ಧನಾತ್ಮಕ ಅಂಶಗಳನ್ನು ಸ್ವೀಕರಿಸಿ: ಗೌತಮ್ ಗಂಭೀರ್ ಸಲಹೆ
Team Udayavani, Dec 25, 2020, 7:59 AM IST
ಹೊಸದಿಲ್ಲಿ: ಭಾರೀ ಒತ್ತಡದಲ್ಲಿರುವ ಭಾರತೀಯ ಕ್ರಿಕೆಟ್ ತಂಡಕ್ಕೆ ಮಾಜಿ ಆರಂಭಕಾರ ಗೌತಮ್ ಗಂಭೀರ್ ಉಪಯುಕ್ತ ಸಲಹೆಯೊಂದನ್ನು ನೀಡಿದ್ದಾರೆ. ಅಡಿಲೇಡ್ ಟೆಸ್ಟ್ ಪಂದ್ಯದ ಕಹಿಯನ್ನು ಬಿಟ್ಟು ಧನಾತ್ಮಕ ಅಂಶಗಳನ್ನು ಸ್ವೀಕರಿಸಿ ಮುನ್ನಡೆಯಿರಿ ಎಂಬ ಸಂದೇಶವನ್ನು ರವಾನಿಸಿದ್ದಾರೆ.
“ಅಡಿಲೇಡ್ ಟೆಸ್ಟ್ ಪಂದ್ಯದ ಮೊದಲೆರಡು ದಿನ ಭಾರತವೇ ಮೇಲುಗೈ ಸಾಧಿಸಿತ್ತು ಎಂಬುದನ್ನು ಮರೆಯಬಾರದು. 53 ರನ್ ಮೊದಲ ಇನ್ನಿಂಗ್ಸ್ ಮುನ್ನಡೆಯೂ ಲಭಿಸಿತ್ತು. ಮೂರನೇ ದಿನದ ಕೇವಲ ಒಂದು ಅವಧಿಯಲ್ಲಿ ತಂಡಕ್ಕೆ ವಿಪರೀತ ಹಾನಿಯಾಯಿತು. ಈ ಸಂಗತಿಯನ್ನು ಬಿಟ್ಟು ಮೊದಲೆರಡು ದಿನಗಳ ಧನಾತ್ಮಕ ಅಂಶಗಳನ್ನು ನಮ್ಮವರು ಸ್ವೀಕರಿಸಬೇಕಿದೆ. ಸರಣಿಯಲ್ಲಿ ಇನ್ನೂ ಮೂರು ಪಂದ್ಯಗಳಿವೆ ಎಂಬುದನ್ನು ಮರೆಯಬಾರದು’ ಎಂದು ಗಂಭೀರ್ “ಕ್ರಿಕೆಟ್ ಕನೆಕ್ಟೆಡ್’ ಕಾರ್ಯಕ್ರಮದಲ್ಲಿ ಹೇಳಿದರು.
ಮೆಲ್ಬೋರ್ನ್ ಟೆಸ್ಟ್ ಪಂದ್ಯ ಶನಿವಾರ (ಡಿ.26) ರಂದು ನಡೆಯಲಿದೆ. ಭಾರತ ತಂಡ ವಿರಾಟ್, ಶಮಿ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಅಜಿಂಕ್ಯ ರಹಾನೆ ತಂಡದ ನಾಯಕನಾಗಿರಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ