿದೆ. ಆಂಗ್ಲ ಟೀವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರವಿಶಾಸ್ತ್ರಿ, ನಾವು 
ಕಾಲಹರಣಕ್ಕಾಗಿ ಪಂದ್ಯವಾಡಲು ತೆರಳುವುದಿಲ್ಲ ಮತ್ತು ಸಂಖ್ಯೆ ಭರ್ತಿಯ ತಂಡವೂ ಇದಲ್ಲ ಎಂಬ ಹೇಳಿಕೆ ನೀಡಿದ್ದರು. ಇದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಹಾಗಾದರೆ ಹಿಂದಿನ ಭಾರತೀಯ ಆಟಗಾರರು, ನಾಯಕರು ಕಾಲಹರಣ ಮಾಡಿದ್ದರೇ, ಸಂಖ್ಯೆ ಭರ್ತಿಗಾಗಿ ಆಡಿದ್ದರೇ ಎಂಬ ಪ್ರಶ್ನೆ ಬಂದಿದೆ. ಇದು ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.

ಸಂದರ್ಶನದಲ್ಲಿ ಮಾತನಾಡಿದ್ದ ರವಿಶಾಸ್ತ್ರಿ, ನನ್ನ ಮತ್ತು ನಾಯಕ ಕೊಹ್ಲಿ ನಡುವಿನ ಜೊತೆಯಾಟ ಅತ್ಯುತ್ತಮ. ನಾವಿಬ್ಬರೂ ಒಂದೇ ರೀತಿಯ ವ್ಯಕ್ತಿತ್ವ ಹೊಂದಿದ್ದೇವೆ. ನಮ್ಮ ಸಂಬಂಧದಲ್ಲಿ ಪರಸ್ಪರ ನಂಬಿಕೆಯಿದೆ. ನಾವಿಬ್ಬರೂ ಬಲವಾದ ಮನಃಸ್ಥಿತಿ ಹೊಂದಿದ್ದೇವೆ. ಏನೇ ಆದರೂ ಗೆಲ್ಲಬೇಕು ಎಂಬ ವ್ಯಕ್ತಿತ್ವ ನಮ್ಮದು. ನಾವು ಕ್ರಿಕೆಟ್‌ ಆಡಲು ಹೋಗುವುದು ಕಾಲಹರಣ ಮಾಡುವುದಕ್ಕಲ್ಲ
ಎಂದಿದ್ದರು. ಮುಂದುವರಿದು ಮಾತನಾಡಿದ ಅವರು, ಸದ್ಯದ ಭಾರತ ತಂಡ ಕೇವಲ ಲೆಕ್ಕ ಭರ್ತಿಗಾಗಿ ಇರುವುದಲ್ಲ. ನಾವು ಸ್ಪರ್ಧಾತ್ಮಕವಾಗಿರುವುದನ್ನು ಬಯಸುತ್ತೇವೆ. ನಾವು ಕ್ರಿಕೆಟನ್ನು ಇನ್ನೊಂದು ಎತ್ತರಕ್ಕೆ ಒಯ್ಯುವ ಆಸಕ್ತಿ ಹೊಂದಿದ್ದೇವೆ. ನೀವು ಕೊಹ್ಲಿಯಲ್ಲಿ ಏನನ್ನು ನೋಡುತ್ತೀರೋ ಅದನ್ನೇ ಪಡೆಯುತ್ತೀರಿ ಎಂದೂ ಹೇಳಿದ್ದರು.

ನಾವು ಆಡುವುದು ಕಾಲಹರಣಕ್ಕಲ್ಲ, ಈ ತಂಡದಲ್ಲಿ ಲೆಕ್ಕ ಭರ್ತಿಯ ಜನರಿಲ್ಲ ಎಂದಿರುವುದು ಹಲವು ಅನುಮಾನಗಳಿಗೆ ಕಾರಣ. ಹಿಂದೆ ಸಚಿನ್‌, ಗಂಗೂಲಿ, ದ್ರಾವಿಡ್‌, ಧೋನಿ ಕಾಲದಲ್ಲಿ ಆಡಿದ್ದ ತಂಡಗಳು ಲೆಕ್ಕ ಭರ್ತಿಯ ತಂಡಗಳೇ? ಹಿಂದಿನ ಆಟಗಾರರಿಗೆ ಬದ್ಧತೆ ಇರಲಿಲ್ಲವೇ? ಎಂಬ ಪ್ರಶ್ನೆಗಳೆದ್ದಿವೆ. 

ಧೋನಿ ಮಾಡಿದ ಮಿಂಚಿನ ಸ್ಟಂಪ್‌ ಜಯಕ್ಕೆ ಕಾರಣ!
ಮುಂಬೈ: ಭಾನುವಾರ ಭಾರತ-ಶ್ರೀಲಂಕಾ ನಡುವೆ 3ನೇ ಏಕದಿನ ಪಂದ್ಯ ನಡೆದು ಅದರಲ್ಲಿ ಭಾರತ 8 ವಿಕೆಟ್‌ಗಳಿಂದ ಗೆದ್ದು ನಗೆ ಬೀರಿದ್ದು ಈಗ ಇತಿಹಾಸದ ಪುಟಗಳನ್ನು ಸೇರಿದೆ. ಆದರೆ ಈ ಪಂದ್ಯವನ್ನು ಭಾರತ ಗೆಲ್ಲಲು ವಿಶೇಷವಾದ ಕಾರಣವೂ ಇದೆ. ಅದು ಮಾಜಿ ನಾಯಕ ಧೋನಿ! ವಿಶ್ವದ ಶ್ರೇಷ್ಠ ವಿಕೆಟ್‌ ಕೀಪರ್‌ ಗಳಲ್ಲೊಬ್ಬರೆಂದು ಹೆಸರು ಗಳಿಸಿರುವ ಧೋನಿ ಶ್ರೀಲಂಕಾದ ಪ್ರಮುಖ ಬ್ಯಾಟ್ಸ್‌ಮನ್‌ ಉಪುಲ್‌ ತರಂಗ ಅವರನ್ನು 95 ರನ್‌ಗಳಿರುವಾಗ ಅನಿರೀಕ್ಷಿತವಾಗಿ ಸ್ಟಂಪ್‌ ಔಟ್‌ ಮಾಡಿದರು. ಈ ಚುರುಕಿನ ಸ್ಟಂಪ್‌ಔಟ್‌ ಪಂದ್ಯವನ್ನು ಭಾರತದ ಕಡೆ ವಾಲಿಸಿತು ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಔಟಾಗುವ ವೇಳೆ ತರಂಗ 12
ಬೌಂಡರಿ, 3 ಸಿಕ್ಸರ್‌ ನೆರವಿನಿಂದ 95 ರನ್‌ ಬಾರಿಸಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.