ಒಲಿಂಪಿಕ್ಸ್ ಸಾಧನೆ: ಅಂದು ಕಟ್ಟಿಗೆ ಹೊತ್ತ…ಮೀರಾಬಾಯಿ ಚಾನು ಇಂದು ಬೆಳ್ಳಿಪದಕ ವಿಜೇತೆ

ಚಾನು ಪದಕ ಗೆಲ್ಲುವ ಮೂಲಕ ಭಾರತದ ಪದಕ ಬೇಟೆಗೆ ಚಾಲನೆ ನೀಡಿದ್ದಾರೆ.

Team Udayavani, Jul 24, 2021, 6:11 PM IST

ಒಲಿಂಪಿಕ್ಸ್ ಸಾಧನೆ: ಅಂದು ಕಟ್ಟಿಗೆ ಹೊತ್ತ…ಮೀರಾಬಾಯಿ ಚಾನು ಇಂದು ಬೆಳ್ಳಿಪದಕ ವಿಜೇತೆ

ನವದೆಹಲಿ: ಮಣಿಪುರದ ಇಂಫಾಲ್ ನ ಹಳ್ಳಿಯಲ್ಲಿ ತನ್ನ ಅಣ್ಣಂದಿರ ಜೊತೆಗೆ ಕಾಡಿಗೆ ಕಟ್ಟಿಗೆ ಸಂಗ್ರಹಿಸಲು ಹೋಗುತ್ತಿದ್ದ ಸಂದರ್ಭದಲ್ಲಿ ಚಾನು ತನ್ನ ಅಣ್ಣಂದಿರಿಗೆ ಎತ್ತಲು ಸಾಧ್ಯವಾಗದಷ್ಟು ಭಾರದ ಕಟ್ಟಿಗೆ ಹೊತ್ತು ತರುತ್ತಿದ್ದಳಂತೆ. ಅಬ್ಬಾ…ನಮ್ಮ ತಂಗಿ ಅದೆಷ್ಟು ಬಲಶಾಲಿ ಎಂಬುದು ಅಂದೇ ಅವರಿಗೆ ಮನದಟ್ಟಾಗಿತ್ತು. ಇಂದು ಆ ಖುಷಿಯನ್ನು ಇಮ್ಮಡಿಗೊಳಿಸಿದ ಹೆಮ್ಮೆ ಮೀರಾಬಾಯಿ ಚಾನು ಅವರದ್ದಾಗಿದೆ.

ಇದನ್ನೂ ಓದಿ:ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ: ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಅದಕ್ಕೆ ಸಾಕ್ಷಿಯಾಗಿದ್ದು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ. ನಿರೀಕ್ಷೆಯಂತೆ ಭಾರತದ ಮೀರಾಬಾಯಿ ಚಾನು ಶನಿವಾರ (ಜುಲೈ24) ಬೆಳ್ಳಿಪದಕ ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ 26ರ ಹರೆಯದ ಮೀರಾಬಾಯಿ ಚಾನು ವೆಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ನಂತರ ಭಾರತ ವೇಯ್ಟ್ ಲಿಫ್ಟಿಂಗ್  ವಿಭಾಗದಲ್ಲಿ ಪದಕ ಜಯಿಸಿದಂತಾಗಿದೆ.

ಕರಣಂ ಮಲ್ಲೇಶ್ವರಿ ಅವರ ಬಳಿಕ ಒಲಿಂಪಿಕ್ ನ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಪದಕ ವಿಜೇತೆ ಎಂಬ ಹೆಮ್ಮೆ ಮೀರಾಬಾಯಿ ಚಾನು ಅವರದ್ದಾಗಿದೆ. ಅಲ್ಲದೇ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಚಾನು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಐದು ವರ್ಷಗಳ ಹಿಂದೆಯೇ ರಿಯೋ ಒಲಿಂಪಿಕ್ಸ್ ನಲ್ಲಿಯೇ ಪದಕ ಗೆಲ್ಲುವ ನಿರೀಕ್ಷೆ ಇದ್ದಿತ್ತಾದರೂ ಅದು ಸಾಕಾರಗೊಂಡಿರಲಿಲ್ಲವಾಗಿತ್ತು. ಆದರೆ ಛಲ ಬಿಡದ ಸಾಧನೆ ಇಂದು ಚಾನು ಅವರ ಮುಖದಲ್ಲಿ ಗೆಲುವಿನ ನಗು ಬೀರುವಂತೆ ಮಾಡಿದೆ.

ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾಬಾಯಿ ಚಾನು ವೇಯ್ಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದ ಕೆಲ ಹೊತ್ತಿನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್, ಅಭಿನವ್ ಬಿಂದ್ರಾ ಸೇರಿದಂತೆ ಸಾವಿರಾರು ಮಂದಿ ಟ್ವೀಟ್ ನಲ್ಲಿ ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ.

ಹಳ್ಳಿ ಹುಡುಗಿ ಸಾಧನೆ:

ಮಣಿಪುರದ ಪುಟ್ಟ ಗ್ರಾಮವಾದ ನಾಂಗ್ ಪಾಕ್ ಕಾಕ್ಚಿಂಗ್ ನಲ್ಲಿ ಜನಿಸಿದ್ದ ಮೀರಾಬಾಯಿ ಚಾನು ಕಷ್ಟದಲ್ಲಿಯೇ ಬದುಕು ಸಾಗಿಸಿದ್ದಳು. ಆರು ಮಂದಿ ಮಕ್ಕಳಲ್ಲಿ ಚಾನು ಕಿರಿಯವಳಾಗಿದ್ದಳು. ಆದರೆ ಅಣ್ಣಂದಿರ ಜತೆ ಕಾಡಿಗೆ ಹೋಗಿ ಕಟ್ಟಿಗೆಯನ್ನು ತರುತ್ತಿದ್ದ ಸಂದರ್ಭದಲ್ಲಿ ಈಕೆ ಎಲ್ಲರಿಗಿಂತ ಹೆಚ್ಚು ಭಾರವಾದ ಕಟ್ಟಿಗೆಯನ್ನು ಹೊತ್ತು ತರುತ್ತಿದ್ದಳು.

ಕಾಡಿಗೆ ಹೋಗಿ ತನಗೆ ಬೇಕಾದ ಹಣ್ಣುಗಳನ್ನು ಕಿತ್ತು ತಿನ್ನುವುದು, ಅಡುಗೆ ಮಾಡಲು ಬೇಕಾದ ಉರುವಲು ತರುವುದೆಂದರೆ ಚಾನುಗೆ ಖುಷಿಯ ಕೆಲಸವಾಗಿತ್ತಂತೆ. ಅಷ್ಟೇ ಅಲ್ಲ ಬೆಳೆದು ದೊಡ್ಡವಳಾದ ಮೇಲೆ ಕಾಡಿನಲ್ಲಿ ಒಂದು ವೇಳೆ ಯಾರಿಗಾದರೂ ಕಟ್ಟಿಗೆ ಹೊರೆಯನ್ನು ಎತ್ತಲು ಸಾಧ್ಯವಾಗದಿದ್ದಾಗ, ಮೀರಾಬಾಯಿ ಅದನ್ನು ಸಲೀಸಾಗಿ ಎತ್ತುತ್ತಿದ್ದಳಂತೆ…ಆಗ ಉಳಿದವರು ಓಕೆ..ಓಕೆ…ನೀನು ವೇಯ್ಟ್ ಲಿಫ್ಟರ್ ಎಂದು ತಮಾಷೆ ಮಾಡುತ್ತಿರುವುದಾಗಿ ಸಹೋದರ ಬಿಯೊಂಟ್ ನೆನಪನ್ನು ಮೆಲುಕು ಹಾಕಿರುವುದಾಗಿ ಇಂಡಿಯಾ ಟುಡೇ ವರದಿ ತಿಳಿಸಿದೆ.

ಈ ವಿಷಯ ತಿಳಿದ ತಾಯಿ ಲೈಮಾ ಮಗಳನ್ನು ಕ್ರೀಡಾಪಟುವನ್ನಾಗಿಸುವ ಬಗ್ಗೆ ಕನಸು ಕಂಡಿದ್ದರು. ಹೀಗೆ ಮೀರಾ ವಿದ್ಯಾಭ್ಯಾಸ, ಕ್ರೀಡಾಪಟುವಾಗುವ ಕನಸು ಜತೆ, ಜತೆಯಾಗಿ ಸಾಗುತ್ತಿತ್ತು. ಅದಕ್ಕೆ ನೀರೆರೆದು ಪೋಷಿಸಿದವರು ತಾಯಿ. ಕೊನೆಗೂ ಚಾನು ಸುಮಾರು ಐದು ವರ್ಷಗಳ ಕಠಿಣ ಅಭ್ಯಾಸದ ತರಬೇತಿ ಪಡೆದಿದ್ದರು. 2011ರಲ್ಲಿ ಅಂತಾರಾಷ್ಟ್ರೀಯ ಯೂತ್ ಚಾಂಪಿಯನ್ ಶಿಪ್ ಮತ್ತು ದಕ್ಷಿಣ ಏಷ್ಯಾ ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಚಾನು ಚಿನ್ನದ ಪದಕ ಜಯಿಸಿದ್ದರು. 2014ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ ನಲ್ಲಿ ಚಾನು ಬೆಳ್ಳಿ ಪದಕ ಗೆದ್ದಿದ್ದರು. ತದನಂತರ ರಿಯೋ ಒಲಿಂಪಿಕ್ಸ್ ನಲ್ಲಿ ಪದಕ ಕೈತಪ್ಪಿದ್ದರೂ ಕೂಡಾ ಇದೀಗ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಾನು ಪದಕ ಗೆಲ್ಲುವ ಮೂಲಕ ಭಾರತದ ಪದಕ ಬೇಟೆಗೆ ಚಾಲನೆ ನೀಡಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.