ಇದು ಅತ್ಯಂತ ಕೆಟ್ಟ ಅಂಪೈರಿಂಗ್: ಸಿಟ್ಟಾದ ಗೌತಮ್ ಗಂಭೀರ್, ಗ್ರೇಮ್ ಸ್ವಾನ್
Team Udayavani, Oct 2, 2021, 9:43 AM IST
ದುಬೈ: ಐಪಿಎಲ್ ಕೂಟ ದಿನಕ್ಕೊಂದು ರೋಚಕತೆ ಪಡೆಯುತ್ತಿದೆ. ಪ್ರತಿ ಪಂದ್ಯವೂ ರೋಮಾಂಚನಕಾರಿ ತಿರುವು ಪಡೆಯುತ್ತಿದೆ. ಶುಕ್ರವಾರ ನಡೆದ ಕೆಕೆಆರ್ ಮತ್ತು ಪಂಜಾಬ್ ನಡುವೆ ನಡೆದ ಪಂದ್ಯವೂ ಇಂತಹ ಘಟನೆಗಳಿಗೆ ಸಾಕ್ಷಿಯಾಗಿದೆ.
ಈ ಪಂದ್ಯದಲ್ಲಿ ರಾಹುಲ್ ತ್ರಿಪಾಠಿ ಹಿಡಿದ ಕ್ಯಾಚ್ ಇದೀಗ ಚರ್ಚೆಯ ವಿಷಯವಾಗಿದೆ. ಪಂಜಾಬ್ ಗೆಲುವಿಗೆ 9 ಎಸೆತದಲ್ಲಿ 11 ರನ್ ಅವಶ್ಯಕತೆಯಿತ್ತು. ಈ ವೇಳೆ ಪಂಜಾಬ್ ನಾಯಕ ಕೆ.ಎಲ್ ರಾಹುಲ್ ಚೆಂಡನ್ನು ಮಿಡ್ ವಿಕೆಟ್ ಕಡೆಗೆ ಬಾರಿಸಿದರು. ಫೀಲ್ಡರ್ ರಾಹುಲ್ ತ್ರಿಪಾಠಿ ಓಡಿ ಬಂದು ಡೈವ್ ಹಾಕಿ ಚೆಂಡನ್ನು ಹಿಡಿದು ಸಂಭ್ರಮಿಸಿದರು.
ಇದನ್ನೂ ಓದಿ:ಫುಟ್ಬಾಲ್ ದಿಗ್ಗಜ ಮೆಸ್ಸಿ ಹೋಟೆಲ್ ಕೊಠಡಿಗೇ ಕನ್ನ!
ಆದರೆ ಕ್ಯಾಚ್ ಪರಿಶೀಲಿಸಿದ ಥರ್ಡ್ ಅಂಪೈರ್, ಚೆಂಡು ನೆಲ ಸ್ಪರ್ಷಿಸಿದೆ ಎಂದು ನಾಟೌಟ್ ಎಂದು ತೀರ್ಪಿತ್ತರು. ನಂತರ ಪಂಜಾಬ್ ಗೆಲುವು ಸಾಧಿಸಿತು.
ಆದರೆ ಈ ತೀರ್ಪಿನ ವಿರುದ್ಧ ಗೌತಮ್ ಗಂಭೀರ್ ಮತ್ತು ಗ್ರೇಮ್ ಸ್ವಾನ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ ಇದು ನಾನು ನೋಡಿದ ಅತ್ಯಂತ ಕೆಟ್ಟ ಅಂಪೈರಿಂಗ್ ನಿರ್ಧಾರ’ ಎಂದು ಗ್ರೇಮ್ ಸ್ವಾನ್ ಹೇಳಿದ್ದಾರೆ.
ಅವರು ರಿಪ್ಲೇ ಒಂದು ಬಾರಿಗಿಂತ ಹೆಚ್ಚು ನೋಡಿಲ್ಲ. ಒಂದು ವೇಳೆ ಕೆ ಎಲ್ ರಾಹುಲ್ ಔಟಾಗಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು. ಇಂತಹ ಘಟನೆಗಳು ಐಪಿಎಲ್ ನಲ್ಲಿ ಮರುಕಳಿಸಬಾರದು ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್