ಟಿ20ಗೆ ಮಿಥಾಲಿ ರಾಜ್ ವಿದಾಯ ; ಏಕದಿನ ವಿಶ್ವಕಪ್ ಗೆಲ್ಲುವ ಕನಸು


Team Udayavani, Sep 3, 2019, 8:17 PM IST

Mithali-Raj-726

ನವದೆಹಲಿ: ಭಾರತೀಯ ಮಹಿಳೆಯರ ಕ್ರಿಕೆಟ್ ತಂಡದ ನಾಯಕಿ ಮತ್ತು ಮಹಿಳಾ ಟಿ20 ತಂಡದ ಪ್ರಪ್ರಥಮ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಟಿ20 ಮಾದರಿಗೆ ಗುಡ್ ಬೈ ಹೇಳಿದ್ದಾರೆ. ಮಿಥಾಲಿ ರಾಜ್ ಅವರು 32 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು ಮತ್ತು ಮೂರು ಟಿ20 ವಿಶ್ವಕಪ್ ಗಳಲ್ಲಿ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಮಿಥಾಲಿ ರಾಜ್ ಅವರದ್ದಾಗಿದೆ.

2006ರಲ್ಲಿ ಡರ್ಬಿಯಲ್ಲಿ ಭಾರತ ಮಹಿಳಾ ತಂಡವು ತನ್ನ ಪ್ರಪ್ರಥಮ ಟಿ20 ಪಂದ್ಯವನ್ನಾಡಿದ ಸಂದರ್ಭದಲ್ಲಿ ತಂಡವನ್ನು ಮುನ್ನಡೆಸಿದ ಹೆಗ್ಗಳಿಕೆ ಮಿಥಾಲಿ ರಾಜ್ ಅವರದ್ದಾಗಿದೆ. ವಿಥಾಲಿ ಅವರು ತಮ್ಮ ಅಂತಿಮ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಕಳೆದ ಮಾರ್ಚ್ ತಿಂಗಳಿನಲ್ಲಿ ಇಂಗ್ಲಂಡ್ ವಿರುದ್ಧ ಆಡಿದ್ದರು ಮತ್ತು ಈ ಪಂದ್ಯದಲ್ಲಿ ಅವರು 30 ರನ್ ಗಳಿಸಿ ಔಟಾಗದೇ ಉಳಿದಿದ್ದರು.

2006ರಿಂದ ಸತತವಾಗಿ ಭಾರತ ಮಹಿಳಾ ಟಿ20 ತಂಡದಲ್ಲಿ ಆಡುತ್ತಾ ಬಂದಿದ್ದೇನೆ ಇನ್ನು 2021ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಟಕ್ಕೆ ನನ್ನನ್ನು ನಾನು ಸಿದ್ಧಗೊಳಿಸಿಕೊಳ್ಳಬೇಕಾಗಿರುವುದರಿಂದ ಟಿ20 ಮಾದರಿಯಿಂದ ನಿವೃತ್ತಿಯಾಗುತ್ತಿದ್ದೇನೆ. ನನ್ನ ದೇಶಕ್ಕೆ ವಿಶ್ವಕಪ್ ಒಂದನ್ನು ಗೆಲ್ಲಿಸಿಕೊಡುವುದು ನನ್ನ ಕನಸಾಗಿದ್ದು ಇದಕ್ಕಾಗಿ ನಾನು ಪರಿಪೂರ್ಣ ಪ್ರದರ್ಶನವನ್ನು ನೀಡುವುದು ಅಗತ್ಯವಾಗಿದೆ ಎಂದು ಮಿಥಾಲಿ ರಾಕ್ ಅವರು ತನ್ನ ವಿದಾಯಕ್ಕೆ ಸಮರ್ಥನೆಯನ್ನು ನೀಡಿದ್ದಾರೆ.

ತವರಿನಂಗಳದಲ್ಲಿ ನಡೆಯಲಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ತಾನು ಆಯ್ಕೆಗೆ ಲಭ್ಯ ಇರುವುದಾಗಿ ಮಿಥಾಲಿ ಅವರು ಇತ್ತೀಚೆಗಷ್ಟೇ ಆಯ್ಕೆ ಮಂಡಳಿಗೆ ತಿಳಿಸಿದ್ದರು. ಆದರೆ ತಂಡದ ಆಯ್ಕೆಗೆ ಇನ್ನು ಎರಡು ದಿನ ಬಾಕಿ ಇರುವಂತೆ ಮಿಥಾಲಿ ರಾಜ್ ಅವರು ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ.

ಮಿಥಾಲಿ ರಾಜ್ ಅವರು ಇದುವರೆಗೆ 89 ಪಂದ್ಯಗಳನ್ನಾಡಿದ್ದು 2364 ರನ್ನುಗಳನ್ನು ಬಾರಿಸಿದ್ದಾರೆ. ಇದರಲ್ಲಿ 17 ಅರ್ಧಶತಕಗಳಿವೆ. ಟಿ20ಯಲ್ಲಿ ಮಿಥಾಲಿ ಅವರ ಬೆಸ್ಟ್ ಸ್ಕೋರ್ ಔಟಾಗದೇ 97 ರನ್ನುಗಳು. ಮಿಥಾಲಿ ರಾಜ್ ಅವರು 32 ಟಿ20 ಪಂದ್ಯಗಳಲ್ಲಿ ಭಾರತ ಮಹಿಳಾ ತಂಡವನ್ನು ಮುನ್ನಡೆಸಿದ್ದಾರೆ. 2012, 2014 ಮತ್ತು 2016ರ ಟಿ20 ವಿಶ್ವಕಪ್ ಗಳಲ್ಲಿ ಮಿಥಾಲಿ ರಾಜ್ ಅವರು ಭಾರತ ತಂಡದ ನಾಯಕಿಯಾಗಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.