ಬಿಸಿಸಿಐನಲ್ಲಿ ಸೌರವ್ ಗಂಗೂಲಿ ದಾದಾಗಿರಿ: ಅಮಿತ್ ಶಾ ಪುತ್ರ ಕಾರ್ಯದರ್ಶಿ
Team Udayavani, Oct 14, 2019, 11:15 AM IST
ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಚುಕ್ಕಾಣಿ ಹಿಡಿಯುವುದು ಈಗ ಬಹುತೇಕ ಖಚಿತವಾಗಿದೆ.
ಇವರೊಂದಿಗೆ ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ಅವರು ಕಾರ್ಯದರ್ಶಿಯಾಗಿ ಮತ್ತು ಕೇಂದ್ರ ಸಚಿವ, ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಸಹೋದರ ಅರುಣ್ ಧುಮಾಲ್ ಅವರು ಖಜಾಂಚಿಯಾಗಿ ಆಯ್ಕೆಯಾಗಲಿದ್ದಾರೆ.
ಬಿಸಿಸಿಐ ಪದಾಧಿಕಾರಿಗಳ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನಾಂಕವಾಗಿದ್ದು, ಸೌರವ್ ಒಬ್ಬರೇ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅಮಿತ್ ಶಾ, ಅನುರಾಗ್ ಠಾಕೂರ್ ಬೆಂಬಲ ಗಂಗೂಲಿ ಬಣಕ್ಕೆ ಇರುವಿದರಿಂದ ಗಂಗೂಲಿ ಆಯ್ಕೆಯೇ ಖಚಿತ ಎಂದು ವರದಿಯಾಗಿದೆ.
ಕನ್ನಡಿಗ ಬ್ರಿಜೇಶ್ ಪಟೇಲ್ ಐಪಿಎಲ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಹೇಳಿಕೆ ಇನ್ನಷ್ಟೇ ಹೊರಬೀಳಬೇಕಾಗಿದೆ.