ಫ್ರೆಂಚ್‌ ಓಪನ್‌ ಡ್ರಾ: ಸೆರೆನಾ-ಶರಪೋವಾ ಮುಖಾಮುಖೀ ಸಾಧ್ಯತೆ


Team Udayavani, May 26, 2018, 6:45 AM IST

serena-sharapova.jpg

ಪ್ಯಾರಿಸ್‌: ಪ್ರತಿಷ್ಠಿತ ಫ್ರೆಂಚ್‌ ಓಪನ್‌ ಟೆನಿಸ್‌ ಪಂದ್ಯಾವಳಿಯ ಡ್ರಾ ನಡೆದಿದ್ದು, 3 ಬಾರಿಯ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ 4ನೇ ಸುತ್ತಿನಲ್ಲಿ ಮರಿಯಾ ಶರಪೋವಾ ಸವಾಲನ್ನು ಎದುರಿಸುವ ಸಾಧ್ಯತೆಯೊಂದು ಕಂಡುಬಂದಿದೆ.

2002, 2013 ಮತ್ತು 2015ರಲ್ಲಿ ಪ್ರಶಸ್ತಿ ಜಯಿಸಿದ ಸೆರೆನಾ ವಿಲಿಯಮ್ಸ್‌ ಮೊದಲ ಸುತ್ತಿನ ಪಂದ್ಯವನ್ನು ಜೆಕ್‌ ಗಣರಾಜ್ಯದ ಕ್ರಿಸ್ಟಿನಾ ಪ್ಲಿಸ್ಕೋವಾ ವಿರುದ್ಧ ಆಡಲಿದ್ದಾರೆ. ಮಾಜಿ ನಂ.1 ಆಟಗಾರ್ತಿ ಸೆರೆನಾ ಈಗ 453ರಷ್ಟು ಕೆಳ ರ್‍ಯಾಂಕಿಂಗ್‌ ಹೊಂದಿದ್ದಾರೆ. 2017ರ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಯ ಬಳಿಕ ಸೆರೆನಾ ಆಡುತ್ತಿರುವ ಮೊದಲ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ ಇದೆಂಬುದು ವಿಶೇಷ.

2012 ಮತ್ತು 2014ರಲ್ಲಿ ರೊಲ್ಯಾಂಡ್‌ ಗ್ಯಾರೋಸ್‌ ಚಾಂಪಿಯನ್‌ ಆಗಿದ್ದ ಮರಿಯಾ ಶರಪೋವಾ 2013ರ ಫೈನಲ್‌ನಲ್ಲಿ ಸೆರೆನಾಗೆ ಸೋತಿದ್ದರು. ಇವರಿಬ್ಬರು 4ನೇ ಸುತ್ತಿನಲ್ಲಿ ಎದುರಾಗಬಹುದೆಂದು ಟೆನಿಸ್‌ ಪಂಡಿತರು ಲೆಕ್ಕ ಹಾಕಿದ್ದಾರೆ. ಶರಪೋವಾ ಇಲ್ಲಿ ಸೆರೆನಾಗೆ ಕೊನೆಯ ಸಲ ಸೋಲುಣಿಸಿದ್ದು 2004ರಲ್ಲಿ. ಆದರೆ ಫ್ರೆಂಚ್‌ ಓಪನ್‌ನಲ್ಲಿ “ಶೆರ್ಪಿ’ ವಿರುದ್ಧ ಸೆರೆನಾ 19-2 ಗೆಲುವಿನ ದಾಖಲೆ ಹೊಂದಿದ್ದಾರೆ. ಇಂಥದೊಂದು ಸಾಧ್ಯತೆಗೂ ಮುನ್ನ ಜೆಕ್‌ ಆಟಗಾರ್ತಿ ಕ್ಯಾರೋಲಿನಾ ಪ್ಲಿಸ್ಕೋವಾ ಅವರನ್ನು ಶರಪೋವಾ ಮಣಿಸಬೇಕಾಗಬಹುದು.

ನಂ.1 ಆಟಗಾರ್ತಿ, 2 ಬಾರಿಯ ರನ್ನರ್‌ ಅಪ್‌ ಸಿಮೋನಾ ಹಾಲೆಪ್‌ ಅಮೆರಿಕದ ಅಲಿಸನ್‌ ರಿಸ್ಕೆ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಇನ್ನೊಂದೆಡೆ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ ಕ್ಯಾರೋಲಿನ್‌ ವೋಜ್ನಿಯಾಕಿ ಅಮೆರಿಕದ ಮತ್ತೋರ್ವ ಆಟಗಾರ್ತಿ ಡೇನಿಯಲ್‌ ಕಾಲಿನ್ಸ್‌ ವಿರುದ್ಧ ಆಡಲಿದ್ದಾರೆ.

ಹಾಕಿ ಚಾಂಪಿಯನ್‌ ಜೆಲೆನಾ ಒಸ್ಟಾಪೆಂಕೊ ಉಕ್ರೇನಿನ ಕ್ಯಾಥತಿನಾ ಕೊಜೊÉàವಾ ವಿರುದ್ಧ ಅಭಿಯಾನ ಆರಂಭಿಸಲಿದ್ದಾರೆ. ದ್ವಿತೀಯ ಸುತ್ತಿನಲ್ಲಿ ವಿಕ್ಟೋರಿಯಾ ಅಜರೆಂಕಾ ಸವಾಲು ಎದುರಾಗಬಹುದು.3ನೇ ಶ್ರೇಯಾಂಕದ ಗಾರ್ಬಿನ್‌ ಮುಗುರುಜಾ ರಶ್ಯದ ಸ್ವೆತ್ಲಾನಾ ಕುಜ್ನೆತ್ಸೋವಾ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡುವರು. ಕುಜ್ನೆತ್ಸೋವಾ 2009ರ ಚಾಂಪಿಯನ್‌ ಆಗಿದ್ದರೆಂಬುದು ವಿಶೇಷ.

ನಡಾಲ್‌-ಡೊಲ್ಗೊಪೊಲೋವ್‌
11ನೇ ರೊಲ್ಯಾಂಡ್‌ ಗ್ಯಾರೋಸ್‌ ಪ್ರಶಸ್ತಿ ಎತ್ತಲು ಕಾತರಗೊಂಸಡಿರುವ ರಫೆಲ್‌ ನಡಾಲ್‌ ಉಕ್ರೇನಿನ ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. ಈ ವರ್ಷ ಈಗಾಗಲೇ ರೋಮ್‌, ಬಾರ್ಸಿಲೋನಾ ಹಾಗೂ ಮಾಂಟೆ ಕಾರ್ಲೊ ಪ್ರಶಸ್ತಿ ಎತ್ತಿರುವ ನಡಾಲ್‌, ಉಕ್ರೇನ್‌ ಆಟಗಾರನೆದುರು 7-2 ಗೆಲುವಿನ ದಾಖಲೆ ಹೊಂದಿದ್ದಾರೆ.

ನಡಾಲ್‌ ಅಭಿಯಾನ ಮುಂದುವರಿಯುತ್ತ ಹೋದರೆ, 3ನೇ ಸುತ್ತಿನಲ್ಲಿ ರಿಚರ್ಡ್‌ ಗಾಸ್ಕ್ವೆಟ್‌, 4ನೇ ಸುತ್ತಿನಲ್ಲಿ ಡೆನ್ನಿಸ್‌ ಶಪೊವಲೋವ್‌ ವಿರುದ್ಧ ಆಡಬೇಕಾದೀತು. ಕ್ವಾರ್ಟರ್‌ ಫೈನಲ್‌ನಲ್ಲಿ ಕೆವಿನ್‌ ಆ್ಯಂಡರ್ಸನ್‌, ಸೆಮಿಫೈನಲ್‌ನಲ್ಲಿ ಮರಿನ್‌ ಸಿಲಿಕ್‌ ಎದುರಾಗುವ ಲೆಕ್ಕಾಚಾರ ಹಾಕಿಕೊಳ್ಳಲಾಗಿದೆ.

ಪ್ಯಾರಿಸ್‌ನಲ್ಲಿ ಈವರೆಗೆ 3ನೇ ಸುತ್ತು ದಾಟದ ಅಲೆಕ್ಸಾಂಡರ್‌ ಜ್ವೆರೇವ್‌ ಲಿಥುವಾನಿಯಾದ ರಿಕಾರ್ಡಿಸ್‌ ಬೆರಂಕಿಸ್‌ ವಿರುದ್ಧ ಮೊದಲ ಸುತ್ತಿನ ಪಂದ್ಯ ಆಡಲಿದ್ದಾರೆ. 2016ರ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌ ಅವರಿಗೆ 4ನೇ ಸುತ್ತಿನಲ್ಲಿ ಗ್ರಿಗರ್‌ ಡಿಮಿಟ್ರೋವ್‌ ಎದುರಾಗಬಹುದು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.