ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ರಾಡುಕಾನು, ಮರಿಯಾ ಸಕ್ಕರಿಗೆ ಆಘಾತಕಾರಿ ಸೋಲು


Team Udayavani, May 25, 2022, 10:58 PM IST

ಫ್ರೆಂಚ್‌ ಓಪನ್‌ ಗ್ರ್ಯಾನ್‌ ಸ್ಲಾಮ್‌: ರಾಡುಕಾನು, ಮರಿಯಾ ಸಕ್ಕರಿಗೆ ಆಘಾತಕಾರಿ ಸೋಲು

ಪ್ಯಾರಿಸ್‌: ಕಳೆದ ವರ್ಷದ ಸೆಮಿಫೈನಲಿಸ್ಟ್‌ ಮತ್ತು ನಾಲ್ಕನೇ ಶ್ರೇಯಾಂಕದ ಮರಿಯಾ ಸಕ್ಕರಿ ಮತ್ತು ಹಾಲಿ ಯುಎಸ್‌ ಚಾಂಪಿಯನ್‌ 12ನೇ ಶ್ರೇಯಾಂಕದ ಬ್ರಿಟನ್‌ನ ಮ್ಮಾ ರಾಡುಕಾನು ಅವರು ಫ್ರೆಂಚ್‌ ಓಪನ್‌ನ ದ್ವಿತೀಯ ಸುತ್ತಿನಲ್ಲಿ ಆಘಾತಕಾರಿ ಸೋಲನ್ನು ಕಂಡಿದ್ದಾರೆ.

ಎರಡು ಸೆಟ್‌ಗಳ ಕಠಿನ ಹೋರಾಟದಲ್ಲಿ ಸಕ್ಕಾರಿ ಜೆಕ್‌ ಗಣರಾಜ್ಯದ ಕರೋಲಿನಾ ಮುಚೋವಾ ಕೈಯಲ್ಲಿ 7-6 (7-5), 7-6 (7-4) ಸೆಟ್‌ಗಳಿಂದ ಸೋಲನ್ನು ಕಂಡರು. ಇಲ್ಲಿ ಸತತ ಮೂರನೇ ಬಾರಿ ಮೂರನೇ ಸುತ್ತಿಗೇರಿರುವ ಮುಚೋವಾ ಮುಂದಿನ ಸುತ್ತಿನಲ್ಲಿ ಅಮೆರಿಕದ 27ನೇ ಶ್ರೇಯಾಂಕದ ಅಮಂಡಾ ಅನಿಸಿಮೋವಾ ಅವರ ಸವಾಲನ್ನು ಎದುರಿಸಲಿದ್ದಾರೆ.

ರಾಡುಕಾನುಗೆ ಆಘಾತ
ಯುಎಸ್‌ ಚಾಂಪಿಯನ್‌ ಆಗಿರುವ 19ರ ಹರೆಯದ ರಾಡುಕಾನು ಚೊಚjಲ ಬಾರಿ ಫ್ರೆಂಚ್‌ ಓಪನ್‌ನಲ್ಲಿ ಆಡು ತ್ತಿದ್ದಾರೆ. ಮೊದಲ ಸುತ್ತಿನಲ್ಲಿ ಜೆಕ್‌ನ ಲಿಂಡಾ ನೊಸ್ಕೋವಾ ಅವರನ್ನು ಕೆಡಹಿದ್ದ ಅವರು ದ್ವಿತೀಯ ಸುತ್ತಿನಲ್ಲಿ ಸೋತು ಹೊರಬಿದ್ದರು. ಎರಡು ತಾಸುಗಳ ಕಠಿನ ಹೋರಾಟದಲ್ಲಿ ಅವರು ಬೆಲಾರೂಸ್‌ನ ಅಲಿಯಾಕ್ಸಾಂಡ್ರಾ ಸ್ಯಾಸ್ನೊವಿಚ್‌ ಕೈಯಲ್ಲಿ 6-3, 1-6, 1-6 ಸೆಟ್‌ಗಳಿಂದ ಸೋತರು. ಆಕ್ರಮಣಕಾರಿಯಾಗಿ ಆಡಿದ ಸ್ಯಾಸ್ನೊವಿಚ್‌ 45 ವಿಜಯಿ ಹೊಡೆತಗಳನ್ನು ಹೊಡೆದಿದ್ದರು.

ಅಜರೆಂಕಾ, ಗಾಫ್ ಮುನ್ನಡೆ
15ನೇ ಶ್ರೇಯಾಂಕದ ವಿಕ್ಟೋರಿಯಾ ಅಜರೆಂಕಾ 34ರ ಹೆರೆಯದ ಜರ್ಮನಿಯ ಆಂದ್ರೇಯಾ ಪೆಟ್ಕೊವಿಕ್‌ ಅವರನ್ನು 6-1, 7-6 (7-3) ಸೆಟ್‌ಗಳಿಂದ ಸೋಲಿಸಿ ಮೂರನೇ ಸುತ್ತಿಗೇರಿದರು. ಇನ್ನೊಂದು ಪಂದ್ಯದಲ್ಲಿ ಅಮೆರಿಕದ ಹದಿಹರೆಯದ ಕೊಕೊ ಗಾಫ್ ಬೆಲ್ಜಿಯಂನ ಅಲಿಸನ್‌ ವಾನ್‌ ಯುತ್ವಾಂಕ್‌ ಅವರನ್ನು ಸೋಲಿಸಿ ಮೂರನೇ ಸುತ್ತು ತಲುಪಿದ್ದಾರೆ.

18ರ ಹರೆಯದ ಗಾಫ್ ತನ್ನ ನಿರ್ವಹಣೆಯನ್ನು ಇನ್ನಷ್ಟು ಉತ್ತಮಪಡಿಸಲು ಬಯಸಿದ್ದಾರೆ. ಕಳೆದ ವರ್ಷ ಇಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ್ದ ಗಾಫ್ ದ್ವಿತೀಯ ಸುತ್ತಿನಲ್ಲಿ ಯತ್ವಾಂಕ್‌ ಅವರನ್ನು 6-1, 7-6 (4) ಸೆಟಗಳಿಂದ ಉರುಳಿಸಿದರು. ಗಾಫ್ ಈಗ ಕಣದಲ್ಲಿ ಉಳಿದಿರುವ ಅತೀ ಕಿರಿಯ ಆಟಗಾರ್ತಿಯಾಗಿದ್ದಾರೆ. ಅವರು ಈ ವಾರ ಹೈಸ್ಕೂಲ್‌ ಗ್ರ್ಯಾಜುವೇಶನ್‌ ಮುಗಿಸಿದ ಸಂಭ್ರಮ ಆಚರಿಸಿದ್ದರು.

ರಾಮ್‌ಕುಮಾರ್‌ಗೆ ಮೊದಲ ಗೆಲುವು
ಪ್ಯಾರಿಸ್‌: ಭಾರತದ ಟೆನಿಸ್‌ ಆಟಗಾರ ರಾಮ್‌ಕುಮಾರ್‌ ರಾಮನಾಥನ್‌ ಅವರು ಗ್ರ್ಯಾನ್‌ ಸ್ಲಾಮ್‌ ಕೂಟದ ಮುಖ್ಯ ಡ್ರಾದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಖುಷಿಯನ್ನು ಸಂಭ್ರಮಿಸಿದ್ದಾರೆ.

ರಾಮ್‌ಕುಮಾರ್‌ ಮತ್ತು ಅಮೆರಿಕದ ಜತೆಗಾರ ಹಂಟರ್‌ ರೀಸ್‌ ಅವರು ಜರ್ಮನಿಯ ಡೇನಿಯಲ್‌ ಆಲ್ಟ್ಮೈರ್‌ ಮತ್ತು ಆಸ್ಕರ್‌ ಒಟ್ಟೆ ಅವರನ್ನು ಸೋಲಿಸಿ ಫ್ರೆಂಚ್‌ ಓಪನ್‌ ಕೂಟದ ಪುರುಷರ ಡಬಲ್ಸ್‌ನಲ್ಲಿ ದ್ವಿತೀಯ ಸುತ್ತಿಗೇರಿದ್ದಾರೆ.

ಸಿಂಗಲ್ಸ್‌ ಮುಖ್ಯ ಡ್ರಾಕ್ಕೆ ಪ್ರವೇಶಿಸಲು ಬಹಳಷ್ಟು ಪರಿಶ್ರಮ ಪಟ್ಟಿದ್ದ ರಾಮ್‌ಕುಮಾರ್‌ ಇದರಲ್ಲಿ ಯಶಸ್ಸು ಪಡೆದಿರಲಿಲ್ಲ. ಇದೀಗ ಡಬಲ್ಸ್‌ನಲ್ಲಿ ರೀಸ್‌ ಜತೆ ಆಡುತ್ತಿರುವ ಅವರು 7-6 (4), 6-3 ಸೆಟ್‌ಗಳಿಂದ ಸೋಲಿಸಿ ಮುನ್ನಡೆದಿದ್ದಾರೆ. ತನ್ನ ಜತೆಗಾರ ರೋಹನ್‌ ಬೋಪಣ್ಣ ಜತೆಗೂಡಿ ಅಡಿಲೇಡ್‌ನ‌ಲ್ಲಿ ನಡೆದ ಎಟಿಪಿ ಟೂರ ಪ್ರಶಸ್ತಿ ಜಯಿಸಿದ್ದ ರಾಮ್‌ಕುಮಾರ್‌ ಡಬಲ್ಸ್‌ನಲ್ಲಿ ತನ್ನ ರ್‍ಯಾಂಕಿಂಗನ್ನು ಉತ್ತಮಪಡಿಸಿಕೊಂಡಿದ್ದರು. 27ರ ಹರೆಯದ ರಾಮ್‌ಕುಮಾರ್‌ ಇದೀಗ ನೂರರ ಒಳಗಿನ ರ್‍ಯಾಂಕಿಂಗ್‌ ಹೊಂದಿದ್ದಾರೆ.

ರೋಹನ್‌ ಬೋಪಣ್ಣ ಮತ್ತು ಅವರ ಡಚ್‌ ಜತೆಗಾರ ಮಿಡ್ಡೆಲ್‌ಕೂಪ್‌ ಅವರು ಸ್ಥಳೀಯ ವೈಲ್ಡ್‌ ಕಾರ್ಡ್‌ ಮೂಲಕ ಪ್ರವೇಶ ಪಡೆದ ಗುಯೆಮಾರ್ಡ್‌ ವಯೇನ್‌ಬರ್ಗ್‌ ಮತ್ತುಲುಕಾ ವಾನ್‌ ಅಸಚೆ ಅವರನ್ನು 6-4, 6-1 ಸೆಟ್‌ಗಳಿಂದ ಸೋಲಿಸಿ ಮುನ್ನಡೆದಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.